AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ದಸರಾ ಕಲರವ; ರಾಜ ಪೋಷಾಕಿನಲ್ಲಿ ಮಿಂಚಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಈಗಾಗಗಲೇ ಚಾಲನೆ ನೀಡಲಾಗಿದ್ದು, ಅರಮನೆಯಲ್ಲಿ ದಸರಾ ಕಲರವ ಕಳೆಗಟ್ಟಿದೆ. ಇತ್ತ ಖಾಸಗಿ ದರ್ಬಾರ್ ರಂಗೇರಿದ್ದು, ರಾಜ ಪೋಷಾಕಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಿಂಚಿದ್ದಾರೆ. ಜೊತೆಗೆ ಸಿಂಹಾಸಾನವೇರಿ ದರ್ಬಾರ್ ನಡೆಸಿದರು. ಈ ಕುರಿತು ಒಂದು ವರದಿ ಇಲ್ಲಿದೆ.

ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2024 | 6:00 PM

ರಾಜಾಧೀರಾಜಾ ರಾಜ ಮಾರ್ತಾಂಡ ರಾಜ ಕುಲತಿಲಕ ಯದುವೀರ್​ ಪರಾಕ್, ಬಹು ಪರಾಕ್​. ಹೀಗೆ ವಂಧಿ ಮಾಗಧರು ಬಹುಪರಾಕ್​ ಕೂಗುತ್ತಿದ್ದರೆ, ಇತ್ತ ರಾಜಗಾಂಭೀರ್ಯ ನಡಿಗೆಯಲ್ಲಿ ಯದುವಂಶದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮಿಸಿದರು. ಇದು ಇವತ್ತು ಮೈಸೂರಿನಲ್ಲಿ ನಡೆದ ದಸರಾ ಖಾಸಗಿ ದರ್ಬಾರ್​ನ ಝಲಕ್.

ರಾಜಾಧೀರಾಜಾ ರಾಜ ಮಾರ್ತಾಂಡ ರಾಜ ಕುಲತಿಲಕ ಯದುವೀರ್​ ಪರಾಕ್, ಬಹು ಪರಾಕ್​. ಹೀಗೆ ವಂಧಿ ಮಾಗಧರು ಬಹುಪರಾಕ್​ ಕೂಗುತ್ತಿದ್ದರೆ, ಇತ್ತ ರಾಜಗಾಂಭೀರ್ಯ ನಡಿಗೆಯಲ್ಲಿ ಯದುವಂಶದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮಿಸಿದರು. ಇದು ಇವತ್ತು ಮೈಸೂರಿನಲ್ಲಿ ನಡೆದ ದಸರಾ ಖಾಸಗಿ ದರ್ಬಾರ್​ನ ಝಲಕ್.

1 / 7
ಇವತ್ತಿನಿಂದ ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಆರಂಭವಾಗಿದೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರು ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಖಾಸಗಿ ದರ್ಬಾರ್ ನಡೆಸಲಾಗುತ್ತದೆ. ಅದರಂತೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಖಾಸಗಿ ದರ್ಬಾರ್ ನಡೆಸಿದರು.

ಇವತ್ತಿನಿಂದ ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಆರಂಭವಾಗಿದೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರು ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಖಾಸಗಿ ದರ್ಬಾರ್ ನಡೆಸಲಾಗುತ್ತದೆ. ಅದರಂತೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಖಾಸಗಿ ದರ್ಬಾರ್ ನಡೆಸಿದರು.

2 / 7
ರಾಜಾ ಪೋಷಾಕು ಧರಿಸಿದ ಯದುವೀರ್​ ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ, ವಂಧಿ ಮಾಗಧರು ಬಹು ಪರಾಕ್ ಕೂಗಿದರು. ಸಿಂಹಾಸನದ ಬಳಿ ತೆರಳಿದ ಯದುವೀರ್​​, ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು. ಬಳಿಕ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು.

ರಾಜಾ ಪೋಷಾಕು ಧರಿಸಿದ ಯದುವೀರ್​ ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ, ವಂಧಿ ಮಾಗಧರು ಬಹು ಪರಾಕ್ ಕೂಗಿದರು. ಸಿಂಹಾಸನದ ಬಳಿ ತೆರಳಿದ ಯದುವೀರ್​​, ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು. ಬಳಿಕ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು.

3 / 7
ಇದಾದ ನಂತರ ಅವರು ಸಿಂಹಾಸನಾರೂಢರಾದರು.ಇದೇ ವೇಳೆ ಪತ್ನಿ ತ್ರಿಷಿಕಾಕುಮಾರಿ ಯದುವೀರ ಪಾದಪೂಜೆ ಮಾಡಿದರು. ಪತ್ನಿ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿ ವಂದಿಸಿದರು. ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿಬೆಟ್ಟ, ಉತ್ತನಹಳ್ಳಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್​ಗೆ ನೀಡಲಾಯ್ತು. ಎಲ್ಲ ಪ್ರಸಾದವನ್ನು ಶ್ರದ್ದಾ ಭಕ್ತಿಯಿಂದ ಯದುವೀರ್ ಸ್ವೀಕರಿಸಿದ್ರು.

ಇದಾದ ನಂತರ ಅವರು ಸಿಂಹಾಸನಾರೂಢರಾದರು.ಇದೇ ವೇಳೆ ಪತ್ನಿ ತ್ರಿಷಿಕಾಕುಮಾರಿ ಯದುವೀರ ಪಾದಪೂಜೆ ಮಾಡಿದರು. ಪತ್ನಿ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿ ವಂದಿಸಿದರು. ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿಬೆಟ್ಟ, ಉತ್ತನಹಳ್ಳಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್​ಗೆ ನೀಡಲಾಯ್ತು. ಎಲ್ಲ ಪ್ರಸಾದವನ್ನು ಶ್ರದ್ದಾ ಭಕ್ತಿಯಿಂದ ಯದುವೀರ್ ಸ್ವೀಕರಿಸಿದ್ರು.

4 / 7
ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಯ್ತು. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್​, ಸೆಲ್ಯೂಟ್​ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಿದರು. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸಿದರು.

ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಯ್ತು. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್​, ಸೆಲ್ಯೂಟ್​ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಿದರು. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸಿದರು.

5 / 7
 ಇನ್ನು ಯದುವೀರ್​ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗಿದವು. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್​ ಕಂಕಣ ಕಟ್ಟಿಕೊಂಡರು. ಈ ವೇಳೆ ಅರಮನೆಯ ಕೊಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಹಸು, ಕುದುರೆ, ಜೊತೆ ಆಗಮಿಸಿದ ಮುತ್ತೈದೆಯರು ಕಳಸ ತೆಗೆದುಕೊಂಡು ಸಾಗಿದರು.

ಇನ್ನು ಯದುವೀರ್​ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗಿದವು. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್​ ಕಂಕಣ ಕಟ್ಟಿಕೊಂಡರು. ಈ ವೇಳೆ ಅರಮನೆಯ ಕೊಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಹಸು, ಕುದುರೆ, ಜೊತೆ ಆಗಮಿಸಿದ ಮುತ್ತೈದೆಯರು ಕಳಸ ತೆಗೆದುಕೊಂಡು ಸಾಗಿದರು.

6 / 7
ಸುಮಾರು 1 ಗಂಟೆಗಳ ಕಾಲ ಮೈಸೂರು ಅರಮನೆಯಲ್ಲಿ ಗತಕಾಲದ ವೈಭವ ಮರುಕಳಿಸಿತ್ತು. ಆದ್ರೆ, ಖಾಸಗಿ ಕಾರ್ಯಕ್ರಮವಾದ್ದರಿಂದ ಸಾರ್ವಜನಿಕರಿಗೆ ಅರಮನೆ‌ ಪ್ರವೇಶ ನಿಷೇಧ ಮಾಡಲಾಗಿತ್ತು. ಒಟ್ಟಾರೆ ಮೈಸೂರು ಅರಮನೆಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು, ಈ‌ ಮೂಲಕ ದಸರಾ ದರ್ಬಾರ್ ಆರಂಭವಾಗಿದೆ.

ಸುಮಾರು 1 ಗಂಟೆಗಳ ಕಾಲ ಮೈಸೂರು ಅರಮನೆಯಲ್ಲಿ ಗತಕಾಲದ ವೈಭವ ಮರುಕಳಿಸಿತ್ತು. ಆದ್ರೆ, ಖಾಸಗಿ ಕಾರ್ಯಕ್ರಮವಾದ್ದರಿಂದ ಸಾರ್ವಜನಿಕರಿಗೆ ಅರಮನೆ‌ ಪ್ರವೇಶ ನಿಷೇಧ ಮಾಡಲಾಗಿತ್ತು. ಒಟ್ಟಾರೆ ಮೈಸೂರು ಅರಮನೆಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು, ಈ‌ ಮೂಲಕ ದಸರಾ ದರ್ಬಾರ್ ಆರಂಭವಾಗಿದೆ.

7 / 7
Follow us
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ