- Kannada News Photo gallery Cricket photos Yuvraj Singh's Father Yograj Singh Booked for Controversial Web Series Dialogue
ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು
Yograj Singh controversy:ಭಾರತದ ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ ವೆಬ್ ಸರಣಿಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಚಂಡೀಗಢ ಪೊಲೀಸರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆದ ನಂತರ ಐಪಿಸಿ ಮತ್ತು ಐಟಿ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಯೋಗರಾಜ್ ಸಿಂಗ್ ಅವರ ಮೊದಲ ವಿವಾದವಲ್ಲ, ಹಿಂದೆ ಕೂಡ ಅವರು ಧೋನಿ ವಿರುದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Updated on: May 15, 2026 | 4:07 PM

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೆಬ್ ಸರಣಿಯೊಂದರ ಸಂಭಾಷಣೆಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವರದಿ ಪ್ರಕಾರ, ವೆಬ್ ಸರಣಿಯ ವೀಡಿಯೊ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಯೋಗರಾಜ್ ಸಿಂಗ್ ಪಾತ್ರವು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂವಾದದ ಸಮಯದಲ್ಲಿ, ಅವರು ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಸೆಕ್ಟರ್ 36 ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 79 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಕಾಯ್ದೆ), 2000 ರ ಸೆಕ್ಷನ್ 62-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಯೋಗರಾಜ್ ಸಿಂಗ್ ಈ ರೀತಿಯಾಗಿ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ಅವರು ಹಿಂದೆಯೂ ಸಾರ್ವಜನಿಕ ವೇದಿಕೆಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಧೋನಿ ಬಗ್ಗೆ ಆಗಾಗ್ಗೆ ನಾಲಿಗೆ ಹರಿಬಿಡುವ ಯೋಗರಾಜ್ ಸಿಂಗ್ ತನ್ನ ಮಗ ಯುವರಾಜ್ ಸಿಂಗ್ ಕ್ರಿಕೆಟ್ ಭವಿಷ್ಯ ಅಂತ್ಯಗೊಳ್ಳಲು ಧೋನಿಯೇ ಕಾರಣ ಎಂದು ಬಹಿರಂಗ ಹೇಳಿಕೆ ನೀಡಿ ದೊಡ್ಡ ವಿವಾದಕ್ಕೆ ಸಿಲುಕಿದ್ದರು.

ಇನ್ನು ಯೋಗರಾಜ್ ಸಿಂಗ್ ಭಾರತದ ಮಾಜಿ ಕ್ರಿಕೆಟಿಗರು ಆಗಿದ್ದು, ಭಾರತ ಪರ ಒಂದು ಟೆಸ್ಟ್ ಪಂದ್ಯ ಮತ್ತು ಆರು ಏಕದಿನ ಪಂದ್ಯಗಳನ್ನು ಸಹ ಆಡಿದ್ದಾರೆ. ಟೆಸ್ಟ್ ನಲ್ಲಿ ಒಂದು ವಿಕೆಟ್ ಮತ್ತು ಏಕದಿನ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ. ನಿವೃತ್ತಿಯ ಬಳಿಕ ಅವರು ಕ್ರಿಕೆಟ್ ತರಬೇತುದಾರರಾಗುವುದರ ಜೊತೆಗೆ, ಚಲನಚಿತ್ರಗಳಲ್ಲಿಯೂ ಕೆಲಸ ಮಾಡುತ್ತಾರೆ. ಅವರು ಹಲವಾರು ಪಂಜಾಬಿ ಮತ್ತು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಈಗ ವೆಬ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More




