AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ತುಂಬಿದ ದೇವರಬೆಳಕೆರೆ ಜಲಾಶಯ; ದುಮ್ಮಿಕ್ಕಿ ಹರಿಯೋ ನೀರನ್ನ ನೋಡೋದೆ ಚಂದ

ಅದು ಕ್ಷೀರ ಸಮುದ್ರವಲ್ಲ, ಯಾವ ನದಿಗೂ ಕಟ್ಟಿದ ಡ್ಯಾಂ ಅಲ್ಲ. ನಿರಂತರ ಸುರಿದ ಮಳೆಗೆ ಅಲ್ಲೊಂದು ಸ್ವರ್ಗವೇ ಸೃಷ್ಠಿಯಾಗಿ, ಪ್ರವಾಸಿ ತಾಣವಾಗಿದೆ. ಹೌದು, ದಾವಣಗೆರೆಯ ಹರಿಹರದಲ್ಲಿರುವ ದೇವರ ಬೆಳಕೆರೆ ಜಲಾಶಯಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. 

ಕಿರಣ್ ಹನುಮಂತ್​ ಮಾದಾರ್
|

Updated on: Jul 25, 2024 | 7:46 PM

Share
ಇದು ದಾವಣಗೆರೆಯ ಹರಿಹರದಲ್ಲಿರುವ ದೇವರಬೆಳಕೆರೆ ಜಲಾಶಯ. ಸ್ವಚ್ಚಂದ ಪರಿಸರ, ಶಾಂತ ಪ್ರದೇಶದಲ್ಲಿರುವ ಈ ಜಲಾಶಯವನ್ನು ನೋಡುವುದಕ್ಕೆ ಎಂದು ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಬೀಸುವ ಸವಿ ತಂಗಾಳಿಯ ಮಜವೇ ಬೇರೆ.

ಇದು ದಾವಣಗೆರೆಯ ಹರಿಹರದಲ್ಲಿರುವ ದೇವರಬೆಳಕೆರೆ ಜಲಾಶಯ. ಸ್ವಚ್ಚಂದ ಪರಿಸರ, ಶಾಂತ ಪ್ರದೇಶದಲ್ಲಿರುವ ಈ ಜಲಾಶಯವನ್ನು ನೋಡುವುದಕ್ಕೆ ಎಂದು ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಬೀಸುವ ಸವಿ ತಂಗಾಳಿಯ ಮಜವೇ ಬೇರೆ.

1 / 6
ಈ ಜಲಾಶಯದಲ್ಲಿ ದುಮ್ಮಿಕ್ಕಿ ಹರಿಯುವ ನೀರನ್ನು ನೋಡುವುದೇ ಒಂದು ಚಂದ. ಹಾಲಿನಂತೆ ಹರಿಯುವ ಈ ನೀರಿನ ಬೆಳ್ಳನೇ ಸಾಲು, ನೋಡುಗರನ್ನು ಸೆಳೆಯುತ್ತದೆ. ಅದರಲ್ಲೂ ವೀಕೆಂಡ್ ಬಂದರೆ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ, ಇಲ್ಲಿ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂಬುದೇ ಬೇಸರದ ಸಂಗತಿ.

ಈ ಜಲಾಶಯದಲ್ಲಿ ದುಮ್ಮಿಕ್ಕಿ ಹರಿಯುವ ನೀರನ್ನು ನೋಡುವುದೇ ಒಂದು ಚಂದ. ಹಾಲಿನಂತೆ ಹರಿಯುವ ಈ ನೀರಿನ ಬೆಳ್ಳನೇ ಸಾಲು, ನೋಡುಗರನ್ನು ಸೆಳೆಯುತ್ತದೆ. ಅದರಲ್ಲೂ ವೀಕೆಂಡ್ ಬಂದರೆ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ, ಇಲ್ಲಿ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂಬುದೇ ಬೇಸರದ ಸಂಗತಿ.

2 / 6
ಪಾರ್ಕ್ ಆಗಲಿ ಅಥವಾ ಕುಳಿತುಕೊಳ್ಳಲು ಆಸನಗಳಾಗಲಿ ಇಲ್ಲವೇ ಇಲ್ಲ. ಹೀಗಾಗಿ ಈ ಡ್ಯಾಂ ನ್ನು ಅಭಿವೃದ್ದಿ ಪಡಿಸಿ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಮಳೆಯಿಂದ ಡ್ಯಾಂ ಗೆ ಭರ್ಜರಿ ನೀರು ಹರಿದು ಬರುತ್ತಿದ್ದು, ಇದೇ ಕಾರಣ ಭರ್ಜರಿ ಮೀನುಗಳ ಬೇಟೆ ಸಹ ಆರಂಭವಾಗಿದೆ.

ಪಾರ್ಕ್ ಆಗಲಿ ಅಥವಾ ಕುಳಿತುಕೊಳ್ಳಲು ಆಸನಗಳಾಗಲಿ ಇಲ್ಲವೇ ಇಲ್ಲ. ಹೀಗಾಗಿ ಈ ಡ್ಯಾಂ ನ್ನು ಅಭಿವೃದ್ದಿ ಪಡಿಸಿ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಮಳೆಯಿಂದ ಡ್ಯಾಂ ಗೆ ಭರ್ಜರಿ ನೀರು ಹರಿದು ಬರುತ್ತಿದ್ದು, ಇದೇ ಕಾರಣ ಭರ್ಜರಿ ಮೀನುಗಳ ಬೇಟೆ ಸಹ ಆರಂಭವಾಗಿದೆ.

3 / 6
ಹರಿಹರದಿಂದ ಕೆಲವೇ ಕೆಲವು ಕಿ.ಮೀ ದೂರದಲ್ಲಿರುವ ಈ ಡ್ಯಾಂಗೆ ಪ್ರತಿನಿತ್ಯ ಸೂರ್ಯಾಸ್ತದ ಸಮಯದಲ್ಲಿ ಪ್ರವಾಸಿಗರು ಬರುತ್ತಾರೆ. ಜಲಾಶಯದಲ್ಲಿ ಮೈತುಂಬಿ ಹರಿಯುವ ದೃಶ್ಯ ಕಣ್ಣಿಗೆ ತಂಪೆರೆಯುತ್ತದೆ. ಆಳೆತ್ತರದಿಂದ ದುಮ್ಮಿಕ್ಕೋ ಬೆಳ್ನೊರೆಯ ಧಾರೆ ನೋಡುಗರ ಕಣ್ಣಿಗೆ ಹಬ್ಬದ ಅನುಭವ.

ಹರಿಹರದಿಂದ ಕೆಲವೇ ಕೆಲವು ಕಿ.ಮೀ ದೂರದಲ್ಲಿರುವ ಈ ಡ್ಯಾಂಗೆ ಪ್ರತಿನಿತ್ಯ ಸೂರ್ಯಾಸ್ತದ ಸಮಯದಲ್ಲಿ ಪ್ರವಾಸಿಗರು ಬರುತ್ತಾರೆ. ಜಲಾಶಯದಲ್ಲಿ ಮೈತುಂಬಿ ಹರಿಯುವ ದೃಶ್ಯ ಕಣ್ಣಿಗೆ ತಂಪೆರೆಯುತ್ತದೆ. ಆಳೆತ್ತರದಿಂದ ದುಮ್ಮಿಕ್ಕೋ ಬೆಳ್ನೊರೆಯ ಧಾರೆ ನೋಡುಗರ ಕಣ್ಣಿಗೆ ಹಬ್ಬದ ಅನುಭವ.

4 / 6
 ಆದ್ರೆ ಇಲ್ಲಿಗೆ ಬಂದವರಿಗೆ ಕುಡಿಯೋಕೆ ನೀರಿಲ್ಲ, ಶೌಚಾಲಯಗಳಂತೂ ಇಲ್ಲವೇ ಇಲ್ಲ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಕೂಡ ಪ್ರವಾಸಿಗರಿಗೆ ಮಾತ್ರ ಕೂಲ್ ಪ್ಲೇಸ್ ಆಗಿದೆ.

ಆದ್ರೆ ಇಲ್ಲಿಗೆ ಬಂದವರಿಗೆ ಕುಡಿಯೋಕೆ ನೀರಿಲ್ಲ, ಶೌಚಾಲಯಗಳಂತೂ ಇಲ್ಲವೇ ಇಲ್ಲ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಕೂಡ ಪ್ರವಾಸಿಗರಿಗೆ ಮಾತ್ರ ಕೂಲ್ ಪ್ಲೇಸ್ ಆಗಿದೆ.

5 / 6
ಇಲ್ಲಿನ 33 ಚದರ ಮೈಲಿ ವಿಸ್ತೀರ್ಣದ ಜಲಾಶಯ ನೋಡುವುದೇ ಖುಷಿ. ಆದ್ರೆ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಇದು ದಾವಣಗೆರೆಯ ಮತ್ತೊಂದು ಪ್ರವಾಸಿ ತಾಣ ಆಗೋದರಲ್ಲಿ ಸಂಶಯವಿಲ್ಲ. ಇನ್ನಾದರೂ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಸಕರು ಮನಸ್ಸು ಮಾಡಿ ಅಭಿವೃದ್ದಿ ಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇಲ್ಲಿನ 33 ಚದರ ಮೈಲಿ ವಿಸ್ತೀರ್ಣದ ಜಲಾಶಯ ನೋಡುವುದೇ ಖುಷಿ. ಆದ್ರೆ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಇದು ದಾವಣಗೆರೆಯ ಮತ್ತೊಂದು ಪ್ರವಾಸಿ ತಾಣ ಆಗೋದರಲ್ಲಿ ಸಂಶಯವಿಲ್ಲ. ಇನ್ನಾದರೂ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಸಕರು ಮನಸ್ಸು ಮಾಡಿ ಅಭಿವೃದ್ದಿ ಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.

6 / 6
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!