AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ನೀರಜ್ ಚೋಪ್ರಾ ನಮ್ಮ ಸ್ಫೂರ್ತಿ; ಚಿನ್ನ ಗೆಲ್ಲುವುದೇ ತಂಡದ ಗುರಿ ಎಂದ ಸ್ಮೃತಿ ಮಂಧಾನ

CWG 2022: ನೀರಜ್ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಟೀಮ್ ಇಂಡಿಯಾದ ಪ್ರತಿಯೊಬ್ಬ ಕ್ರಿಕೆಟಿಗರು ಆ ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಬರ್ಮಿಂಗ್‌ಹ್ಯಾಮ್‌ನಲ್ಲಿ ಇದೇ ರೀತಿಯ ಏನನ್ನಾದರೂ ಮಾಡಲು ಬಯಸುತ್ತಾರೆ ಎಂದಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jul 22, 2022 | 2:28 PM

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಅವರು ಕಾಮನ್‌ವೆಲ್ತ್ ಗೇಮ್ಸ್ 2022 ಗೆ ಹೊರಡುವ ಮೊದಲು ಚಿನ್ನ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದ ಗುರಿ ಕೇವಲ ಚಿನ್ನ ಗೆಲ್ಲುವುದು ಮಾತ್ರ ಎಂಬ ಹೇಳಿಕೆಯನ್ನು ಮಂಧಾನ ನೀಡಿದ್ದಾರೆ. ಟೀಂ ಇಂಡಿಯಾ ಸಂಪೂರ್ಣ ಸನ್ನದ್ಧವಾಗಿದ್ದು, ನೀರಜ್ ಚೋಪ್ರಾ ಅವರಿಂದ ಸ್ಫೂರ್ತಿ ಪಡೆಯುತ್ತಿದೆ ಎಂದು ಮಂಧಾನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಅವರು ಕಾಮನ್‌ವೆಲ್ತ್ ಗೇಮ್ಸ್ 2022 ಗೆ ಹೊರಡುವ ಮೊದಲು ಚಿನ್ನ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದ ಗುರಿ ಕೇವಲ ಚಿನ್ನ ಗೆಲ್ಲುವುದು ಮಾತ್ರ ಎಂಬ ಹೇಳಿಕೆಯನ್ನು ಮಂಧಾನ ನೀಡಿದ್ದಾರೆ. ಟೀಂ ಇಂಡಿಯಾ ಸಂಪೂರ್ಣ ಸನ್ನದ್ಧವಾಗಿದ್ದು, ನೀರಜ್ ಚೋಪ್ರಾ ಅವರಿಂದ ಸ್ಫೂರ್ತಿ ಪಡೆಯುತ್ತಿದೆ ಎಂದು ಮಂಧಾನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

1 / 5
ಮಂಧಾನ ಅವರಿಗೂ ಮೊದಲು, ಮಿಥಾಲಿ ರಾಜ್ ಮತ್ತು ಹರ್ಮನ್‌ಪ್ರೀತ್ ಕೌರ್ ಭಾರತದ ಪರ 3000 ರನ್ ಗಳಿಸಿದ್ದರು. ಆದರೆ ಮಂಧಾನ ಈ ಇಬ್ಬರಿಗಿಂತ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ಮಾಡಿದ ಬ್ಯಾಟರ್ ಎನಿಸಿಕೊಂಡರು. ಮಂಧಾನ ಕೇವಲ 76 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು.

ಮಂಧಾನ ಅವರಿಗೂ ಮೊದಲು, ಮಿಥಾಲಿ ರಾಜ್ ಮತ್ತು ಹರ್ಮನ್‌ಪ್ರೀತ್ ಕೌರ್ ಭಾರತದ ಪರ 3000 ರನ್ ಗಳಿಸಿದ್ದರು. ಆದರೆ ಮಂಧಾನ ಈ ಇಬ್ಬರಿಗಿಂತ ಅತ್ಯಂತ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ಮಾಡಿದ ಬ್ಯಾಟರ್ ಎನಿಸಿಕೊಂಡರು. ಮಂಧಾನ ಕೇವಲ 76 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು.

2 / 5
CWG 2022: ನೀರಜ್ ಚೋಪ್ರಾ ನಮ್ಮ ಸ್ಫೂರ್ತಿ; ಚಿನ್ನ ಗೆಲ್ಲುವುದೇ ತಂಡದ ಗುರಿ ಎಂದ ಸ್ಮೃತಿ ಮಂಧಾನ

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತಂಡ ಬಲಿಷ್ಠವಾಗಿದೆ ಎಂದು ಸ್ಮೃತಿ ಮಂಧಾನ ಹೇಳಿದ್ದಾರೆ. ಪ್ರತಿಯೊಬ್ಬ ಆಟಗಾರ್ತಿಯೂ ತನ್ನ ಶಕ್ತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ವಿರೋಧಿಗಳ ವಿರುದ್ಧ ಯೋಜನೆ ಮಾಡುವುದು ಸುಲಭ. ಇತ್ತೀಚೆಗೆ ಟೀಂ ಇಂಡಿಯಾ ಶ್ರೀಲಂಕಾವನ್ನು ODI ಮತ್ತು T20 ಸರಣಿಗಳಲ್ಲಿ ಸೋಲಿಸಿರುವುದು ನಮಗೆ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದಿದ್ದಾರೆ.

3 / 5
CWG 2022: ನೀರಜ್ ಚೋಪ್ರಾ ನಮ್ಮ ಸ್ಫೂರ್ತಿ; ಚಿನ್ನ ಗೆಲ್ಲುವುದೇ ತಂಡದ ಗುರಿ ಎಂದ ಸ್ಮೃತಿ ಮಂಧಾನ

ಜೊತೆಗೆ ತಮ್ಮ ತಂಡ ನೀರಜ್ ಚೋಪ್ರಾ ಅವರಿಂದ ಸ್ಫೂರ್ತಿ ಪಡೆಯುತ್ತಿದೆ ಎಂದು ಮಂಧಾನ ಹೇಳಿದ್ದಾರೆ. ನೀರಜ್ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಟೀಮ್ ಇಂಡಿಯಾದ ಪ್ರತಿಯೊಬ್ಬ ಕ್ರಿಕೆಟಿಗರು ಆ ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಬರ್ಮಿಂಗ್‌ಹ್ಯಾಮ್‌ನಲ್ಲಿ ಇದೇ ರೀತಿಯ ಏನನ್ನಾದರೂ ಮಾಡಲು ಬಯಸುತ್ತಾರೆ ಎಂದಿದ್ದಾರೆ.

4 / 5
CWG 2022: ನೀರಜ್ ಚೋಪ್ರಾ ನಮ್ಮ ಸ್ಫೂರ್ತಿ; ಚಿನ್ನ ಗೆಲ್ಲುವುದೇ ತಂಡದ ಗುರಿ ಎಂದ ಸ್ಮೃತಿ ಮಂಧಾನ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ತಂಡವು ಜುಲೈ 29 ರಂದು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇದರ ನಂತರ, ಜುಲೈ 31 ರಂದು ಪಾಕಿಸ್ತಾನದೊಂದಿಗೆ ಘರ್ಷಣೆ ನಡೆಯಲಿದೆ. ಆಗಸ್ಟ್ 3 ರಂದು ಟೀಂ ಇಂಡಿಯಾ ಮತ್ತು ಬಾರ್ಬಡೋಸ್ ಮಹಿಳಾ ತಂಡಗಳು ಮುಖಾಮುಖಿಯಾಗಲಿವೆ.

5 / 5

Published On - 2:28 pm, Fri, 22 July 22

Follow us
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!