AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿಲ್ಲ ಸ್ಥಾನ: ವಿದೇಶದಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ ಯುಜ್ವೇಂದ್ರ ಚಹಲ್

Yuzvendra Chahal: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್​ನಲ್ಲಿ ನಾರ್ಥಾಂಪ್ಟನ್‌ಶೈರ್ ಪರ ಕಣಕ್ಕಿಳಿದಿರುವ ಯುಜ್ವೇಂದ್ರ ಚಹಲ್ ಕೇವಲ 14 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಅದು ಸಹ ತಮ್ಮ ಚೊಚ್ಚಲ ಕೌಂಟಿ ಪಂದ್ಯದಲ್ಲಿ ಎಂಬುದು ವಿಶೇಷ. ಈ ಮೂಲಕ ಟೀಮ್ ಇಂಡಿಯಾದಿಂದ ಹೊರಗಿಟ್ಟಿರುವ ಆಯ್ಕೆಗಾರರಿಗೆ ತಮ್ಮ ಸ್ಪಿನ್ ಮೋಡಿಯೊಂದಿಗೆ ಚಹಲ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 15, 2024 | 1:04 PM

Share
ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಮತ್ತೊಂದೆಡೆ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ 4 ತಂಡಗಳಲ್ಲೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ವಿದೇಶದತ್ತ ಮುಖ ಮಾಡಿದ್ದಾರೆ.

ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಮತ್ತೊಂದೆಡೆ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ 4 ತಂಡಗಳಲ್ಲೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಇದರ ಬೆನ್ನಲ್ಲೇ ಯುಜ್ವೇಂದ್ರ ಚಹಲ್ ವಿದೇಶದತ್ತ ಮುಖ ಮಾಡಿದ್ದಾರೆ.

1 / 5
ಹೌದು, ಯುಜ್ವೇಂದ್ರ ಚಹಲ್ ಪ್ರಸ್ತುತ ನಡೆಯುತ್ತಿರುವ ಒನ್ ಡೇ ಕಪ್ ಕ್ರಿಕೆಟ್ ಟೂರ್ನಿ ಆಡುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಈ ಲೀಗ್​ನಲ್ಲಿ ಚಹಲ್ ನಾರ್ಥಾಂಪ್ಟನ್‌ಶೈರ್ ತಂಡದ ಪರ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಕಬಳಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದು ವಿಶೇಷ.

ಹೌದು, ಯುಜ್ವೇಂದ್ರ ಚಹಲ್ ಪ್ರಸ್ತುತ ನಡೆಯುತ್ತಿರುವ ಒನ್ ಡೇ ಕಪ್ ಕ್ರಿಕೆಟ್ ಟೂರ್ನಿ ಆಡುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಈ ಲೀಗ್​ನಲ್ಲಿ ಚಹಲ್ ನಾರ್ಥಾಂಪ್ಟನ್‌ಶೈರ್ ತಂಡದ ಪರ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಕಬಳಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದು ವಿಶೇಷ.

2 / 5
ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ ಗ್ರೌಂಡ್​ನಲ್ಲಿ ನಡೆದ ಪಂದ್ಯದಲ್ಲಿ ಕೆಂಟ್ ಹಾಗೂ ನಾರ್ಥಾಂಪ್ಟನ್‌ಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಯುಜ್ವೇಂದ್ರ ಚಹಲ್ ದಾಳಿಗಿಳಿಯುತ್ತಿದ್ದಂತೆ ಕೆಂಟ್ ತಂಡದ ಎಲ್ಲಾ ಲೆಕ್ಕಾಚಾರಗಳು ತಲೆ ಕೆಳಗಾಗಿವೆ.

ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ ಗ್ರೌಂಡ್​ನಲ್ಲಿ ನಡೆದ ಪಂದ್ಯದಲ್ಲಿ ಕೆಂಟ್ ಹಾಗೂ ನಾರ್ಥಾಂಪ್ಟನ್‌ಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಯುಜ್ವೇಂದ್ರ ಚಹಲ್ ದಾಳಿಗಿಳಿಯುತ್ತಿದ್ದಂತೆ ಕೆಂಟ್ ತಂಡದ ಎಲ್ಲಾ ಲೆಕ್ಕಾಚಾರಗಳು ತಲೆ ಕೆಳಗಾಗಿವೆ.

3 / 5
ಏಕೆಂದರೆ ಸೇಂಟ್ ಲಾರೆನ್ಸ್ ಪಿಚ್​ನಲ್ಲಿ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ ಕೆಂಟ್ ತಂಡದ ಬ್ಯಾಟಿಂಗ್ ಬೆನ್ನಲುಬನ್ನೇ ಮುರಿದಿದ್ದಾರೆ. 10 ಓವರ್​ ಎಸೆತಗಳನ್ನು ಎಸೆದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಉಳಿಸಿದ್ದಾರೆ. ಈ ಮೂಲಕ ಕೆಂಟ್ ತಂಡವನ್ನು 35.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಏಕೆಂದರೆ ಸೇಂಟ್ ಲಾರೆನ್ಸ್ ಪಿಚ್​ನಲ್ಲಿ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ ಕೆಂಟ್ ತಂಡದ ಬ್ಯಾಟಿಂಗ್ ಬೆನ್ನಲುಬನ್ನೇ ಮುರಿದಿದ್ದಾರೆ. 10 ಓವರ್​ ಎಸೆತಗಳನ್ನು ಎಸೆದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಉಳಿಸಿದ್ದಾರೆ. ಈ ಮೂಲಕ ಕೆಂಟ್ ತಂಡವನ್ನು 35.1 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

4 / 5
ಇನ್ನು 83 ರನ್​ಗಳ ಸುಲಭ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ಪರ ಆರಂಭಿಕ ಆಟಗಾರ ಪೃಥ್ವಿ ಶಾ 17 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಜೇಮ್ಸ್ ಸೇಲ್ಸ್ (33) ಹಾಗೂ ಜಾರ್ಜ್ ಬಾರ್ಟ್ಲೆಟ್ (31) ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದ್ದಾರೆ. ಈ ಮೂಲಕ ನಾರ್ಥಾಂಪ್ಟನ್‌ಶೈರ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು 83 ರನ್​ಗಳ ಸುಲಭ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ಪರ ಆರಂಭಿಕ ಆಟಗಾರ ಪೃಥ್ವಿ ಶಾ 17 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಜೇಮ್ಸ್ ಸೇಲ್ಸ್ (33) ಹಾಗೂ ಜಾರ್ಜ್ ಬಾರ್ಟ್ಲೆಟ್ (31) ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದ್ದಾರೆ. ಈ ಮೂಲಕ ನಾರ್ಥಾಂಪ್ಟನ್‌ಶೈರ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು