AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಮತ್ತೆ 5 ವಿಕೆಟ್ ಕಬಳಿಸಿ ಮಿಂಚಿದ ಚಹಲ್

Yuzvendra Chahal: ಇಂಗ್ಲೆಂಡ್​ನಲ್ಲಿ ನಡೆದ ಒನ್ ಡೇ ಕಪ್ ಟೂರ್ನಿಯಲ್ಲಿ ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಯುಜ್ವೇಂದ್ರ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್ ಪಂದ್ಯದಲ್ಲೂ ಚಹಲ್ ಸ್ಪಿನ್ ಮೋಡಿ ಮಾಡಿ ಐದು ವಿಕೆಟ್​ ಕಬಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 11, 2024 | 2:39 PM

ಇಂಗ್ಲೆಂಡ್​ನ ನಾರ್ಥಾಂಪ್ಟನ್​ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್​ನ 47ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾರ್ಥಾಂಪ್ಟನ್ ಶೈರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

ಇಂಗ್ಲೆಂಡ್​ನ ನಾರ್ಥಾಂಪ್ಟನ್​ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್​ನ 47ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾರ್ಥಾಂಪ್ಟನ್ ಶೈರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 6
ಪ್ರಥಮ ಇನಿಂಗ್ಸ್​ನಲ್ಲಿ ನಾರ್ಥಾಂಪ್ಟನ್ ಶೈರ್ ತಂಡವನ್ನು ಡರ್ಬಿಶೈರ್ ಬೌಲರ್​ಗಳು ಕೇವಲ 219 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಡರ್ಬಿಶೈರ್​ ಪಡೆಗೆ ಯುಜ್ವೇಂದ್ರ ಚಹಲ್ ಆಘಾತದ ಮೇಲೆ ಆಘಾತ ನೀಡಿದರು.

ಪ್ರಥಮ ಇನಿಂಗ್ಸ್​ನಲ್ಲಿ ನಾರ್ಥಾಂಪ್ಟನ್ ಶೈರ್ ತಂಡವನ್ನು ಡರ್ಬಿಶೈರ್ ಬೌಲರ್​ಗಳು ಕೇವಲ 219 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಡರ್ಬಿಶೈರ್​ ಪಡೆಗೆ ಯುಜ್ವೇಂದ್ರ ಚಹಲ್ ಆಘಾತದ ಮೇಲೆ ಆಘಾತ ನೀಡಿದರು.

2 / 6
ಅತ್ಯುತ್ತಮ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ 16.3 ಓವರ್​ಗಳಲ್ಲಿ 45 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ಡರ್ಬಿಶೈರ್ ತಂಡವನ್ನು ಕೇವಲ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಚಹಲ್ ಪ್ರಮುಖ ಪಾತ್ರವಹಿಸಿದರು.

ಅತ್ಯುತ್ತಮ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ 16.3 ಓವರ್​ಗಳಲ್ಲಿ 45 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ಡರ್ಬಿಶೈರ್ ತಂಡವನ್ನು ಕೇವಲ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಚಹಲ್ ಪ್ರಮುಖ ಪಾತ್ರವಹಿಸಿದರು.

3 / 6
ಈ ಐದು ವಿಕೆಟ್​ಗಳೊಂದಿಗೆ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈವರೆಗೆ 38 ಫಸ್ಟ್ ಕ್ಲಾಸ್ ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 102 ವಿಕೆಟ್ ಕಬಳಿಸಿದ್ದಾರೆ. ಇದೇ ವೇಳೆ 3 ಬಾರಿ 5 ವಿಕೆಟ್​ಗಳನ್ನು ಉರುಳಿಸಿದ್ದಾರೆ.

ಈ ಐದು ವಿಕೆಟ್​ಗಳೊಂದಿಗೆ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈವರೆಗೆ 38 ಫಸ್ಟ್ ಕ್ಲಾಸ್ ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 102 ವಿಕೆಟ್ ಕಬಳಿಸಿದ್ದಾರೆ. ಇದೇ ವೇಳೆ 3 ಬಾರಿ 5 ವಿಕೆಟ್​ಗಳನ್ನು ಉರುಳಿಸಿದ್ದಾರೆ.

4 / 6
ಇದಕ್ಕೂ ಮುನ್ನ ಯುಜ್ವೇಂದ್ರ ಚಹಲ್ ಕೌಂಟಿ ಕ್ರಿಕೆಟ್​ನಲ್ಲಿ ಒನ್ ಡೇ ಕಪ್ ಟೂರ್ನಿ ಆಡಿದ್ದರು. ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಕೆಂಟ್ ತಂಡದ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ ಎಸೆತಗಳನ್ನು ಎಸೆದಿದ್ದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್​ನಲ್ಲೂ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಯುಜ್ವೇಂದ್ರ ಚಹಲ್ ಕೌಂಟಿ ಕ್ರಿಕೆಟ್​ನಲ್ಲಿ ಒನ್ ಡೇ ಕಪ್ ಟೂರ್ನಿ ಆಡಿದ್ದರು. ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಕೆಂಟ್ ತಂಡದ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ ಎಸೆತಗಳನ್ನು ಎಸೆದಿದ್ದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್​ನಲ್ಲೂ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

5 / 6
ಇನ್ನು ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿಯಿಂದಾಗಿ ಮೊದಲ ಇನಿಂಗ್ಸ್​ನಲ್ಲಿ 54 ರನ್​ಗಳ ಮುನ್ನಡೆ ಪಡೆದಿರುವ ನಾರ್ಥಾಂಪ್ಟನ್ ಶೈರ್ ತಂಡವು ಇನಿಂಗ್ಸ್ ಆರಂಭಿಸಿದೆ. ಅಲ್ಲದೆ 46 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 178 ರನ್​ ಕಲೆಹಾಕಿ, 232 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಇನ್ನು ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿಯಿಂದಾಗಿ ಮೊದಲ ಇನಿಂಗ್ಸ್​ನಲ್ಲಿ 54 ರನ್​ಗಳ ಮುನ್ನಡೆ ಪಡೆದಿರುವ ನಾರ್ಥಾಂಪ್ಟನ್ ಶೈರ್ ತಂಡವು ಇನಿಂಗ್ಸ್ ಆರಂಭಿಸಿದೆ. ಅಲ್ಲದೆ 46 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 178 ರನ್​ ಕಲೆಹಾಕಿ, 232 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

6 / 6
Follow us
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್