
ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.

ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್ಹೌಸ್ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬವೂ ಇದರಲ್ಲಿ ಭಾಗಿ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋ ನೋಡಿದ ಅನೇಕರು ‘ಹ್ಯಾಪಿ ಫ್ಯಾಮಿಲಿ’ ಎಂದು ಕಮೆಂಟ್ ಮಾಡುತ್ತಾ ಇದ್ದಾರೆ.

ದರ್ಶನ್ ಅವರು ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೊತೆ ಪೋಸ್ ಕೊಟ್ಟಿದ್ದಾರೆ. ಅಣ್ಣ-ತಮ್ಮನ ಒಂದೇ ಫ್ರೇಮ್ನಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗಿದೆ.

ದರ್ಶನ್ ಅವರು ಬಂಧನ ಆದ ಬಳಿಕ ವಿಜಯಲಕ್ಷ್ಮೀ ಅವರು ಸಾಕಷ್ಟು ಹರಕೆಗಳನ್ನು ಹೊತ್ತಿದ್ದರು. ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ಕೂಡ ಕೊಟ್ಟರು. ಆ ಹರಕೆ ಫಲ ಕೊಟ್ಟಿದೆ. ದರ್ಶನ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.
Published On - 11:44 am, Wed, 15 January 25