AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೈಯಲ್ಲಿದ್ದ ಸಿನಿಮಾಗಳು ಎಷ್ಟು? ‘ಡೆವಿಲ್’ ಗತಿ ಏನು?

Devil Movie: ದರ್ಶನ್ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ. ಅವರು ಮತ್ತೆ ಬಂಧನಕ್ಕೆ ಒಳಗಾಗಲಿದ್ದಾರೆ. ಹೀಗಿರುವಾಗಲೇ ದರ್ಶನ್ ಸಿನಿಮಾಗಳ ಭವಿಷ್ಯ ಏನು ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಮುಂದಿನ ಸಿನಿಮಾಗಳು ಯಾವವು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಜೇಶ್ ದುಗ್ಗುಮನೆ
|

Updated on: Aug 14, 2025 | 1:30 PM

Share
ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಅರೆಸ್ಟ್​ಗೂ ಮೊದಲೇ ಈ ಸಿನಿಮಾದ ಶೂಟ್ ಶುರುವಾಗಿತ್ತು. ಆದರೆ, ಅವರು ಜೈಲು ಸೇರಿದ್ದರಿಂದ ಶೂಟ್ ನಿಂತಿತ್ತು. ಜಾಮೀನು ಪಡೆದು ಹೊರ ಬಂದ ಬೆನ್ನಲ್ಲೇ ಸಿನಿಮಾ ಶೂಟ್ ಪೂರ್ಣಗೊಳಿಸಿದ್ದರು.

1 / 5
ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

ಇತ್ತೀಚೆಗೆ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ನಡೆದಿತ್ತು. ಈ ಬೆನ್ನಲ್ಲೇ ದರ್ಶನ್ ಅವರು ಬೆಂಗಳೂರಿಗೆ ಬಂದು ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಸಿನಿಮಾ ರಿಲೀಸ್​ಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಮುಂದಿನ ಚಿತ್ರಗಳಿಗೆ ಸಮಸ್ಯೆ ಆಗೋ ಸಾಧ್ಯತೆ ಇದೆ.

2 / 5
ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

ದರ್ಶನ್ ಬಳಿ ಅಧಿಕೃತವಾಗಿ ಇರೋದು ‘ಡೆವಿಲ್’ ಸಿನಿಮಾ ಮಾತ್ರ. ಆದರೆ, ಅಧಿಕೃತವಾಗಿ ಘೋಷಣೆ ಆಗದ ಎರಡು ಸಿನಿಮಾಗಳು ಅವರ ಬಳಿ ಇದ್ದವು. ಅವು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಸದ್ಯ ಈ ಸಿನಿಮಾಗಳು ಅರ್ಧಕ್ಕೆ ನಿಲ್ಲಲಿದೆ.  

3 / 5
ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

ದರ್ಶನ್ ಅವರು ಶೈಲಜಾ ನಾಗ್ ಜೊತೆ ಒಂದು ಸಿನಿಮಾ ಮಾಡಬೇಕಿತ್ತು ಎನ್ನಲಾಗಿದೆ. ತರುಣ್ ಸುಧೀರ್ ಅವರು ಇದಕ್ಕೆ ನಿರ್ದೇಶನ ಮಾಡಬೇಕಿತ್ತು. ‘ವೀರ ಸಿಂಧೂರ ಲಕ್ಷ್ಮಣ’ ಎಂಬುದು ಚಿತ್ರದ ಟೈಟಲ್ ಎನ್ನಲಾಗಿದೆ.

4 / 5
ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

ಇನ್ನು, ದರ್ಶನ್ ಅಳಿಯ ಚಂದು ಸಿನಿಮಾಗೆ ದರ್ಶನ್ ವಿಲನ್ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಈಗ ದರ್ಶನ್ ಇಲ್ಲದೆ, ಈ ಸಿನಿಮಾ ಕೂಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us