Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್​ ಟೈಮಲ್ಲಿ 6 ಲಕ್ಷ ರೂ ವರೆಗೆ ರೇಟ್​​ ಏರಿಸಿಕೊಂಡಿದ್ದ ಧಾರವಾಡದ ಜಂಗ್ಲಿ ಟಗರು ಹೃದಯಾಘಾತಕ್ಕೆ ಬಲಿ

ಈ ಧಾರವಾಡ ಜಂಗ್ಲಿಯನ್ನು ಖರೀದಿಸಲು ಕಳೆದ ವಾರ ಬಕ್ರೀದ್​ ಟೈಮಲ್ಲಿ ವ್ಯಕ್ತಿಯೊಬ್ಬರು ಬಂದಿದ್ದರು, 6 ಲಕ್ಷ ರೂ ಕೊಡೋದಾಗಿ ಹೇಳಿದ್ದರಂತೆ. ಆದರೆ ಮಾರಾಟ ಮಾಡಲು ಮನೆಯವರು ನಿರಾಕರಿಸಿದ್ದರು. ಅದಾಗಿ ಒಂದು ವಾರಕ್ಕೆ ಟಗರು ಮೃತಪಟ್ಟಿದೆ. ಹೀಗೆ ಆಕಸ್ಮಿಕವಾಗಿ ಮೃತಪಡಲು ಹೃದಯಾಘಾತವೇ ಕಾರಣ ಎನ್ನಲಾಗಿದೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on: Jul 04, 2023 | 11:11 AM

ಆತ ಕಾಳಗ ಮಾಡಲು ಕಣದಲ್ಲಿ ಕಾಲೂರಿದರೆ ಎದುರಾಳಿಗಳು ಚಿತ್​ ಆಗುತ್ತಿದ್ದರು, ಮುಂದೆ ಬರಲು ಹಿಂಜರಿಯುತ್ತಿದ್ದರು. ಅದೂ ಮೀರಿ ಕಾಳಗಕ್ಕೆ ಬಂದರೆ ಒಂದೇ ಒಂದು ಡಿಚ್ಚಿಗೆ ತಲೆ ತಿರುಗಿ ಬೀಳುತ್ತಿದ್ದುದು ಗ್ಯಾರಂಟಿ. ಇನ್ನು ಆತ ಯಾವುದೇ ಕಾಳಗದಲ್ಲಿ ಸೋತಿದ್ದೇ ಇಲ್ಲ. ಆತ ಧಾರವಾಡ ಜನರ ಹೆಮ್ಮೆಯ ಮಗ. ಆದರೆ ಆತ ಒಮ್ಮಿಂದೊಮ್ಮೆಲೇ ಇಲ್ಲ ಅಂದರೆ ಹೇಗಾಗಬೇಡ? ಅಂಥದ್ದೊಂದು ಘಟನೆಯಿಂದ ಆತನ ಕುಟುಂಬಸ್ಥರಷ್ಟೇ ಅಲ್ಲ, ಆತನ ಫ್ಯಾನ್ ಗಳು ಕೂಡ ದುಃಖದ ಕಡಲಿಗೆ ಜಾರಿದ್ದಾರೆ.

ಆತ ಕಾಳಗ ಮಾಡಲು ಕಣದಲ್ಲಿ ಕಾಲೂರಿದರೆ ಎದುರಾಳಿಗಳು ಚಿತ್​ ಆಗುತ್ತಿದ್ದರು, ಮುಂದೆ ಬರಲು ಹಿಂಜರಿಯುತ್ತಿದ್ದರು. ಅದೂ ಮೀರಿ ಕಾಳಗಕ್ಕೆ ಬಂದರೆ ಒಂದೇ ಒಂದು ಡಿಚ್ಚಿಗೆ ತಲೆ ತಿರುಗಿ ಬೀಳುತ್ತಿದ್ದುದು ಗ್ಯಾರಂಟಿ. ಇನ್ನು ಆತ ಯಾವುದೇ ಕಾಳಗದಲ್ಲಿ ಸೋತಿದ್ದೇ ಇಲ್ಲ. ಆತ ಧಾರವಾಡ ಜನರ ಹೆಮ್ಮೆಯ ಮಗ. ಆದರೆ ಆತ ಒಮ್ಮಿಂದೊಮ್ಮೆಲೇ ಇಲ್ಲ ಅಂದರೆ ಹೇಗಾಗಬೇಡ? ಅಂಥದ್ದೊಂದು ಘಟನೆಯಿಂದ ಆತನ ಕುಟುಂಬಸ್ಥರಷ್ಟೇ ಅಲ್ಲ, ಆತನ ಫ್ಯಾನ್ ಗಳು ಕೂಡ ದುಃಖದ ಕಡಲಿಗೆ ಜಾರಿದ್ದಾರೆ.

1 / 9
ಅಷ್ಟಕ್ಕೂ ಯಾರು ಆತ? ಬನ್ನಿ ನೋಡೋಣ... ಆತ ಕಾಲು ಕೆರೆದು ಓಡಿ ಬಂದು ಹೊಡೆಯೋ ಒಂದೇ ಒಂದು ಡಿಚ್ಚಿಗೆ ಎದುರಾಳಿ ಫಿನಿಷ್; ಹಿಂದೆ ಸರಿದು ಓಡಿ ಹೋದರೆ ಬಚಾವ್; ನುಗ್ಗಿ ಬಂದು ಡಿಚ್ಚಿ ಕೊಡುತ್ತಿದ್ದಂತೆಯೇ ಜನರ ಕೇಕೆ ಶಿಳ್ಳೆ -ಹೀಗೆ ಎದುರಾಳಿಗಳ ಎದೆಯನ್ನೇ ಬೆಚ್ಚಿ ಬೀಳಿಸುವಂತೆ ಡಿಚ್ಚಿ ಕೊಡೋ ಈ ಟಗರಿನ ಹೆಸರು ಧಾರವಾಡ ಜಂಗ್ಲಿ.

ಅಷ್ಟಕ್ಕೂ ಯಾರು ಆತ? ಬನ್ನಿ ನೋಡೋಣ... ಆತ ಕಾಲು ಕೆರೆದು ಓಡಿ ಬಂದು ಹೊಡೆಯೋ ಒಂದೇ ಒಂದು ಡಿಚ್ಚಿಗೆ ಎದುರಾಳಿ ಫಿನಿಷ್; ಹಿಂದೆ ಸರಿದು ಓಡಿ ಹೋದರೆ ಬಚಾವ್; ನುಗ್ಗಿ ಬಂದು ಡಿಚ್ಚಿ ಕೊಡುತ್ತಿದ್ದಂತೆಯೇ ಜನರ ಕೇಕೆ ಶಿಳ್ಳೆ -ಹೀಗೆ ಎದುರಾಳಿಗಳ ಎದೆಯನ್ನೇ ಬೆಚ್ಚಿ ಬೀಳಿಸುವಂತೆ ಡಿಚ್ಚಿ ಕೊಡೋ ಈ ಟಗರಿನ ಹೆಸರು ಧಾರವಾಡ ಜಂಗ್ಲಿ.

2 / 9
ಎದುರಾಳಿ ಎಷ್ಟೇ ಗಟ್ಟಿಯಾಗಿದ್ದರೂ ಧಾರವಾಡ ಜಂಗ್ಲಿ ಒಂದು ಬಾರಿ ಹೊಡೆದರೆ ನೆಲಕ್ಕುರುಳೋದು ಗ್ಯಾರಂಟಿ. ಧಾರವಾಡ ನಗರದ ಕಮಲಾಪುರ ಬಡಾವಣೆಯ ಮಂಜುನಾಥ ಅಮ್ಮಿನಬಾವಿ ಅನ್ನೋರು ನಾಲ್ಕು ವರ್ಷಗಳ ಹಿಂದೆ ಈ ಟಗರನ್ನು ಖರೀದಿಸಿದ್ದರು.

ಎದುರಾಳಿ ಎಷ್ಟೇ ಗಟ್ಟಿಯಾಗಿದ್ದರೂ ಧಾರವಾಡ ಜಂಗ್ಲಿ ಒಂದು ಬಾರಿ ಹೊಡೆದರೆ ನೆಲಕ್ಕುರುಳೋದು ಗ್ಯಾರಂಟಿ. ಧಾರವಾಡ ನಗರದ ಕಮಲಾಪುರ ಬಡಾವಣೆಯ ಮಂಜುನಾಥ ಅಮ್ಮಿನಬಾವಿ ಅನ್ನೋರು ನಾಲ್ಕು ವರ್ಷಗಳ ಹಿಂದೆ ಈ ಟಗರನ್ನು ಖರೀದಿಸಿದ್ದರು.

3 / 9
ಆಗ ಈ ಟಗರಿಗೆ ಮೂರು ವರ್ಷವಾಗಿತ್ತು. ಅಮ್ಮಿನಬಾವಿ ಕುಟುಂಬಸ್ಥರೆಲ್ಲರೂ ಈ ಜಂಗ್ಲಿಯನ್ನು ಮನೆಯ ಮಗನಂತೆಯೇ ಸಾಕಿ, ಬೆಳೆಸಿದರು. ಅಲ್ಲದೇ ಇದನ್ನು ಟಗರು ಕಾಳಗಕ್ಕೆ ಸಿದ್ದ ಮಾಡಿದರು. ನೋಡನೋಡುತ್ತಿದ್ದಂತೆಯೇ ಜಂಗ್ಲಿ ಧಾರವಾಡದಲ್ಲಿ ಫೇಮಸ್ ಆಗಿ ಹೋದ.

ಆಗ ಈ ಟಗರಿಗೆ ಮೂರು ವರ್ಷವಾಗಿತ್ತು. ಅಮ್ಮಿನಬಾವಿ ಕುಟುಂಬಸ್ಥರೆಲ್ಲರೂ ಈ ಜಂಗ್ಲಿಯನ್ನು ಮನೆಯ ಮಗನಂತೆಯೇ ಸಾಕಿ, ಬೆಳೆಸಿದರು. ಅಲ್ಲದೇ ಇದನ್ನು ಟಗರು ಕಾಳಗಕ್ಕೆ ಸಿದ್ದ ಮಾಡಿದರು. ನೋಡನೋಡುತ್ತಿದ್ದಂತೆಯೇ ಜಂಗ್ಲಿ ಧಾರವಾಡದಲ್ಲಿ ಫೇಮಸ್ ಆಗಿ ಹೋದ.

4 / 9
ಎಲ್ಲಿಯೇ ಟಗರು ಕಾಳಗ ಇದ್ದರೂ ಅಲ್ಲಿಗೆ ಧಾರವಾಡ ಜಂಗ್ಲಿ ಹಾಜರ್. ಹೀಗೆ ಕಾಳಗಕ್ಕೆ ಹೋದವನು ಒಂದು ಬಾರಿಯೂ ಸೋತಿದ್ದೇ ಇಲ್ಲ. ತನ್ನ ಡಿಚ್ಚಿಯಿಂದಲೇ ಫೇಮಸ್ ಆಗಿದ್ದ ಧಾರವಾಡ ಜಂಗ್ಲಿ ಇಂದು ಮೃತಪಟ್ಟಿದೆ. ಇದರಿಂದಾಗಿ ಅಮ್ಮಿನಬಾವಿ ಕುಟುಂಬ ಮನೆ ಮಗನನ್ನೇ ಕಳೆದುಕೊಂಡಷ್ಟು ದುಃಖದಲ್ಲಿದ್ದಾರೆ.

ಎಲ್ಲಿಯೇ ಟಗರು ಕಾಳಗ ಇದ್ದರೂ ಅಲ್ಲಿಗೆ ಧಾರವಾಡ ಜಂಗ್ಲಿ ಹಾಜರ್. ಹೀಗೆ ಕಾಳಗಕ್ಕೆ ಹೋದವನು ಒಂದು ಬಾರಿಯೂ ಸೋತಿದ್ದೇ ಇಲ್ಲ. ತನ್ನ ಡಿಚ್ಚಿಯಿಂದಲೇ ಫೇಮಸ್ ಆಗಿದ್ದ ಧಾರವಾಡ ಜಂಗ್ಲಿ ಇಂದು ಮೃತಪಟ್ಟಿದೆ. ಇದರಿಂದಾಗಿ ಅಮ್ಮಿನಬಾವಿ ಕುಟುಂಬ ಮನೆ ಮಗನನ್ನೇ ಕಳೆದುಕೊಂಡಷ್ಟು ದುಃಖದಲ್ಲಿದ್ದಾರೆ.

5 / 9
ಮೊನ್ನೆ ಭಾನುವಾರ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಏಳುವಷ್ಟರಲ್ಲಿಯೇ ಜಂಗ್ಲಿ ಕೊನೆಯುಸಿರೆಳೆದಿತ್ತು. ಜಂಗ್ಲಿ ಸತ್ತಿದೆ ಅನ್ನೋದನ್ನು ಕುಟುಂಬಸ್ಥರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಲೇ ಇಲ್ಲ.

ಮೊನ್ನೆ ಭಾನುವಾರ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಏಳುವಷ್ಟರಲ್ಲಿಯೇ ಜಂಗ್ಲಿ ಕೊನೆಯುಸಿರೆಳೆದಿತ್ತು. ಜಂಗ್ಲಿ ಸತ್ತಿದೆ ಅನ್ನೋದನ್ನು ಕುಟುಂಬಸ್ಥರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಲೇ ಇಲ್ಲ.

6 / 9
ಮನುಷ್ಯರು ಮೃತಪಟ್ಟಾಗ ಯಾವ ರೀತಿ ಅಂತಿಮಸಂಸ್ಕಾರ ಮಾಡುತ್ತಾರೋ ಅದೇ ರೀತಿ ಜಂಗ್ಲಿ ಅಂತ್ಯಸಂಸ್ಕಾರವನ್ನೂ ಮಾಡಲು ಮನೆಯವರು ನಿರ್ಧರಿಸಿದ್ದಾರೆ. ಟಗರಿನ ಶವವನ್ನು ಮನೆಯಲ್ಲಿ ಇಟ್ಟು, ಅದರ ಸುತ್ತಲೂ ಗೆದ್ದಾಗ ಪಡೆದಿರೋ ನೆನಪಿನ ಕಾಣಿಕೆಗಳನ್ನು ಇಡಲಾಗಿತ್ತು. ಜಂಗ್ಲಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದ ರೇಣಮ್ಮನಿಗೆ ಇದೀಗ ಮಗನನ್ನ ಕಳೆದುಕೊಂಡಷ್ಟೇ ದುಃಖವಾಗಿದೆ.

ಮನುಷ್ಯರು ಮೃತಪಟ್ಟಾಗ ಯಾವ ರೀತಿ ಅಂತಿಮಸಂಸ್ಕಾರ ಮಾಡುತ್ತಾರೋ ಅದೇ ರೀತಿ ಜಂಗ್ಲಿ ಅಂತ್ಯಸಂಸ್ಕಾರವನ್ನೂ ಮಾಡಲು ಮನೆಯವರು ನಿರ್ಧರಿಸಿದ್ದಾರೆ. ಟಗರಿನ ಶವವನ್ನು ಮನೆಯಲ್ಲಿ ಇಟ್ಟು, ಅದರ ಸುತ್ತಲೂ ಗೆದ್ದಾಗ ಪಡೆದಿರೋ ನೆನಪಿನ ಕಾಣಿಕೆಗಳನ್ನು ಇಡಲಾಗಿತ್ತು. ಜಂಗ್ಲಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದ ರೇಣಮ್ಮನಿಗೆ ಇದೀಗ ಮಗನನ್ನ ಕಳೆದುಕೊಂಡಷ್ಟೇ ದುಃಖವಾಗಿದೆ.

7 / 9
ಧಾರವಾಡದ ಜಂಗ್ಲಿ ಹೃದಯಾಘಾತಕ್ಕೆ ಬಲಿ

ಧಾರವಾಡದ ಜಂಗ್ಲಿ ಹೃದಯಾಘಾತಕ್ಕೆ ಬಲಿ

8 / 9
ಇನ್ನು ಈ ಧಾರವಾಡ ಜಂಗ್ಲಿಯನ್ನು ಖರೀದಿಸಲು ಅನೇಕರು ಬಂದಿದ್ದರಂತೆ. ಕಳೆದ ವಾರವಷ್ಟೇ ಇದನ್ನು ಖರೀದಿಸಲು ಬಂದಿದ್ದ ವ್ಯಕ್ತಿಯೊಬ್ಬರು, 6 ಲಕ್ಷ ರೂಪಾಯಿವರೆಗೆ ಕೊಡೋದಾಗಿ ಹೇಳಿದ್ದರಂತೆ. ಆದರೆ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಮನೆಯವರು ನಿರಾಕರಿಸಿದ್ದರು. ಅದಾಗಿ ಒಂದು ವಾರಕ್ಕೆ ಟಗರು ಮೃತಪಟ್ಟಿದೆ. ಹೀಗೆ ಆಕಸ್ಮಿಕವಾಗಿ ಮೃತಪಡಲು ಹೃದಯಾಘಾತವೇ ಕಾರಣ ಎನ್ನಲಾಗಿದೆ. ಒಟ್ಟಿನಲ್ಲಿ ಧಾರವಾಡ ಜನರ ಮನಸ್ಸನ್ನು ಗೆದ್ದಿದ್ದ ಧಾರವಾಡ ಜಂಗ್ಲಿ ಈಗ ನೆನಪಷ್ಟೇ...

ಇನ್ನು ಈ ಧಾರವಾಡ ಜಂಗ್ಲಿಯನ್ನು ಖರೀದಿಸಲು ಅನೇಕರು ಬಂದಿದ್ದರಂತೆ. ಕಳೆದ ವಾರವಷ್ಟೇ ಇದನ್ನು ಖರೀದಿಸಲು ಬಂದಿದ್ದ ವ್ಯಕ್ತಿಯೊಬ್ಬರು, 6 ಲಕ್ಷ ರೂಪಾಯಿವರೆಗೆ ಕೊಡೋದಾಗಿ ಹೇಳಿದ್ದರಂತೆ. ಆದರೆ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಮನೆಯವರು ನಿರಾಕರಿಸಿದ್ದರು. ಅದಾಗಿ ಒಂದು ವಾರಕ್ಕೆ ಟಗರು ಮೃತಪಟ್ಟಿದೆ. ಹೀಗೆ ಆಕಸ್ಮಿಕವಾಗಿ ಮೃತಪಡಲು ಹೃದಯಾಘಾತವೇ ಕಾರಣ ಎನ್ನಲಾಗಿದೆ. ಒಟ್ಟಿನಲ್ಲಿ ಧಾರವಾಡ ಜನರ ಮನಸ್ಸನ್ನು ಗೆದ್ದಿದ್ದ ಧಾರವಾಡ ಜಂಗ್ಲಿ ಈಗ ನೆನಪಷ್ಟೇ...

9 / 9
Follow us
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ