ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

Updated on: Jun 11, 2024 | 12:41 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

1 / 6
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

2 / 6

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

3 / 6

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

4 / 6

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

5 / 6

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

6 / 6

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

Published On - 12:18 pm, Tue, 11 June 24

Loading...
Unable to load recommendations.
Follow Us