AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಆನಂದ.. ಪರಮಾನಂದ… RCBಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸುವ ಮೂಲಕ ಆರ್​ಸಿಬಿ ತಂಡವು ಟ್ರೋಫಿಯನ್ನು ಎತ್ತಿಡಿದಿದೆ. ಈ ಗೆಲುವಿನ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಯುಜ್ವೇಂದ್ರ ಚಹಲ್ ಆರ್​ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: Mar 18, 2024 | 7:53 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದು RCB ಕಿರೀಟ ಮುಡಿಗೇರಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದು RCB ಕಿರೀಟ ಮುಡಿಗೇರಿಸಿಕೊಂಡಿದೆ.

1 / 7
ಇತ್ತ ಆರ್​ಸಿಬಿ ತಂಡ ಗೆಲ್ಲುತ್ತಿದ್ದಂತೆ, ಅತ್ತ ಸಂಭ್ರಮಿಸಿದವರಲ್ಲಿ ಯುಜ್ವೇಂದ್ರ ಚಹಲ್ ಕೂಡ ಒಬ್ಬರು. ಆದರೆ ಚಹಲ್ ಅವರದ್ದು ಕೇವಲ ಸಂಭ್ರಮವಾಗಿರಲಿಲ್ಲ. ಅದು ಪರಮಾನಂದವಾಗಿತ್ತು. ಇದನ್ನು ಟೀಮ್ ಇಂಡಿಯಾ ಆಟಗಾರ ಕನ್ನಡದಲ್ಲೇ ತಿಳಿಸಿದ್ದು ವಿಶೇಷ.

ಇತ್ತ ಆರ್​ಸಿಬಿ ತಂಡ ಗೆಲ್ಲುತ್ತಿದ್ದಂತೆ, ಅತ್ತ ಸಂಭ್ರಮಿಸಿದವರಲ್ಲಿ ಯುಜ್ವೇಂದ್ರ ಚಹಲ್ ಕೂಡ ಒಬ್ಬರು. ಆದರೆ ಚಹಲ್ ಅವರದ್ದು ಕೇವಲ ಸಂಭ್ರಮವಾಗಿರಲಿಲ್ಲ. ಅದು ಪರಮಾನಂದವಾಗಿತ್ತು. ಇದನ್ನು ಟೀಮ್ ಇಂಡಿಯಾ ಆಟಗಾರ ಕನ್ನಡದಲ್ಲೇ ತಿಳಿಸಿದ್ದು ವಿಶೇಷ.

2 / 7
ಹೌದು, ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಯುಜ್ವೇಂದ್ರ ಚಹಲ್ ತಮ್ಮ ಎಕ್ಸ್ ಖಾತೆಯಲ್ಲಿ RCB ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಕನ್ನಡದಲ್ಲೇ "ಆನಂದ.. ಪರಮಾನಂದ.... ಪರಮಾನಂದ...." ಎಂದು ಬರೆದುಕೊಳ್ಳುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು.

ಹೌದು, ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಯುಜ್ವೇಂದ್ರ ಚಹಲ್ ತಮ್ಮ ಎಕ್ಸ್ ಖಾತೆಯಲ್ಲಿ RCB ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಕನ್ನಡದಲ್ಲೇ "ಆನಂದ.. ಪರಮಾನಂದ.... ಪರಮಾನಂದ...." ಎಂದು ಬರೆದುಕೊಳ್ಳುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು.

3 / 7
ಇದೀಗ ಶ್ರೀಮಂಜುನಾಥ ಸಿನಿಮಾದ ಜನಪ್ರಿಯ ಹಾಡಿನ ಸಾಲುಗಳನ್ನು ಬರೆದು ಆರ್​ಸಿಬಿ ತಂಡಯನ್ನು ಕನ್ನಡದಲ್ಲೇ ಅಭಿನಂದಿಸಿದ ಯುಜ್ವೇಂದ್ರ ಚಹಲ್ ಅವರ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ಮಾಜಿ ಆರ್​ಸಿಬಿ ಆಟಗಾರನ ಅಭಿಮಾನಕ್ಕೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೀಗ ಶ್ರೀಮಂಜುನಾಥ ಸಿನಿಮಾದ ಜನಪ್ರಿಯ ಹಾಡಿನ ಸಾಲುಗಳನ್ನು ಬರೆದು ಆರ್​ಸಿಬಿ ತಂಡಯನ್ನು ಕನ್ನಡದಲ್ಲೇ ಅಭಿನಂದಿಸಿದ ಯುಜ್ವೇಂದ್ರ ಚಹಲ್ ಅವರ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ಮಾಜಿ ಆರ್​ಸಿಬಿ ಆಟಗಾರನ ಅಭಿಮಾನಕ್ಕೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4 / 7
ಅಂದಹಾಗೆ ಯುಜ್ವೇಂದ್ರ ಚಹಲ್ 2014 ರಿಂದ 2021 ರವರೆಗೆ ಆರ್​ಸಿಬಿ ಪರ ಆಡಿದ್ದರು. 7 ಸೀಸನ್​ಗಳಲ್ಲಿ 50 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಚಹಲ್ ಒಟ್ಟು 64 ವಿಕೆಟ್ ಪಡೆದಿದ್ದರು. ಅಲ್ಲದೆ ಆರ್​ಸಿಬಿ ತಂಡದ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದರು.

ಅಂದಹಾಗೆ ಯುಜ್ವೇಂದ್ರ ಚಹಲ್ 2014 ರಿಂದ 2021 ರವರೆಗೆ ಆರ್​ಸಿಬಿ ಪರ ಆಡಿದ್ದರು. 7 ಸೀಸನ್​ಗಳಲ್ಲಿ 50 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಚಹಲ್ ಒಟ್ಟು 64 ವಿಕೆಟ್ ಪಡೆದಿದ್ದರು. ಅಲ್ಲದೆ ಆರ್​ಸಿಬಿ ತಂಡದ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದರು.

5 / 7
ಇದಾಗ್ಯೂ ಐಪಿಎಲ್​ 2022 ರಲ್ಲಿ ಚಹಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು. ಇದೀಗ ಯುಜ್ವೇಂದ್ರ ಚಹಲ್ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿರುವ ದಾಖಲೆ ಬರೆದಿದ್ದಾರೆ.

ಇದಾಗ್ಯೂ ಐಪಿಎಲ್​ 2022 ರಲ್ಲಿ ಚಹಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು. ಇದೀಗ ಯುಜ್ವೇಂದ್ರ ಚಹಲ್ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿರುವ ದಾಖಲೆ ಬರೆದಿದ್ದಾರೆ.

6 / 7
ಇನ್ನು ಈ ಬಾರಿಯ ಐಪಿಎಲ್ ಮೂಲಕ ಹೊಸ ದಾಖಲೆ ಬರೆಯುವ ಅವಕಾಶ ಯುಜ್ವೇಂದ್ರ ಚಹಲ್ ಮುಂದಿದೆ. ಅಂದರೆ 187 ವಿಕೆಟ್​ಗಳನ್ನು ಹೊಂದಿರುವ ಚಹಲ್ 13 ವಿಕೆಟ್ ಕಬಳಿಸಿದರೆ ಐಪಿಎಲ್​ನಲ್ಲಿ 200 ವಿಕೆಟ್ ಪೂರೈಸಿದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಯುಜ್ವೇಂದ್ರ ಚಹಲ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

ಇನ್ನು ಈ ಬಾರಿಯ ಐಪಿಎಲ್ ಮೂಲಕ ಹೊಸ ದಾಖಲೆ ಬರೆಯುವ ಅವಕಾಶ ಯುಜ್ವೇಂದ್ರ ಚಹಲ್ ಮುಂದಿದೆ. ಅಂದರೆ 187 ವಿಕೆಟ್​ಗಳನ್ನು ಹೊಂದಿರುವ ಚಹಲ್ 13 ವಿಕೆಟ್ ಕಬಳಿಸಿದರೆ ಐಪಿಎಲ್​ನಲ್ಲಿ 200 ವಿಕೆಟ್ ಪೂರೈಸಿದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಯುಜ್ವೇಂದ್ರ ಚಹಲ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ