AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ 7 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

Year Ender 2022: ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Dec 31, 2022 | 8:30 PM

Share
ಒಂದು ತಂಡದಲ್ಲಿ 7 ನಾಯಕರುಗಳು ಇರುತ್ತಾರೆಯೇ? ಆದರೆ 2022ರ ಟೀಮ್ ಇಂಡಿಯಾದ ಸನ್ನಿವೇಶವನ್ನು ಗಮನಿಸಿದರೆ ಯಾಕೆ ಇರಬಾರದಾ ಎಂದು ಕೇಳಬಹುದಷ್ಟೇ. ಏಕೆಂದರೆ ಟೀಮ್ ಇಂಡಿಯಾ  2022 ರಲ್ಲಿ ಬರೋಬ್ಬರಿ 7 ನಾಯಕರುಗಳನ್ನು ಕಣಕ್ಕಳಿಸಿದೆ. ಅಂದರೆ ಟೀಮ್ ಇಂಡಿಯಾವನ್ನು ಒಂದು ವರ್ಷದೊಳಗೆ 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ.

ಒಂದು ತಂಡದಲ್ಲಿ 7 ನಾಯಕರುಗಳು ಇರುತ್ತಾರೆಯೇ? ಆದರೆ 2022ರ ಟೀಮ್ ಇಂಡಿಯಾದ ಸನ್ನಿವೇಶವನ್ನು ಗಮನಿಸಿದರೆ ಯಾಕೆ ಇರಬಾರದಾ ಎಂದು ಕೇಳಬಹುದಷ್ಟೇ. ಏಕೆಂದರೆ ಟೀಮ್ ಇಂಡಿಯಾ 2022 ರಲ್ಲಿ ಬರೋಬ್ಬರಿ 7 ನಾಯಕರುಗಳನ್ನು ಕಣಕ್ಕಳಿಸಿದೆ. ಅಂದರೆ ಟೀಮ್ ಇಂಡಿಯಾವನ್ನು ಒಂದು ವರ್ಷದೊಳಗೆ 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ.

1 / 10
ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಇಂತಹದೊಂದು ಪರ್ವ ಶುರುವಾಗಿತ್ತು. ಏಕೆಂದರೆ ಕಿಂಗ್​ ಕೊಹ್ಲಿ ಇರುವವರೆಗೂ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಆಗಿರಲಿಲ್ಲ. ಆದರೆ ಆ ಬಳಿಕ ತಿಂಗಳುಗಳ ಅಂತರದಲ್ಲಿ, ಅಂದರೆ ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಇಂತಹದೊಂದು ಪರ್ವ ಶುರುವಾಗಿತ್ತು. ಏಕೆಂದರೆ ಕಿಂಗ್​ ಕೊಹ್ಲಿ ಇರುವವರೆಗೂ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಆಗಿರಲಿಲ್ಲ. ಆದರೆ ಆ ಬಳಿಕ ತಿಂಗಳುಗಳ ಅಂತರದಲ್ಲಿ, ಅಂದರೆ ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

2 / 10
1- ವಿರಾಟ್ ಕೊಹ್ಲಿ: ಕಳೆದ ವರ್ಷಾಂತ್ಯದವರೆಗೂ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದದ ಸರಣಿಯೊಂದಿಗೆ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

1- ವಿರಾಟ್ ಕೊಹ್ಲಿ: ಕಳೆದ ವರ್ಷಾಂತ್ಯದವರೆಗೂ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದದ ಸರಣಿಯೊಂದಿಗೆ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

3 / 10
2- ರೋಹಿತ್ ಶರ್ಮಾ: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಖಾಯಂ ನಾಯಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ ಪ್ರಮುಖ ಸರಣಿಗಳಲ್ಲಿ ಹಿಟ್​ಮ್ಯಾನ್ ತಂಡವನ್ನು ಮುನ್ನಡೆಸಿದ್ದರು.

2- ರೋಹಿತ್ ಶರ್ಮಾ: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಖಾಯಂ ನಾಯಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ ಪ್ರಮುಖ ಸರಣಿಗಳಲ್ಲಿ ಹಿಟ್​ಮ್ಯಾನ್ ತಂಡವನ್ನು ಮುನ್ನಡೆಸಿದ್ದರು.

4 / 10
3- ಕೆಎಲ್ ರಾಹುಲ್: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿ ಪದಾರ್ಪಣೆ ಮಾಡಿದ್ದರು.

3- ಕೆಎಲ್ ರಾಹುಲ್: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿ ಪದಾರ್ಪಣೆ ಮಾಡಿದ್ದರು.

5 / 10
4- ರಿಷಬ್ ಪಂತ್: ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಿದ್ದರು.

4- ರಿಷಬ್ ಪಂತ್: ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಿದ್ದರು.

6 / 10
5- ಹಾರ್ದಿಕ್ ಪಾಂಡ್ಯ: ಭಾರತ ತಂಡವು ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕಾರಣ ಐರ್ಲೆಂಡ್​ಗೆ ಮೀಸಲು ಟೀಮ್ ಇಂಡಿಯಾವನ್ನು ಕಳುಹಿಸಲಾಗಿತ್ತು. ಎರಡು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು.

5- ಹಾರ್ದಿಕ್ ಪಾಂಡ್ಯ: ಭಾರತ ತಂಡವು ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕಾರಣ ಐರ್ಲೆಂಡ್​ಗೆ ಮೀಸಲು ಟೀಮ್ ಇಂಡಿಯಾವನ್ನು ಕಳುಹಿಸಲಾಗಿತ್ತು. ಎರಡು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು.

7 / 10
6- ಜಸ್​ಪ್ರೀತ್ ಬುಮ್ರಾ: ಇಂಗ್ಲೆಂಡ್ ವಿರುದ್ದ ನಡೆದ ಏಕೈಕ ಟೆಸ್ಟ್​ ಪಂದ್ಯದಿಂದ ಕೊರೋನಾ ಕಾರಣದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದರು. ಹೀಗಾಗಿ ಭಾರತ ತಂಡವನ್ನು ಜಸ್​ಪ್ರೀತ್ ಬುಮ್ರಾ ಮುನ್ನೆಡೆಸುತ್ತಿದ್ದರು.

6- ಜಸ್​ಪ್ರೀತ್ ಬುಮ್ರಾ: ಇಂಗ್ಲೆಂಡ್ ವಿರುದ್ದ ನಡೆದ ಏಕೈಕ ಟೆಸ್ಟ್​ ಪಂದ್ಯದಿಂದ ಕೊರೋನಾ ಕಾರಣದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದರು. ಹೀಗಾಗಿ ಭಾರತ ತಂಡವನ್ನು ಜಸ್​ಪ್ರೀತ್ ಬುಮ್ರಾ ಮುನ್ನೆಡೆಸುತ್ತಿದ್ದರು.

8 / 10
7- ಶಿಖರ್ ಧವನ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಹೊರಗುಳಿದಿದ್ದರು. ಹೀಗಾಗಿ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಿದ್ದರು.

7- ಶಿಖರ್ ಧವನ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಹೊರಗುಳಿದಿದ್ದರು. ಹೀಗಾಗಿ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಿದ್ದರು.

9 / 10
ಅಂದರೆ 2022 ರಲ್ಲಿ ಬಿಸಿಸಿಐ ಟೀಮ್ ಇಂಡಿಯಾ ಪರ ಒಟ್ಟು 7 ಕ್ಯಾಪ್ಟನ್​ಗಳನ್ನು ಕಣಕ್ಕಿಳಿಸಿ ಹೊಸ ದಾಖಲೆ ಬರೆದಿದೆ. ಇದಕ್ಕೂ ಮುನ್ನ 1959 ರಲ್ಲಿಯೂ ಭಾರತ ಟೆಸ್ಟ್​ ತಂಡವನ್ನು 5 ಆಟಗಾರರು ಮುನ್ನಡೆಸಿದ್ದರು. ಆದರೆ 2022 ರಲ್ಲಿ ಒಟ್ಟು 7 ಆಟಗಾರರು ಭಾರತ ತಂಡದ ನಾಯಕರಾಗಿ ಕಾಣಿಸಿಕೊಂಡಿರುವುದು ವಿಶೇಷ.

ಅಂದರೆ 2022 ರಲ್ಲಿ ಬಿಸಿಸಿಐ ಟೀಮ್ ಇಂಡಿಯಾ ಪರ ಒಟ್ಟು 7 ಕ್ಯಾಪ್ಟನ್​ಗಳನ್ನು ಕಣಕ್ಕಿಳಿಸಿ ಹೊಸ ದಾಖಲೆ ಬರೆದಿದೆ. ಇದಕ್ಕೂ ಮುನ್ನ 1959 ರಲ್ಲಿಯೂ ಭಾರತ ಟೆಸ್ಟ್​ ತಂಡವನ್ನು 5 ಆಟಗಾರರು ಮುನ್ನಡೆಸಿದ್ದರು. ಆದರೆ 2022 ರಲ್ಲಿ ಒಟ್ಟು 7 ಆಟಗಾರರು ಭಾರತ ತಂಡದ ನಾಯಕರಾಗಿ ಕಾಣಿಸಿಕೊಂಡಿರುವುದು ವಿಶೇಷ.

10 / 10
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್