AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Records: ಯಂಗ್ ಶತಕ ವೀರರ ಪಟ್ಟಿಗೆ ಶುಭ್​ಮನ್ ಗಿಲ್ ಎಂಟ್ರಿ

Team India Records: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on:Feb 02, 2023 | 8:30 PM

Share
ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1 / 6
ಅಷ್ಟೇ ಅಲ್ಲದೆ ಇನಿಂಗ್ಸ್​ನ ಅಂತ್ಯದವರೆಗೂ ಬ್ಯಾಟ್ ಬೀಸಿದ್ದ ಯುವ ದಾಂಡಿಗ 63 ಎಸೆತಗಳಲ್ಲಿ 7 ಸಿಡಿಲಬ್ಬರದ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಚಚ್ಚಿದ್ದರು. ಇದರೊಂದಿಗೆ ಹಲವು ದಾಖಲೆಗಳು ಗಿಲ್ ಪಾಲಾಯಿತು. ಅದರಲ್ಲೂ ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಕಿರಿಯ ಆಟಗಾರ ಎನಿಸಿಕೊಂಡರು.

ಅಷ್ಟೇ ಅಲ್ಲದೆ ಇನಿಂಗ್ಸ್​ನ ಅಂತ್ಯದವರೆಗೂ ಬ್ಯಾಟ್ ಬೀಸಿದ್ದ ಯುವ ದಾಂಡಿಗ 63 ಎಸೆತಗಳಲ್ಲಿ 7 ಸಿಡಿಲಬ್ಬರದ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಚಚ್ಚಿದ್ದರು. ಇದರೊಂದಿಗೆ ಹಲವು ದಾಖಲೆಗಳು ಗಿಲ್ ಪಾಲಾಯಿತು. ಅದರಲ್ಲೂ ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಕಿರಿಯ ಆಟಗಾರ ಎನಿಸಿಕೊಂಡರು.

2 / 6
ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 6
ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾ ಪರ 17ನೇ ವಯಸ್ಸಿನಲ್ಲೇ ಶತಕ ಸಿಡಿಸಿದ್ದರು. 1990 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಚಿನ್ ಅಜೇಯ 119 ರನ್​ ಬಾರಿಸಿದ್ದರು. ಅಂದು ಸಚಿನ್ ಅವರ ವಯಸ್ಸು 17 ವರ್ಷ 107 ದಿನಗಳು ಮಾತ್ರ. ಇದರೊಂದಿಗೆ ಭಾರತದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಪಾಲಾಯಿತು. 22 ವರ್ಷಗಳು ಕಳೆದರೂ ಭಾರತದ ಯಾವುದೇ ಆಟಗಾರನಿಗೆ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದೇ ವಿಶೇಷ.

ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾ ಪರ 17ನೇ ವಯಸ್ಸಿನಲ್ಲೇ ಶತಕ ಸಿಡಿಸಿದ್ದರು. 1990 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಚಿನ್ ಅಜೇಯ 119 ರನ್​ ಬಾರಿಸಿದ್ದರು. ಅಂದು ಸಚಿನ್ ಅವರ ವಯಸ್ಸು 17 ವರ್ಷ 107 ದಿನಗಳು ಮಾತ್ರ. ಇದರೊಂದಿಗೆ ಭಾರತದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಪಾಲಾಯಿತು. 22 ವರ್ಷಗಳು ಕಳೆದರೂ ಭಾರತದ ಯಾವುದೇ ಆಟಗಾರನಿಗೆ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದೇ ವಿಶೇಷ.

4 / 6
ವಿನೋದ್ ಕಾಂಬ್ಳಿ: ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ಎಡಗೈ ದಾಂಡಿಗ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿನೋದ್ ಕಾಂಬ್ಳಿ ಅಜೇಯ 100 ರನ್​ ಬಾರಿಸಿದ್ದರು. ಅಂದು ಕಾಂಬ್ಳಿಯ ವಯಸ್ಸು ಕೇವಲ 21 ವರ್ಷ ಮಾತ್ರ. ವಿಶೇಷ ಎಂದರೆ ವಿನೋದ್ ಕಾಂಬ್ಳಿ ತಮ್ಮ ಜನ್ಮದಿನದಂದೇ ಈಗ ದಾಖಲೆ ಬರೆದಿದ್ದರು.

ವಿನೋದ್ ಕಾಂಬ್ಳಿ: ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ಎಡಗೈ ದಾಂಡಿಗ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿನೋದ್ ಕಾಂಬ್ಳಿ ಅಜೇಯ 100 ರನ್​ ಬಾರಿಸಿದ್ದರು. ಅಂದು ಕಾಂಬ್ಳಿಯ ವಯಸ್ಸು ಕೇವಲ 21 ವರ್ಷ ಮಾತ್ರ. ವಿಶೇಷ ಎಂದರೆ ವಿನೋದ್ ಕಾಂಬ್ಳಿ ತಮ್ಮ ಜನ್ಮದಿನದಂದೇ ಈಗ ದಾಖಲೆ ಬರೆದಿದ್ದರು.

5 / 6
ಶುಭ್​ಮನ್ ಗಿಲ್: 23 ವರ್ಷದ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ ಕೇವಲ 54 ಎಸೆತಗಳಲ್ಲಿ ಚೊಚ್ಚಲ ಟಿ20 ಶತಕ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಭಾರತದ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

ಶುಭ್​ಮನ್ ಗಿಲ್: 23 ವರ್ಷದ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ ಕೇವಲ 54 ಎಸೆತಗಳಲ್ಲಿ ಚೊಚ್ಚಲ ಟಿ20 ಶತಕ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಭಾರತದ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

6 / 6

Published On - 8:29 pm, Thu, 2 February 23

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು