
ಧನಂಜಯ ಮತ್ತು ಧನ್ಯತಾ ದಂಪತಿ ಮಗನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಎಲ್ಲ ಅಭಿಮಾನಿಗಳಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಅವರು ತಿಳಿಸಿದ್ದಾರೆ.
‘ನಮ್ಮನ್ನ ಪ್ರೀತಿಸುವ ಜೀವಗಳು, ಮಗನನ್ನ ನಮಗೆ ಯಾವಾಗ ತೋರಿಸುತ್ತೀರಿ ಅಂತ ಕೇಳ್ತ ಇದ್ರಿ, ಏನು ಹೆಸರು ಅಂತ ಕೇಳ್ತ ಇದ್ರಿ. ಹಬ್ಬದ ದಿನ, ಇವತ್ತು ಪರಿಚಯಿಸುತ್ತ ಇದೀವಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ.
‘ಎರೆಯ- ಪುರಾತನ ಕನ್ನಡ ಪರಂಪರೆಯ ಗೌರವಪೂರ್ಣ ಪದ. ಇದರ ಅರ್ಥ ಒಡೆಯ, ಸ್ವಾಮಿ, ಅಧಿಪತಿ. ಒಂದು ಕಾಲದಲ್ಲಿ ರಾಜರು ಮತ್ತು ಅರಸರನ್ನು ಗೌರವದಿಂದ ಸಂಬೋಧಿಸಲು ಬಳಸುತ್ತಿದ್ದ ಹೆಸರು’ ಎಂದಿದ್ದಾರೆ ಡಾಲಿ.
‘ಇತಿಹಾಸದ ಪುಟಗಳಲ್ಲಿ, ಚಾಲುಕ್ಯರ ಮಹಾರಾಜ ಇಮ್ಮಡಿ ಪುಲಕೇಶಿ ಅವರ ಬಾಲ್ಯದ ಹೆಸರಾಗಿಯೂ Ereya ಎಂಬ ಹೆಸರು ಕಾಣಿಸುತ್ತದೆ’ ಎನ್ನುವ ಮೂಲಕ ವಿಶೇಷ ಹೆಸರಿನ ಬಗ್ಗೆ ಧನಂಜಯ ಮಾಹಿತಿ ನೀಡಿದ್ದಾರೆ.
‘ಆ ರಾಜರ , ಪಾರಂಪರಿಕ ಮತ್ತು ಶಕ್ತಿಯುತ ಅರ್ಥವನ್ನು ಹೊತ್ತಿರುವ ನಮ್ಮ ಬದುಕಿನ ಪುಟ್ಟ ಅಧಿಪತಿ, ನಮ್ಮ ಹೃದಯದ ರಾಜ, ನಮ್ಮ ಎರೆಯ. ನಿಮ್ಮ ಪ್ರೀತಿ , ಆಶೀರ್ವಾದ ಸದಾ ಇರಲಿ’ ಎಂದು ಪೋಸ್ಟ್ ಮಾಡಿದ್ದಾರೆ.
Published On - 9:17 am, Mon, 14 September 26