Yuzvendra Chahal: ಮತ್ತೆ 5 ವಿಕೆಟ್ ಕಬಳಿಸಿ ಮಿಂಚಿದ ಚಹಲ್

Yuzvendra Chahal: ಇಂಗ್ಲೆಂಡ್​ನಲ್ಲಿ ನಡೆದ ಒನ್ ಡೇ ಕಪ್ ಟೂರ್ನಿಯಲ್ಲಿ ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಯುಜ್ವೇಂದ್ರ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್ ಪಂದ್ಯದಲ್ಲೂ ಚಹಲ್ ಸ್ಪಿನ್ ಮೋಡಿ ಮಾಡಿ ಐದು ವಿಕೆಟ್​ ಕಬಳಿಸಿದ್ದಾರೆ.

|

Updated on: Sep 11, 2024 | 2:39 PM

ಇಂಗ್ಲೆಂಡ್​ನ ನಾರ್ಥಾಂಪ್ಟನ್​ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್​ನ 47ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾರ್ಥಾಂಪ್ಟನ್ ಶೈರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಇಂಗ್ಲೆಂಡ್​ನ ನಾರ್ಥಾಂಪ್ಟನ್​ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್​ನ 47ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾರ್ಥಾಂಪ್ಟನ್ ಶೈರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 6
ಪ್ರಥಮ ಇನಿಂಗ್ಸ್​ನಲ್ಲಿ ನಾರ್ಥಾಂಪ್ಟನ್ ಶೈರ್ ತಂಡವನ್ನು ಡರ್ಬಿಶೈರ್ ಬೌಲರ್​ಗಳು ಕೇವಲ 219 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಡರ್ಬಿಶೈರ್​ ಪಡೆಗೆ ಯುಜ್ವೇಂದ್ರ ಚಹಲ್ ಆಘಾತದ ಮೇಲೆ ಆಘಾತ ನೀಡಿದರು.

ಪ್ರಥಮ ಇನಿಂಗ್ಸ್​ನಲ್ಲಿ ನಾರ್ಥಾಂಪ್ಟನ್ ಶೈರ್ ತಂಡವನ್ನು ಡರ್ಬಿಶೈರ್ ಬೌಲರ್​ಗಳು ಕೇವಲ 219 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಡರ್ಬಿಶೈರ್​ ಪಡೆಗೆ ಯುಜ್ವೇಂದ್ರ ಚಹಲ್ ಆಘಾತದ ಮೇಲೆ ಆಘಾತ ನೀಡಿದರು.

2 / 6
ಅತ್ಯುತ್ತಮ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ 16.3 ಓವರ್​ಗಳಲ್ಲಿ 45 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ಡರ್ಬಿಶೈರ್ ತಂಡವನ್ನು ಕೇವಲ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಚಹಲ್ ಪ್ರಮುಖ ಪಾತ್ರವಹಿಸಿದರು.

ಅತ್ಯುತ್ತಮ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ 16.3 ಓವರ್​ಗಳಲ್ಲಿ 45 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ಡರ್ಬಿಶೈರ್ ತಂಡವನ್ನು ಕೇವಲ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಚಹಲ್ ಪ್ರಮುಖ ಪಾತ್ರವಹಿಸಿದರು.

3 / 6
ಈ ಐದು ವಿಕೆಟ್​ಗಳೊಂದಿಗೆ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈವರೆಗೆ 38 ಫಸ್ಟ್ ಕ್ಲಾಸ್ ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 102 ವಿಕೆಟ್ ಕಬಳಿಸಿದ್ದಾರೆ. ಇದೇ ವೇಳೆ 3 ಬಾರಿ 5 ವಿಕೆಟ್​ಗಳನ್ನು ಉರುಳಿಸಿದ್ದಾರೆ.

ಈ ಐದು ವಿಕೆಟ್​ಗಳೊಂದಿಗೆ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈವರೆಗೆ 38 ಫಸ್ಟ್ ಕ್ಲಾಸ್ ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 102 ವಿಕೆಟ್ ಕಬಳಿಸಿದ್ದಾರೆ. ಇದೇ ವೇಳೆ 3 ಬಾರಿ 5 ವಿಕೆಟ್​ಗಳನ್ನು ಉರುಳಿಸಿದ್ದಾರೆ.

4 / 6
ಇದಕ್ಕೂ ಮುನ್ನ ಯುಜ್ವೇಂದ್ರ ಚಹಲ್ ಕೌಂಟಿ ಕ್ರಿಕೆಟ್​ನಲ್ಲಿ ಒನ್ ಡೇ ಕಪ್ ಟೂರ್ನಿ ಆಡಿದ್ದರು. ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಕೆಂಟ್ ತಂಡದ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ ಎಸೆತಗಳನ್ನು ಎಸೆದಿದ್ದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್​ನಲ್ಲೂ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಯುಜ್ವೇಂದ್ರ ಚಹಲ್ ಕೌಂಟಿ ಕ್ರಿಕೆಟ್​ನಲ್ಲಿ ಒನ್ ಡೇ ಕಪ್ ಟೂರ್ನಿ ಆಡಿದ್ದರು. ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಕೆಂಟ್ ತಂಡದ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ ಎಸೆತಗಳನ್ನು ಎಸೆದಿದ್ದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್​ನಲ್ಲೂ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

5 / 6
ಇನ್ನು ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿಯಿಂದಾಗಿ ಮೊದಲ ಇನಿಂಗ್ಸ್​ನಲ್ಲಿ 54 ರನ್​ಗಳ ಮುನ್ನಡೆ ಪಡೆದಿರುವ ನಾರ್ಥಾಂಪ್ಟನ್ ಶೈರ್ ತಂಡವು ಇನಿಂಗ್ಸ್ ಆರಂಭಿಸಿದೆ. ಅಲ್ಲದೆ 46 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 178 ರನ್​ ಕಲೆಹಾಕಿ, 232 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಇನ್ನು ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿಯಿಂದಾಗಿ ಮೊದಲ ಇನಿಂಗ್ಸ್​ನಲ್ಲಿ 54 ರನ್​ಗಳ ಮುನ್ನಡೆ ಪಡೆದಿರುವ ನಾರ್ಥಾಂಪ್ಟನ್ ಶೈರ್ ತಂಡವು ಇನಿಂಗ್ಸ್ ಆರಂಭಿಸಿದೆ. ಅಲ್ಲದೆ 46 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 178 ರನ್​ ಕಲೆಹಾಕಿ, 232 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

6 / 6
Follow us
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ