AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

Yuzvendra Chahal's Major Sacrifice: ಭಾರತದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಕಳಪೆ ಫಾರ್ಮ್‌ನಿಂದಾಗಿ ವೃತ್ತಿಜೀವನ ಉಳಿಸಿಕೊಳ್ಳಲು ಮಹಾತ್ಯಾಗ ಮಾಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಮದ್ಯಪಾನಕ್ಕೆ ದಾಸರಾಗಿದ್ದ ಚಹಾಲ್, ಇದೀಗ ಅದನ್ನು ಸಂಪೂರ್ಣ ತ್ಯಜಿಸಿದ್ದಾರೆ. 35ನೇ ವಯಸ್ಸಿನಲ್ಲಿ ದೇಹದ ಮೇಲೆ ಹೆಚ್ಚು ಗಮನ ಹರಿಸಲು, ತಂಡಕ್ಕೆ ಶೇ.150 ಕೊಡುಗೆ ನೀಡಲು ಮತ್ತು ಇತರರಿಗೆ ಮಾದರಿಯಾಗಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಈ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2026 | 6:35 PM

Share
ಯುಜ್ವೇಂದ್ರ ಚಾಹಲ್ ಕೆಲವು ವರ್ಷಗಳ ಹಿಂದೆ ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದವರು. ಆದರೆ ಕಳಪೆ ಫಾರ್ಮ್​ಗೆ ಸಿಲುಕಿದ ಚಾಹಲ್​ಗೆ ಆ ಬಳಿಕ ಮತ್ತೊಂದು ಅವಕಾಶವೆನ್ನುವುದು ಸಿಗಲೇ ಇಲ್ಲ. ಪ್ರಸ್ತುತ ಐಪಿಎಲ್‌ನಲ್ಲಿ ಮಾತ್ರ ಆಡುತ್ತಿರುವ ಚಾಹಲ್, ಇದೀಗ ಆ ವೃತ್ತಿಜೀವನವನ್ನಾದರೂ ಉಳಿಸಿಕೊಳ್ಳುವ ಸಲುವಾಗಿ ಮಹಾತ್ಯಾಗವೊಂದನ್ನು ಮಾಡಿದ್ದಾರೆ.

ಯುಜ್ವೇಂದ್ರ ಚಾಹಲ್ ಕೆಲವು ವರ್ಷಗಳ ಹಿಂದೆ ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದವರು. ಆದರೆ ಕಳಪೆ ಫಾರ್ಮ್​ಗೆ ಸಿಲುಕಿದ ಚಾಹಲ್​ಗೆ ಆ ಬಳಿಕ ಮತ್ತೊಂದು ಅವಕಾಶವೆನ್ನುವುದು ಸಿಗಲೇ ಇಲ್ಲ. ಪ್ರಸ್ತುತ ಐಪಿಎಲ್‌ನಲ್ಲಿ ಮಾತ್ರ ಆಡುತ್ತಿರುವ ಚಾಹಲ್, ಇದೀಗ ಆ ವೃತ್ತಿಜೀವನವನ್ನಾದರೂ ಉಳಿಸಿಕೊಳ್ಳುವ ಸಲುವಾಗಿ ಮಹಾತ್ಯಾಗವೊಂದನ್ನು ಮಾಡಿದ್ದಾರೆ.

1 / 5
ವೃತ್ತಿಜೀವನದಂತೆ ಯುಜ್ವೇಂದ್ರ ಚಾಹಲ್ ಅವರ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಹೀಗಾಗಿ ಮದ್ಯಪಾನದ ಹಿಂದೆ ಬಿದ್ದಿದ್ದ  ಚಾಹಲ್ ಇದೀಗ ಅದಕ್ಕೆಲ್ಲ ಗುಡ್​ ಬೈ ಹೇಳಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಚಾಹಲ್, ಐಪಿಎಲ್ ಆರಂಭಕ್ಕೂ ಮುನ್ನ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ವೃತ್ತಿಜೀವನದಂತೆ ಯುಜ್ವೇಂದ್ರ ಚಾಹಲ್ ಅವರ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಹೀಗಾಗಿ ಮದ್ಯಪಾನದ ಹಿಂದೆ ಬಿದ್ದಿದ್ದ ಚಾಹಲ್ ಇದೀಗ ಅದಕ್ಕೆಲ್ಲ ಗುಡ್​ ಬೈ ಹೇಳಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಚಾಹಲ್, ಐಪಿಎಲ್ ಆರಂಭಕ್ಕೂ ಮುನ್ನ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

2 / 5
ಈ ಹಿಂದೆ ಐಪಿಎಲ್‌ನಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಯುಜ್ವೇಂದ್ರ ಚಾಹಲ್ ಆರ್​ಸಿಬಿ ತಂಡದ ಪರ ಆಡಿದ್ದರು. ಇದೀಗ ಡಿವಿಲಿಯರ್ಸ್​ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಚಾಹಲ್ ನಾನು ಮದ್ಯಪಾನ ತ್ಯಜಿಸಿ 6 ತಿಂಗಳಿಗೂ ಹೆಚ್ಚು ಸಮಯವಾಗಿದೆ ಎಂದಿದ್ದಾರೆ. ಮದ್ಯಪಾನವನ್ನು ತ್ಯಜಿಸಿದ್ದು ಏಕೆ ಎಂತಲೂ ಚಾಹಲ್ ಬಹಿರಂಗಪಡಿಸಿದ್ದಾರೆ.

ಈ ಹಿಂದೆ ಐಪಿಎಲ್‌ನಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಯುಜ್ವೇಂದ್ರ ಚಾಹಲ್ ಆರ್​ಸಿಬಿ ತಂಡದ ಪರ ಆಡಿದ್ದರು. ಇದೀಗ ಡಿವಿಲಿಯರ್ಸ್​ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಚಾಹಲ್ ನಾನು ಮದ್ಯಪಾನ ತ್ಯಜಿಸಿ 6 ತಿಂಗಳಿಗೂ ಹೆಚ್ಚು ಸಮಯವಾಗಿದೆ ಎಂದಿದ್ದಾರೆ. ಮದ್ಯಪಾನವನ್ನು ತ್ಯಜಿಸಿದ್ದು ಏಕೆ ಎಂತಲೂ ಚಾಹಲ್ ಬಹಿರಂಗಪಡಿಸಿದ್ದಾರೆ.

3 / 5
ಈ ವರ್ಷದ ಆರಂಭದಿಂದ ನಾನು ನನ್ನ ದೇಹದ ಬಗ್ಗೆ ಹೆಚ್ಚು ಗಮನ ಹರಿಸಲು ನಿರ್ಧರಿಸಿದ್ದೇನೆ. ನನಗೀಗ 35 ವರ್ಷ. ಹೀಗಾಗಿ ನಾನು ಹೆಚ್ಚು ಸಕ್ರಿಯವಾಗಿರಲು ಬಯಸುತ್ತೇನೆ ಮತ್ತು ತಂಡಕ್ಕಾಗಿ ನಾನು ಶೇಕಡಾ 150 ರಷ್ಟು ನೀಡಲು ಬಯಸುತ್ತೇನೆ. ಹಿರಿಯ ಆಟಗಾರನಾಗಿ, ಇತರರು ನನ್ನಿಂದ ಏನನ್ನಾದರೂ ಕಲಿಯಬಹುದು ಎಂಬ ಭಾವನೆ ಮೂಡಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.

ಈ ವರ್ಷದ ಆರಂಭದಿಂದ ನಾನು ನನ್ನ ದೇಹದ ಬಗ್ಗೆ ಹೆಚ್ಚು ಗಮನ ಹರಿಸಲು ನಿರ್ಧರಿಸಿದ್ದೇನೆ. ನನಗೀಗ 35 ವರ್ಷ. ಹೀಗಾಗಿ ನಾನು ಹೆಚ್ಚು ಸಕ್ರಿಯವಾಗಿರಲು ಬಯಸುತ್ತೇನೆ ಮತ್ತು ತಂಡಕ್ಕಾಗಿ ನಾನು ಶೇಕಡಾ 150 ರಷ್ಟು ನೀಡಲು ಬಯಸುತ್ತೇನೆ. ಹಿರಿಯ ಆಟಗಾರನಾಗಿ, ಇತರರು ನನ್ನಿಂದ ಏನನ್ನಾದರೂ ಕಲಿಯಬಹುದು ಎಂಬ ಭಾವನೆ ಮೂಡಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.

4 / 5
 ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿರುವ ಚಾಹಲ್, ಕಳೆದ ಬಾರಿ ಫೈನಲ್‌ನಲ್ಲಿ ಸೋತ ಬಗ್ಗೆಯೂ ಮಾತನಾಡಿದರು. ಮಾರ್ಕೊ ಯಾನ್ಸೆನ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಒಂದು ವೇಳೆ ಯಾನ್ಸೆನ್ ಫೈನಲ್ ಆಡಿದ್ದರೆ, ನಮ್ಮ ತಂಡ ಗೆಲ್ಲುತ್ತಿತ್ತು ಎಂದು ಚಾಹಲ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿರುವ ಚಾಹಲ್, ಕಳೆದ ಬಾರಿ ಫೈನಲ್‌ನಲ್ಲಿ ಸೋತ ಬಗ್ಗೆಯೂ ಮಾತನಾಡಿದರು. ಮಾರ್ಕೊ ಯಾನ್ಸೆನ್ ಫೈನಲ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಒಂದು ವೇಳೆ ಯಾನ್ಸೆನ್ ಫೈನಲ್ ಆಡಿದ್ದರೆ, ನಮ್ಮ ತಂಡ ಗೆಲ್ಲುತ್ತಿತ್ತು ಎಂದು ಚಾಹಲ್ ಹೇಳಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?