AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ತುಂಬಿದ ದೇವರಬೆಳಕೆರೆ ಜಲಾಶಯ; ದುಮ್ಮಿಕ್ಕಿ ಹರಿಯೋ ನೀರನ್ನ ನೋಡೋದೆ ಚಂದ

ಅದು ಕ್ಷೀರ ಸಮುದ್ರವಲ್ಲ, ಯಾವ ನದಿಗೂ ಕಟ್ಟಿದ ಡ್ಯಾಂ ಅಲ್ಲ. ನಿರಂತರ ಸುರಿದ ಮಳೆಗೆ ಅಲ್ಲೊಂದು ಸ್ವರ್ಗವೇ ಸೃಷ್ಠಿಯಾಗಿ, ಪ್ರವಾಸಿ ತಾಣವಾಗಿದೆ. ಹೌದು, ದಾವಣಗೆರೆಯ ಹರಿಹರದಲ್ಲಿರುವ ದೇವರ ಬೆಳಕೆರೆ ಜಲಾಶಯಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. 

ಕಿರಣ್ ಹನುಮಂತ್​ ಮಾದಾರ್
|

Updated on: Jul 25, 2024 | 7:46 PM

Share
ಇದು ದಾವಣಗೆರೆಯ ಹರಿಹರದಲ್ಲಿರುವ ದೇವರಬೆಳಕೆರೆ ಜಲಾಶಯ. ಸ್ವಚ್ಚಂದ ಪರಿಸರ, ಶಾಂತ ಪ್ರದೇಶದಲ್ಲಿರುವ ಈ ಜಲಾಶಯವನ್ನು ನೋಡುವುದಕ್ಕೆ ಎಂದು ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಬೀಸುವ ಸವಿ ತಂಗಾಳಿಯ ಮಜವೇ ಬೇರೆ.

ಇದು ದಾವಣಗೆರೆಯ ಹರಿಹರದಲ್ಲಿರುವ ದೇವರಬೆಳಕೆರೆ ಜಲಾಶಯ. ಸ್ವಚ್ಚಂದ ಪರಿಸರ, ಶಾಂತ ಪ್ರದೇಶದಲ್ಲಿರುವ ಈ ಜಲಾಶಯವನ್ನು ನೋಡುವುದಕ್ಕೆ ಎಂದು ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಬೀಸುವ ಸವಿ ತಂಗಾಳಿಯ ಮಜವೇ ಬೇರೆ.

1 / 6
ಈ ಜಲಾಶಯದಲ್ಲಿ ದುಮ್ಮಿಕ್ಕಿ ಹರಿಯುವ ನೀರನ್ನು ನೋಡುವುದೇ ಒಂದು ಚಂದ. ಹಾಲಿನಂತೆ ಹರಿಯುವ ಈ ನೀರಿನ ಬೆಳ್ಳನೇ ಸಾಲು, ನೋಡುಗರನ್ನು ಸೆಳೆಯುತ್ತದೆ. ಅದರಲ್ಲೂ ವೀಕೆಂಡ್ ಬಂದರೆ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ, ಇಲ್ಲಿ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂಬುದೇ ಬೇಸರದ ಸಂಗತಿ.

ಈ ಜಲಾಶಯದಲ್ಲಿ ದುಮ್ಮಿಕ್ಕಿ ಹರಿಯುವ ನೀರನ್ನು ನೋಡುವುದೇ ಒಂದು ಚಂದ. ಹಾಲಿನಂತೆ ಹರಿಯುವ ಈ ನೀರಿನ ಬೆಳ್ಳನೇ ಸಾಲು, ನೋಡುಗರನ್ನು ಸೆಳೆಯುತ್ತದೆ. ಅದರಲ್ಲೂ ವೀಕೆಂಡ್ ಬಂದರೆ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ, ಇಲ್ಲಿ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂಬುದೇ ಬೇಸರದ ಸಂಗತಿ.

2 / 6
ಪಾರ್ಕ್ ಆಗಲಿ ಅಥವಾ ಕುಳಿತುಕೊಳ್ಳಲು ಆಸನಗಳಾಗಲಿ ಇಲ್ಲವೇ ಇಲ್ಲ. ಹೀಗಾಗಿ ಈ ಡ್ಯಾಂ ನ್ನು ಅಭಿವೃದ್ದಿ ಪಡಿಸಿ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಮಳೆಯಿಂದ ಡ್ಯಾಂ ಗೆ ಭರ್ಜರಿ ನೀರು ಹರಿದು ಬರುತ್ತಿದ್ದು, ಇದೇ ಕಾರಣ ಭರ್ಜರಿ ಮೀನುಗಳ ಬೇಟೆ ಸಹ ಆರಂಭವಾಗಿದೆ.

ಪಾರ್ಕ್ ಆಗಲಿ ಅಥವಾ ಕುಳಿತುಕೊಳ್ಳಲು ಆಸನಗಳಾಗಲಿ ಇಲ್ಲವೇ ಇಲ್ಲ. ಹೀಗಾಗಿ ಈ ಡ್ಯಾಂ ನ್ನು ಅಭಿವೃದ್ದಿ ಪಡಿಸಿ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಮಳೆಯಿಂದ ಡ್ಯಾಂ ಗೆ ಭರ್ಜರಿ ನೀರು ಹರಿದು ಬರುತ್ತಿದ್ದು, ಇದೇ ಕಾರಣ ಭರ್ಜರಿ ಮೀನುಗಳ ಬೇಟೆ ಸಹ ಆರಂಭವಾಗಿದೆ.

3 / 6
ಹರಿಹರದಿಂದ ಕೆಲವೇ ಕೆಲವು ಕಿ.ಮೀ ದೂರದಲ್ಲಿರುವ ಈ ಡ್ಯಾಂಗೆ ಪ್ರತಿನಿತ್ಯ ಸೂರ್ಯಾಸ್ತದ ಸಮಯದಲ್ಲಿ ಪ್ರವಾಸಿಗರು ಬರುತ್ತಾರೆ. ಜಲಾಶಯದಲ್ಲಿ ಮೈತುಂಬಿ ಹರಿಯುವ ದೃಶ್ಯ ಕಣ್ಣಿಗೆ ತಂಪೆರೆಯುತ್ತದೆ. ಆಳೆತ್ತರದಿಂದ ದುಮ್ಮಿಕ್ಕೋ ಬೆಳ್ನೊರೆಯ ಧಾರೆ ನೋಡುಗರ ಕಣ್ಣಿಗೆ ಹಬ್ಬದ ಅನುಭವ.

ಹರಿಹರದಿಂದ ಕೆಲವೇ ಕೆಲವು ಕಿ.ಮೀ ದೂರದಲ್ಲಿರುವ ಈ ಡ್ಯಾಂಗೆ ಪ್ರತಿನಿತ್ಯ ಸೂರ್ಯಾಸ್ತದ ಸಮಯದಲ್ಲಿ ಪ್ರವಾಸಿಗರು ಬರುತ್ತಾರೆ. ಜಲಾಶಯದಲ್ಲಿ ಮೈತುಂಬಿ ಹರಿಯುವ ದೃಶ್ಯ ಕಣ್ಣಿಗೆ ತಂಪೆರೆಯುತ್ತದೆ. ಆಳೆತ್ತರದಿಂದ ದುಮ್ಮಿಕ್ಕೋ ಬೆಳ್ನೊರೆಯ ಧಾರೆ ನೋಡುಗರ ಕಣ್ಣಿಗೆ ಹಬ್ಬದ ಅನುಭವ.

4 / 6
 ಆದ್ರೆ ಇಲ್ಲಿಗೆ ಬಂದವರಿಗೆ ಕುಡಿಯೋಕೆ ನೀರಿಲ್ಲ, ಶೌಚಾಲಯಗಳಂತೂ ಇಲ್ಲವೇ ಇಲ್ಲ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಕೂಡ ಪ್ರವಾಸಿಗರಿಗೆ ಮಾತ್ರ ಕೂಲ್ ಪ್ಲೇಸ್ ಆಗಿದೆ.

ಆದ್ರೆ ಇಲ್ಲಿಗೆ ಬಂದವರಿಗೆ ಕುಡಿಯೋಕೆ ನೀರಿಲ್ಲ, ಶೌಚಾಲಯಗಳಂತೂ ಇಲ್ಲವೇ ಇಲ್ಲ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಕೂಡ ಪ್ರವಾಸಿಗರಿಗೆ ಮಾತ್ರ ಕೂಲ್ ಪ್ಲೇಸ್ ಆಗಿದೆ.

5 / 6
ಇಲ್ಲಿನ 33 ಚದರ ಮೈಲಿ ವಿಸ್ತೀರ್ಣದ ಜಲಾಶಯ ನೋಡುವುದೇ ಖುಷಿ. ಆದ್ರೆ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಇದು ದಾವಣಗೆರೆಯ ಮತ್ತೊಂದು ಪ್ರವಾಸಿ ತಾಣ ಆಗೋದರಲ್ಲಿ ಸಂಶಯವಿಲ್ಲ. ಇನ್ನಾದರೂ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಸಕರು ಮನಸ್ಸು ಮಾಡಿ ಅಭಿವೃದ್ದಿ ಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇಲ್ಲಿನ 33 ಚದರ ಮೈಲಿ ವಿಸ್ತೀರ್ಣದ ಜಲಾಶಯ ನೋಡುವುದೇ ಖುಷಿ. ಆದ್ರೆ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಇದು ದಾವಣಗೆರೆಯ ಮತ್ತೊಂದು ಪ್ರವಾಸಿ ತಾಣ ಆಗೋದರಲ್ಲಿ ಸಂಶಯವಿಲ್ಲ. ಇನ್ನಾದರೂ ಪ್ರವಾಸೋದ್ಯಮ ಇಲಾಖೆ ಹಾಗೂ ಶಾಸಕರು ಮನಸ್ಸು ಮಾಡಿ ಅಭಿವೃದ್ದಿ ಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.

6 / 6
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್