Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ರೈಲು ಅಪಘಾತ ಸಂತ್ರಸ್ತರಿಗೆ 1 ಲಕ್ಷ ರೂ. ನೀಡಿದ ಚಹಾಲ್

Yuzvendra Chahal: ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯುಜ್ವೇಂದ್ರ ಚಹಾಲ್ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 06, 2023 | 9:22 PM

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

1 / 7
ಪ್ರಸಿದ್ಧ ಆನ್​ಲೈನ್ ಗೇಮಿಂಗ್ ತಂಡ S8ulesports ಇತ್ತೀಚೆಗೆ  ಯೂಟ್ಯೂಬ್‌ ಲೈವ್ ಸ್ಟ್ರೀಮ್ ಮೂಲಕ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್​ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.

ಪ್ರಸಿದ್ಧ ಆನ್​ಲೈನ್ ಗೇಮಿಂಗ್ ತಂಡ S8ulesports ಇತ್ತೀಚೆಗೆ ಯೂಟ್ಯೂಬ್‌ ಲೈವ್ ಸ್ಟ್ರೀಮ್ ಮೂಲಕ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್​ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.

2 / 7
ಇನ್ನು ಚಹಾಲ್ ಅವರ ಈ ಮಾನವೀಯ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಚಹಾಲ್ ಅವರು ನೀಡಿದ ದೇಣಿಗೆ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಇನ್ನು ಚಹಾಲ್ ಅವರ ಈ ಮಾನವೀಯ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಚಹಾಲ್ ಅವರು ನೀಡಿದ ದೇಣಿಗೆ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

3 / 7
ಟೀಮ್ ಇಂಡಿಯಾ ಆಟಗಾರನಾಗಿರುವ ಯುಜ್ವೇಂದ್ರ ಚಹಾಲ್ ನೀಡಿದ ಮೊತ್ತ ತುಂಬಾ ಕಡಿಮೆ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಕೊಡುವ ಮನಸ್ಸಿದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟೀಮ್ ಇಂಡಿಯಾ ಆಟಗಾರನಾಗಿರುವ ಯುಜ್ವೇಂದ್ರ ಚಹಾಲ್ ನೀಡಿದ ಮೊತ್ತ ತುಂಬಾ ಕಡಿಮೆ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಕೊಡುವ ಮನಸ್ಸಿದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 7
ಕೇವಲ ಐಪಿಎಲ್​ನಿಂದಲೇ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿರುವ ಯುಜ್ವೇಂದ್ರ ಚಹಾಲ್ ಅವರ ಕಡೆಯಿಂದ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಮತ್ತಷ್ಟು ನೆರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಕೇವಲ ಐಪಿಎಲ್​ನಿಂದಲೇ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿರುವ ಯುಜ್ವೇಂದ್ರ ಚಹಾಲ್ ಅವರ ಕಡೆಯಿಂದ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಮತ್ತಷ್ಟು ನೆರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

5 / 7
ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

6 / 7
ಈ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್​ ಸ್ಕೂಲ್‌​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್​ ಸ್ಕೂಲ್‌​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

7 / 7
Follow us
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು