AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ!

ತುಮಕೂರು, ಫೆಬ್ರವರಿ 10: ಹಿಟಾಚಿ ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾಗಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಹಕನೊಬ್ಬ ಶೋರೂಂಗೆ ಬೀಗ ಹಾಕಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳಿ ಬಳಿಯ ಟಾಟಾ ಹಿಟಾಚಿ ಶೋರೂಂನಲ್ಲಿ ನಡೆದಿದೆ. ಬೆಳಗ್ಗೆ ಶೋರೂಮ್​ಗೆ ಬಂದ ಗ್ರಾಹಕ ಸಿಬ್ಬಂದಿಯನ್ನೆಲ್ಲ ಹೊರ ಕಳುಹಿಸಿ ಬೀಗ ಜಡಿದಿದ್ದಾರೆ.

Jagadisha B
| Edited By: |

Updated on:Feb 10, 2026 | 9:10 AM

Share
ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ.

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ.

1 / 5
ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅಲೆದಾಡಿದರೂ ಹಿಟಾಚಿ ಸರಿಪಡಿಸಲಾಗಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅಲೆದಾಡಿದರೂ ಹಿಟಾಚಿ ಸರಿಪಡಿಸಲಾಗಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 / 5
ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲು ಗಿರೀಶ್ ಬೆಳಿಗ್ಗೆ ಶೋರೂಂಗೆ ಭೇಟಿ ನೀಡಿದರು. ಆದರೆ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಶೋರೂಂ ಬಾಗಿಲಿಗೆ ಹಿಟಾಚಿ ಯಂತ್ರವನ್ನು ಅಡ್ಡಲಾಗಿ ನಿಲ್ಲಿಸಿ ಗಮನ ಸೆಳೆದರು.

ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲು ಗಿರೀಶ್ ಬೆಳಿಗ್ಗೆ ಶೋರೂಂಗೆ ಭೇಟಿ ನೀಡಿದರು. ಆದರೆ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಶೋರೂಂ ಬಾಗಿಲಿಗೆ ಹಿಟಾಚಿ ಯಂತ್ರವನ್ನು ಅಡ್ಡಲಾಗಿ ನಿಲ್ಲಿಸಿ ಗಮನ ಸೆಳೆದರು.

3 / 5
‘ಹಿಟಾಚಿ ಸರಿಪಡಿಸಿ ಕೊಡಬೇಕು, ಇಲ್ಲವಾದರೆ ನಾವು ಕಟ್ಟಿದ ಹಣವನ್ನು ವಾಪಸ್ ನೀಡಬೇಕು. ಯಂತ್ರ ಖರೀದಿ ಮಾಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದೇನೆ. ಕಂಪನಿ ಹೇಳುವುದೊಂದು, ಖರೀದಿಸಿದ ನಂತರ ಮಾಡುವುದೊಂದು’ ಎಂದು ಗಿರೀಶ್ ಆರೋಪಿಸಿದ್ದಾರೆ.

‘ಹಿಟಾಚಿ ಸರಿಪಡಿಸಿ ಕೊಡಬೇಕು, ಇಲ್ಲವಾದರೆ ನಾವು ಕಟ್ಟಿದ ಹಣವನ್ನು ವಾಪಸ್ ನೀಡಬೇಕು. ಯಂತ್ರ ಖರೀದಿ ಮಾಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದೇನೆ. ಕಂಪನಿ ಹೇಳುವುದೊಂದು, ಖರೀದಿಸಿದ ನಂತರ ಮಾಡುವುದೊಂದು’ ಎಂದು ಗಿರೀಶ್ ಆರೋಪಿಸಿದ್ದಾರೆ.

4 / 5
ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಗ್ರಾಹಕ ಶೋರೂಂಗೆ ಬೀಗ ಹಾಕಿರುವುದನ್ನು ನೋಡಲು ಜನ ಆಗಮಿಸುತ್ತಿದ್ದಾರೆ. ಈ ಬಗ್ಗೆ ಶೋರೂಂ ಹಾಗೂ ಹಿಟಾಚಿ ಕಂಪನಿ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ.

ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಗ್ರಾಹಕ ಶೋರೂಂಗೆ ಬೀಗ ಹಾಕಿರುವುದನ್ನು ನೋಡಲು ಜನ ಆಗಮಿಸುತ್ತಿದ್ದಾರೆ. ಈ ಬಗ್ಗೆ ಶೋರೂಂ ಹಾಗೂ ಹಿಟಾಚಿ ಕಂಪನಿ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ.

5 / 5

Published On - 9:10 am, Tue, 10 February 26

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ