Darshan-Yuva: ದರ್ಶನ್-ಯುವ ರಾಜ್ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು
Darshan-Yuva: ಹಳೆ ಕಹಿಯನ್ನು ಮರೆತು ಪರಸ್ಪರ ಸ್ನೇಹದ ಹಸ್ತವನ್ನು ದರ್ಶನ್ ಚಾಚಿದ್ದಾರೆ. 'ಕ್ರಾಂತಿ' ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಹೊಸಪೇಟೆ ಘಟನೆ ಬಳಿಕ ದರ್ಶನ್ ಹಾಗೂ ದೊಡ್ಮನೆ ನಡುವೆ ವೈಮನಸ್ಯ ಉಂಟಾಗಿತ್ತು, ಆದರೆ ಹಳೆಯದನ್ನು ಮರೆತು ದರ್ಶನ್ ಸ್ನೇಹದ ಹಸ್ತ ಚಾಚಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Sep 01, 2023 | 10:30 PM
Share

ನಟ ದರ್ಶನ್, ಯುವರಾಜ್ ಕುಮಾರ್ ಸಿನಿಮಾ ಸೆಟ್ಗೆ ಇಂದು (ಸೆಪ್ಟೆಂಬರ್ 1) ಭೇಟಿ ನೀಡಿದ್ದರು.

ಯುವರಾಜ್ ಕುಮಾರ್ ನಟನೆಯ 'ಯುವ' ಸಿನಿಮಾದ ಚಿತ್ರೀಕರಣ ಎಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿದೆ.

ಹೊಸಕೋಟೆ ಘಟನೆ ಬಳಿಕ ದೊಡ್ಮನೆ ಹಾಗೂ ದರ್ಶನ್ ನಡುವೆ ಕಂದಕ ಏರ್ಪಟ್ಟಿತ್ತು, ಆ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ದರ್ಶನ್ ಹೊಸಪೇಟೆ ಪ್ರಕರಣದಲ್ಲಿ ಅಪ್ಪು ಅಭಿಮಾನಿಗಳ ವಿರುದ್ಧ ದೋಷಾರೋಪಣೆ ಕೇಳಿ ಬಂದಿದ್ದಾಗ ಯುವ ಅಭಿಮಾನಿಗಳ ಪರ ನಿಂತಿದ್ದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಆ ಸಂದರ್ಭದಲ್ಲಿ ನಟ ಯುವ ರಾಜ್ಕುಮಾರ್ ಟ್ವೀಟ್ ಮಾಡಿದ್ದರು.

ಆದರೆ ಈಗ ಹಳೆಯದ್ದನ್ನು ಮರೆತು ಇಬ್ಬರೂ ಒಂದಾಗಿದ್ದಾರೆ. ಇಬ್ಬರು ಪರಸ್ಪರ ಕಹಿ ಮರೆತು ಆಲಿಂಗಿಸಿಕೊಂಡಿದ್ದಾರೆ.

ಯುವ ರಾಜ್ಕುಮಾರ್ 'ಯುವ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ, ದರ್ಶನ್ 'ಕಾಟೇರ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ




