AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deviramma Temple: ವರ್ಷಕ್ಕೊಮ್ಮೆ ದೀಪಾವಳಿಯಂದು ಮಾತ್ರ ದರುಶನ ನೀಡುವ ದೇವಿರಮ್ಮ ನೋಡಲು ಹರಿದುಬಂದ ಭಕ್ತ ಸಾಗರ

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಬಿಂಡಿಗ ದೇವಿರಮ್ಮನ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಜನ ಬೆಟ್ಟ ಹತ್ತಿ ಬರುತ್ತಿದ್ದಾರೆ. ದುರ್ಗಮ ಹಾದಿಯಲ್ಲಿ ಬರಿಗಾಲಲ್ಲಿ ಭಕ್ತರು ಬೆಟ್ಟ ಏರುತ್ತಿದ್ದು ಈ ವೇಳೆ ಭಕ್ತರ ನೂಕುನುಗ್ಗಲು ಕೂಡ ಸಂಭವಿಸಿದೆ.

TV9 Web
| Updated By: ಆಯೇಷಾ ಬಾನು|

Updated on:Oct 24, 2022 | 8:15 AM

Share
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಬಿಂಡಿಗ ದೇವಿರಮ್ಮನ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಜನ ಬೆಟ್ಟ ಹತ್ತಿ ಬರುತ್ತಿದ್ದಾರೆ. ದುರ್ಗಮ ಹಾದಿಯಲ್ಲಿ ಬರಿಗಾಲಲ್ಲಿ ಭಕ್ತರು ಬೆಟ್ಟ ಏರುತ್ತಿದ್ದು ಈ ವೇಳೆ ಭಕ್ತರ ನೂಕುನುಗ್ಗಲು ಕೂಡ ಸಂಭವಿಸಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಬಿಂಡಿಗ ದೇವಿರಮ್ಮನ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಜನ ಬೆಟ್ಟ ಹತ್ತಿ ಬರುತ್ತಿದ್ದಾರೆ. ದುರ್ಗಮ ಹಾದಿಯಲ್ಲಿ ಬರಿಗಾಲಲ್ಲಿ ಭಕ್ತರು ಬೆಟ್ಟ ಏರುತ್ತಿದ್ದು ಈ ವೇಳೆ ಭಕ್ತರ ನೂಕುನುಗ್ಗಲು ಕೂಡ ಸಂಭವಿಸಿದೆ.

1 / 7
ವರ್ಷಕ್ಕೊಮ್ಮೆ ಅದರಲ್ಲೂ ದೀಪಾವಳಿಯಂದು ಮಾತ್ರ ದರುಶನ ನೀಡುವ ದೇವಿರಮ್ಮನನ್ನು ಕಣ್ತುಂಬಿಕೊಳ್ಳಲು ಭಕ್ತರು ರಾತ್ರಿಯಿಂದಲೇ ಬೆಟ್ಟವನ್ನೇರಲು ಆರಂಭಿಸುತ್ತಾರೆ. ಕಲ್ಲು ಮುಳ್ಳಿನ ಹಾದಿಯನ್ನೂ ಲೆಕ್ಕಿಸದೇ ಬೆಟ್ಟವನ್ನು ಏರುತ್ತಾರೆ.

ವರ್ಷಕ್ಕೊಮ್ಮೆ ಅದರಲ್ಲೂ ದೀಪಾವಳಿಯಂದು ಮಾತ್ರ ದರುಶನ ನೀಡುವ ದೇವಿರಮ್ಮನನ್ನು ಕಣ್ತುಂಬಿಕೊಳ್ಳಲು ಭಕ್ತರು ರಾತ್ರಿಯಿಂದಲೇ ಬೆಟ್ಟವನ್ನೇರಲು ಆರಂಭಿಸುತ್ತಾರೆ. ಕಲ್ಲು ಮುಳ್ಳಿನ ಹಾದಿಯನ್ನೂ ಲೆಕ್ಕಿಸದೇ ಬೆಟ್ಟವನ್ನು ಏರುತ್ತಾರೆ.

2 / 7
ಕಾಫಿ ನಾಡು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ಗ್ರಾಮದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ 3 ಸಾವಿರ ಅಡಿ ಎತ್ತರದ ಬೆಟ್ಟವನ್ನೇ ದೇವೀರಮ್ಮ ಬೆಟ್ಟ ಎನ್ನಲಾಗುತ್ತೆ. ಈ ದೇವಿಯನ್ನು ಬಿಂಡಿಗ ದೇವೀರಮ್ಮ ಎಂತಲೂ ಕರೆಯುತ್ತಾರೆ.

ಕಾಫಿ ನಾಡು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ಗ್ರಾಮದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ 3 ಸಾವಿರ ಅಡಿ ಎತ್ತರದ ಬೆಟ್ಟವನ್ನೇ ದೇವೀರಮ್ಮ ಬೆಟ್ಟ ಎನ್ನಲಾಗುತ್ತೆ. ಈ ದೇವಿಯನ್ನು ಬಿಂಡಿಗ ದೇವೀರಮ್ಮ ಎಂತಲೂ ಕರೆಯುತ್ತಾರೆ.

3 / 7
ಈ ಬೆಟ್ಟಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆಯುತ್ತಾರೆ. ತಾಯಿಯ ದರ್ಶನದ ಹಾದಿ ತುಂಬನೇ ಕಠಿಣ. ಇಲ್ಲಿಗೆ ಬಂದು ತಾಯಿ ದರ್ಶನ ಮಾಡಿದರೆ ತಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತೆ ಎನ್ನಲಾಗುತ್ತೆ.

ಈ ಬೆಟ್ಟಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆಯುತ್ತಾರೆ. ತಾಯಿಯ ದರ್ಶನದ ಹಾದಿ ತುಂಬನೇ ಕಠಿಣ. ಇಲ್ಲಿಗೆ ಬಂದು ತಾಯಿ ದರ್ಶನ ಮಾಡಿದರೆ ತಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತೆ ಎನ್ನಲಾಗುತ್ತೆ.

4 / 7
ಇಲ್ಲಿ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯನ್ನು ಹೊತ್ತು. ಈ ದಿನ ತಾಯಿಗೆ ಅರ್ಪಿಸುತ್ತಾರೆ. ಹರಕೆಯ ರೂಪದಲ್ಲಿ ತಾಯಿಗೆ ತುಪ್ಪ, ಬಳೆ, ಬಟ್ಟೆ, ಕಟ್ಟಿಗೆಗಳನ್ನು ಅರ್ಪಿಸಲಾಗುತ್ತೆ.

ಇಲ್ಲಿ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯನ್ನು ಹೊತ್ತು. ಈ ದಿನ ತಾಯಿಗೆ ಅರ್ಪಿಸುತ್ತಾರೆ. ಹರಕೆಯ ರೂಪದಲ್ಲಿ ತಾಯಿಗೆ ತುಪ್ಪ, ಬಳೆ, ಬಟ್ಟೆ, ಕಟ್ಟಿಗೆಗಳನ್ನು ಅರ್ಪಿಸಲಾಗುತ್ತೆ.

5 / 7
ಇಲ್ಲಿ ದೀಪಾವಳಿಯ ಎರಡನೇ ದಿನ ದೇವಾಲಯದ ಬಾಗಿಲು ತನ್ನಿಂದ ತಾನೆ ತೆರೆಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಲ್ಲಿ ನಡೆಯುವ ಜಾತ್ರೆಯಲ್ಲಿ ಪಾಲ್ಗೊಂಡರೆ ಭಕ್ತರ ಆಸೆಗಳು ಈಡೇರುತ್ತವೆಯಂತೆ.

ಇಲ್ಲಿ ದೀಪಾವಳಿಯ ಎರಡನೇ ದಿನ ದೇವಾಲಯದ ಬಾಗಿಲು ತನ್ನಿಂದ ತಾನೆ ತೆರೆಯುತ್ತದೆ. ಇದನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಲ್ಲಿ ನಡೆಯುವ ಜಾತ್ರೆಯಲ್ಲಿ ಪಾಲ್ಗೊಂಡರೆ ಭಕ್ತರ ಆಸೆಗಳು ಈಡೇರುತ್ತವೆಯಂತೆ.

6 / 7
ಪೌರಾಣಿಕ ಹಿನ್ನಲೆಯ ಪ್ರಕಾರ ದುರ್ಗಾ ದೇವಿಯು ಮಹಿಷಾಸುರನನ್ನು ಕೊಂದು ಉಗ್ರ ರೂಪ ತಾಳಿರುತ್ತಾಳೆ. ತನ್ನ ಕೋಪಕ್ಕೆ ಭಕ್ತರು ಸಿಲುಕಿಕೊಳ್ಳದಿರಲಿ ಎನ್ನುವ ಕಾರಣಕ್ಕೆ ಚಂದ್ರದ್ರೋಣ ಪರ್ವತದ ತಪ್ಪಲಿಗೆ ಬರುತ್ತಾಳೆ. ಈ ಪರ್ವತದಲ್ಲಿ ರುದ್ರಮುನಿ, ಸೀತಯ್ಯ, ಮುಳ್ಳಯ್ಯ, ದತ್ತಾತ್ರೇಯ, ಗಾಳಲ್ಲಿ ಅಜ್ಜಯ್ಯ ಈ ಐದು ಜನ ತಪಸ್ವಿಗಳು ನೆಲೆಸಿರುತ್ತಾರೆ. ಅವರಲ್ಲಿ ತಾಯಿಯು ತನಗೆ ನೆಲೆಸಲು ಸ್ಥಳ ನೀಡುವಂತೆ ಕೋರುತ್ತಾಳೆ. ತಾವು ಐದು ಜನ ಪುರುಷರಾಗಿದ್ದರಿಂದ ತಮ್ಮಿಂದ ಅಣತಿ ದೂರದಲ್ಲಿ ನೆಲೆಸುವಂತೆ ಈ ಬೆಟ್ಟವನ್ನು ತೋರಿಸುತ್ತಾರೆ. ಅದರಂತೆಯೇ ತಾಯಿ ಆ ಬೆಟ್ಟದಲ್ಲಿ ಹೋಗಿ ನೆಲೆಸುತ್ತಾಳೆ ಎಂಬ ಕಥೆಯಿದೆ.

ಪೌರಾಣಿಕ ಹಿನ್ನಲೆಯ ಪ್ರಕಾರ ದುರ್ಗಾ ದೇವಿಯು ಮಹಿಷಾಸುರನನ್ನು ಕೊಂದು ಉಗ್ರ ರೂಪ ತಾಳಿರುತ್ತಾಳೆ. ತನ್ನ ಕೋಪಕ್ಕೆ ಭಕ್ತರು ಸಿಲುಕಿಕೊಳ್ಳದಿರಲಿ ಎನ್ನುವ ಕಾರಣಕ್ಕೆ ಚಂದ್ರದ್ರೋಣ ಪರ್ವತದ ತಪ್ಪಲಿಗೆ ಬರುತ್ತಾಳೆ. ಈ ಪರ್ವತದಲ್ಲಿ ರುದ್ರಮುನಿ, ಸೀತಯ್ಯ, ಮುಳ್ಳಯ್ಯ, ದತ್ತಾತ್ರೇಯ, ಗಾಳಲ್ಲಿ ಅಜ್ಜಯ್ಯ ಈ ಐದು ಜನ ತಪಸ್ವಿಗಳು ನೆಲೆಸಿರುತ್ತಾರೆ. ಅವರಲ್ಲಿ ತಾಯಿಯು ತನಗೆ ನೆಲೆಸಲು ಸ್ಥಳ ನೀಡುವಂತೆ ಕೋರುತ್ತಾಳೆ. ತಾವು ಐದು ಜನ ಪುರುಷರಾಗಿದ್ದರಿಂದ ತಮ್ಮಿಂದ ಅಣತಿ ದೂರದಲ್ಲಿ ನೆಲೆಸುವಂತೆ ಈ ಬೆಟ್ಟವನ್ನು ತೋರಿಸುತ್ತಾರೆ. ಅದರಂತೆಯೇ ತಾಯಿ ಆ ಬೆಟ್ಟದಲ್ಲಿ ಹೋಗಿ ನೆಲೆಸುತ್ತಾಳೆ ಎಂಬ ಕಥೆಯಿದೆ.

7 / 7

Published On - 8:15 am, Mon, 24 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ