Yuzvendra Chahal: ಆರ್​ಸಿಬಿ vs ಮುಂಬೈ ಪಂದ್ಯದ ಮಧ್ಯೆ ಸುದ್ದಿಯಾಗದೆ ಹೋಯ್ತು ಯುಜ್ವೇಂದ್ರ ಚಹಲ್ ನಿರ್ಮಿಸಿದ ಇತಿಹಾಸ

SRH vs RR, IPL 2023: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 72 ರನ್​ಗಳ ಭರ್ಜರಿ ಜಯ ಸಾಧಿಸಿತು. ಆರ್​ಆರ್​ ಸ್ಪಿನ್ನರ್ ಯುಜ್ವೇಂದ್ರ ಚಹಲ್ 4 ವಿಕೆಟ್ ಕಿತ್ತು ಮಿಂಚಿದರು. ಇದರ ಜೊತೆಗೆ ಇತಿಹಾಸ ನಿರ್ಮಿಸಿದರು.

|

Updated on:Apr 03, 2023 | 11:33 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ, ಎಲ್ಲರ ಕಣ್ಣಿದ್ದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದ ಮೇಲೆ. ಇದಕ್ಕೂ ಮುನ್ನ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯ ಅಷ್ಟೊಂದು ಹೈಪ್ ಕ್ರಿಯೆಟ್ ಮಾಡಿರಲಿಲ್ಲ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ, ಎಲ್ಲರ ಕಣ್ಣಿದ್ದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದ ಮೇಲೆ. ಇದಕ್ಕೂ ಮುನ್ನ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯ ಅಷ್ಟೊಂದು ಹೈಪ್ ಕ್ರಿಯೆಟ್ ಮಾಡಿರಲಿಲ್ಲ.

1 / 8
ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ 200ಕ್ಕೂ ಅಧಿಕ ರನ್ ಕಲೆಹಾಕಿ 72 ರನ್​ಗಳ ಭರ್ಜರಿ ಜಯ ಸಾಧಿಸಿತು. ಆರ್​ಆರ್​ ಸ್ಪಿನ್ನರ್ ಯುಜ್ವೇಂದ್ರ ಚಹಲ್ 4 ಓವರ್ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದರು. ಇದರ ಜೊತೆಗೆ ಇತಿಹಾಸ ನಿರ್ಮಿಸಿದರು.

ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ 200ಕ್ಕೂ ಅಧಿಕ ರನ್ ಕಲೆಹಾಕಿ 72 ರನ್​ಗಳ ಭರ್ಜರಿ ಜಯ ಸಾಧಿಸಿತು. ಆರ್​ಆರ್​ ಸ್ಪಿನ್ನರ್ ಯುಜ್ವೇಂದ್ರ ಚಹಲ್ 4 ಓವರ್ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದರು. ಇದರ ಜೊತೆಗೆ ಇತಿಹಾಸ ನಿರ್ಮಿಸಿದರು.

2 / 8
ಹೈದರಾಬಾದ್ ವಿರುದ್ಧ 4 ವಿಕೆಟ್​ಗಳನ್ನು ಕಬಳಿಸುವ ಮೂಲಕ ಯುಜ್ವೇಂದ್ರ ಚಹಲ್ ಟಿ20 ಮಾದರಿಯ ಕ್ರಿಕೆಟ್​ನಲ್ಲಿ 300 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊಟ್ಟ ಮೊದಲ ಭಾರತೀಯ ಬೌಲರ್​ ಎನಿಸಿಕೊಂಡರು. ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಯಾವ ಭಾರತೀಯ ಬೌಲರ್ ಕೂಡ 300 ವಿಕೆಟ್ ಪಡೆದ ಸಾಧನೆ ಮಾಡಿಲ್ಲ.

ಹೈದರಾಬಾದ್ ವಿರುದ್ಧ 4 ವಿಕೆಟ್​ಗಳನ್ನು ಕಬಳಿಸುವ ಮೂಲಕ ಯುಜ್ವೇಂದ್ರ ಚಹಲ್ ಟಿ20 ಮಾದರಿಯ ಕ್ರಿಕೆಟ್​ನಲ್ಲಿ 300 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊಟ್ಟ ಮೊದಲ ಭಾರತೀಯ ಬೌಲರ್​ ಎನಿಸಿಕೊಂಡರು. ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಯಾವ ಭಾರತೀಯ ಬೌಲರ್ ಕೂಡ 300 ವಿಕೆಟ್ ಪಡೆದ ಸಾಧನೆ ಮಾಡಿಲ್ಲ.

3 / 8
ತನ್ನ 265ನೇ ಟಿ20 ಪಂದ್ಯದಲ್ಲಿ ಚಹಾಲ್ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಇವರ ಖಾತೆಯಲ್ಲಿ 303 ಟಿ20 ವಿಕೆಟ್​ಗಳಿವೆ. ಒಟ್ಟಾರೆಯಾಗಿ ಟಿ20 ಕ್ರಿಕೆಟ್​ನಲ್ಲಿ 300+ ವಿಕೆಟ್ ಪಡೆದವರ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದ್ದಾರೆ.

ತನ್ನ 265ನೇ ಟಿ20 ಪಂದ್ಯದಲ್ಲಿ ಚಹಾಲ್ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಇವರ ಖಾತೆಯಲ್ಲಿ 303 ಟಿ20 ವಿಕೆಟ್​ಗಳಿವೆ. ಒಟ್ಟಾರೆಯಾಗಿ ಟಿ20 ಕ್ರಿಕೆಟ್​ನಲ್ಲಿ 300+ ವಿಕೆಟ್ ಪಡೆದವರ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದ್ದಾರೆ.

4 / 8
ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಈವರೆಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ಆಗಿದ್ದಾರೆ. ಇವರು ಬರೋಬ್ಬರಿ 558 ವಿಕೆಟ್  ತಮ್ಮದಾಗಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ 530 ವಿಕೆಟ್ ಕಿತ್ತು ರಶೀದ್ ಖಾನ್ ಇದ್ದಾರೆ.

ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಈವರೆಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ಆಗಿದ್ದಾರೆ. ಇವರು ಬರೋಬ್ಬರಿ 558 ವಿಕೆಟ್ ತಮ್ಮದಾಗಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ 530 ವಿಕೆಟ್ ಕಿತ್ತು ರಶೀದ್ ಖಾನ್ ಇದ್ದಾರೆ.

5 / 8
ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಸ್ಫೋಟಕ ಆರಂಭ ಪಡೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಮೊದಲ ವಿಕೆಟ್​ಗೆ ಕೇವಲ 5.5 ಓವರ್​ನಲ್ಲಿ 85 ರನ್ ಕಲೆಹಾಕಿದರು. ಬಟ್ಲರ್ ಕೇವಲ 22 ಎಸೆತಗಳಲ್ಲಿ 54 ರನ್ ಚಚ್ಚಿದರು.

ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಸ್ಫೋಟಕ ಆರಂಭ ಪಡೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಮೊದಲ ವಿಕೆಟ್​ಗೆ ಕೇವಲ 5.5 ಓವರ್​ನಲ್ಲಿ 85 ರನ್ ಕಲೆಹಾಕಿದರು. ಬಟ್ಲರ್ ಕೇವಲ 22 ಎಸೆತಗಳಲ್ಲಿ 54 ರನ್ ಚಚ್ಚಿದರು.

6 / 8
ನಂತರ ನಾಯಕ ಸಂಜು ಸ್ಯಾಮ್ಸನ್ ಜೊತೆಯಾದ ಜೈಸ್ವಾಲ್ ಬಿರುಸಿನ ಆಟ ಪ್ರದರ್ಶಿಸಿದರು. ಜೈಸ್ವಾಲ್ 37 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಸ್ಯಾಮ್ಸನ್ 32 ಎಸೆತಗಳಲ್ಲಿ 55 ರನ್ ಗಳಿಸಿದರು. ಹೆಟ್ಮೇರ್ ಅಜೇಯ 22 ರನ್ ಕಲೆಹಾಕಿದರು. ಆರ್​ಆರ್​ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತು.

ನಂತರ ನಾಯಕ ಸಂಜು ಸ್ಯಾಮ್ಸನ್ ಜೊತೆಯಾದ ಜೈಸ್ವಾಲ್ ಬಿರುಸಿನ ಆಟ ಪ್ರದರ್ಶಿಸಿದರು. ಜೈಸ್ವಾಲ್ 37 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಸ್ಯಾಮ್ಸನ್ 32 ಎಸೆತಗಳಲ್ಲಿ 55 ರನ್ ಗಳಿಸಿದರು. ಹೆಟ್ಮೇರ್ ಅಜೇಯ 22 ರನ್ ಕಲೆಹಾಕಿದರು. ಆರ್​ಆರ್​ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತು.

7 / 8
ಟಾರ್ಗೆಟ್ ಬೆನ್ನಟ್ಟಿದ ಸನ್​ರೈಸರ್ಸ್ ಆರಂಭದಿಂದ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಅಬ್ದುಲ್ ಸಮದ್ ಅಜೇಯ 32 ಮತ್ತು ಮಯಾಂಕ್ ಅಗರ್ವಾಲ್ 27 ರನ್ ಗಳಿಸಿದ್ದೇ ಹೆಚ್ಚು. ಹೈದರಾಬಾದ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.

ಟಾರ್ಗೆಟ್ ಬೆನ್ನಟ್ಟಿದ ಸನ್​ರೈಸರ್ಸ್ ಆರಂಭದಿಂದ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಅಬ್ದುಲ್ ಸಮದ್ ಅಜೇಯ 32 ಮತ್ತು ಮಯಾಂಕ್ ಅಗರ್ವಾಲ್ 27 ರನ್ ಗಳಿಸಿದ್ದೇ ಹೆಚ್ಚು. ಹೈದರಾಬಾದ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.

8 / 8

Published On - 11:33 am, Mon, 3 April 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ