ದುಬೈನಲ್ಲಿ ‘ಕಾಟೇರ’ ದರ್ಶನ, ಅನಿವಾಸ ಕನ್ನಡಿಗರ ಭೇಟಿಯಾದ ದರ್ಶನ್
ನಟ ದರ್ಶನ್ ದುಬೈಗೆ ಭೇಟಿ ನೀಡಿದ್ದು ಅಲ್ಲಿನ ಅನಿವಾಸಿ ಕನ್ನಡಿಗರ ಭೇಟಿಯಾಗಿದ್ದಾರೆ. ದುಬೈನಲ್ಲಿ ‘ಕಾಟೇರ’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ.
Updated on: Jan 07, 2024 | 6:21 PM

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿದ್ದ ಈ ಸಿನಿಮಾಕ್ಕೆ, ಪರರಾಜ್ಯ, ಪರದೇಶಗಳಿಂದಲೂ ಬೇಡಿಕೆ ಬಂದಿದೆ.

ಪರರಾಜ್ಯಗಳಲ್ಲಿ ಈಗಾಗಲೇ ಸಿನಿಮಾವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಪರದೇಶದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ.

ದುಬೈನಲ್ಲಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಇದೇ ಕಾರಣಕ್ಕೆ ನಟ ದರ್ಶನ್ ದುಬೈಗೆ ತೆರಳಿದ್ದಾರೆ.

ದುಬೈಗೆ ತೆರಳಿರುವ ನಟ ದರ್ಶನ್ ಅಲ್ಲಿ ಅನಿವಾಸಿ ಕನ್ನಡಿಗರನ್ನು ಭೇಟಿ ನೀಡಿದ್ದು. ಸಿನಿಮಾದ ಪ್ರಚಾರ ಹಾಗೂ ವಿಶೇಷ ಪ್ರದರ್ಶನದಲ್ಲಿ ಭಾಗಿ ಆಗಲಿದ್ದಾರೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ಬಿಡುಗಡೆ ಆಗಿದ್ದು, ಕರ್ನಾಟಕದಲ್ಲಿ ಬಹಳ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.

‘ಕಾಟೇರ’ ಒಳ್ಳೆಯ ಸಾಮಾಜಿಕ ಸಂದೇಶವುಳ್ಳ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಳ್ಳೆಯ ಸಿನಿಮಾವನ್ನು ಹೆಚ್ಚು ಜನರಿರಿಗೆ ತಲುಪಿಸುವ ಪ್ರಯತ್ನದಲ್ಲಿದೆ ತಂಡ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



