AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಠಿಸಿದ ಧಾರವಾಡದ ಕೃಷಿ ಮೇಳ; ಇಲ್ಲಿದೆ ಫೋಟೋಸ್​

ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ.

ಶಿವಕುಮಾರ್ ಪತ್ತಾರ್
| Edited By: |

Updated on: Sep 10, 2023 | 5:16 PM

Share
ಗುಲಾಬಿ, ಸೇವಂತಿ, ಕಾರ್ನೇಶನ್, ಅಂಥೋರಿಯಂ, ಗ್ಲ್ಯಾಡಿಯೋಲಸ್, ಲಿಲ್ಲಿ, ಜರ್ಬೆರಾ- ಒಂದಾ? ಎರಡಾ? ನೂರಾರು ಬಗೆಯ ಹೂವುಗಳ ರಾಶಿ. ಅದನ್ನು ಅಚ್ಚರಿಯಿಂದ ಸಂತೋಷದಿಂದ ನೋಡುತ್ತಿರುವ ಯುವತಿಯರು ಮತ್ತು ಮಕ್ಕಳು. ತಮ್ಮವರೊಂದಿಗೆ ಸೆಲ್ಫಿ ತೆಗೆದುಕೊಂಡು ಖುಷಿ ಪಡುತ್ತಿರುವ ಯುವಕರು. ಇಂಥ ಬಗೆ ಬಗೆಯ ಬಣ್ಣ ಬಣ್ಣದ ಹೂವುಗಳ ಲೋಕಕ್ಕೆ ಸಾಕ್ಷಿಯಾಗಿದ್ದು ಧಾರವಾಡದ ಕೃಷಿ ಮೇಳ.

ಗುಲಾಬಿ, ಸೇವಂತಿ, ಕಾರ್ನೇಶನ್, ಅಂಥೋರಿಯಂ, ಗ್ಲ್ಯಾಡಿಯೋಲಸ್, ಲಿಲ್ಲಿ, ಜರ್ಬೆರಾ- ಒಂದಾ? ಎರಡಾ? ನೂರಾರು ಬಗೆಯ ಹೂವುಗಳ ರಾಶಿ. ಅದನ್ನು ಅಚ್ಚರಿಯಿಂದ ಸಂತೋಷದಿಂದ ನೋಡುತ್ತಿರುವ ಯುವತಿಯರು ಮತ್ತು ಮಕ್ಕಳು. ತಮ್ಮವರೊಂದಿಗೆ ಸೆಲ್ಫಿ ತೆಗೆದುಕೊಂಡು ಖುಷಿ ಪಡುತ್ತಿರುವ ಯುವಕರು. ಇಂಥ ಬಗೆ ಬಗೆಯ ಬಣ್ಣ ಬಣ್ಣದ ಹೂವುಗಳ ಲೋಕಕ್ಕೆ ಸಾಕ್ಷಿಯಾಗಿದ್ದು ಧಾರವಾಡದ ಕೃಷಿ ಮೇಳ.

1 / 7
ಇಡೀ ಕೃಷಿ ಮೇಳಕ್ಕೆ ಒಂದು ಬಗೆಯ ಆಕರ್ಷಣೆ ಇದ್ದರೆ, ಅದೆಲ್ಲಕ್ಕಿಂತ ದೊಡ್ಡದಾದ ಆಕರ್ಷಣೆ ಈ ಫಲಪುಷ್ಪ ಪ್ರದರ್ಶನದ್ದು. ಕೃಷಿ ಮೇಳಕ್ಕೆ ಬರುವ ಬಹುತೇಕರು ಮರೆಯದೇ ಭೇಟಿ ಕೊಡೋದು ಈ ಫಲ-ಪುಷ್ಪ ಪ್ರದರ್ಶನದ ಸ್ಥಳಕ್ಕೆ.

ಇಡೀ ಕೃಷಿ ಮೇಳಕ್ಕೆ ಒಂದು ಬಗೆಯ ಆಕರ್ಷಣೆ ಇದ್ದರೆ, ಅದೆಲ್ಲಕ್ಕಿಂತ ದೊಡ್ಡದಾದ ಆಕರ್ಷಣೆ ಈ ಫಲಪುಷ್ಪ ಪ್ರದರ್ಶನದ್ದು. ಕೃಷಿ ಮೇಳಕ್ಕೆ ಬರುವ ಬಹುತೇಕರು ಮರೆಯದೇ ಭೇಟಿ ಕೊಡೋದು ಈ ಫಲ-ಪುಷ್ಪ ಪ್ರದರ್ಶನದ ಸ್ಥಳಕ್ಕೆ.

2 / 7
ರೈತರ ಜನಾಭಿವೃದ್ಧಿ ಕೇಂದ್ರದ ಕಟ್ಟಡದಲ್ಲಿ ಆಯೋಜಿಸಲಾಗಿರೋ ಈ ಫಲ-ಪುಷ್ಪ ಪ್ರದರ್ಶನ ಕೃಷಿ ಮೇಳದ ಹೈಲೈಟ್ ಅಂದರೆ ತಪ್ಪಾಗಲಾರದು. ಈ ಪ್ರದರ್ಶನದಲ್ಲಿ ಒಂದೆಡೆ ಹೂವುಗಳು ತಮ್ಮ ಸೌಂದರ್ಯವನ್ನು ಜಗತ್ತಿಗೆ ತೋರಿಸುತ್ತಿದ್ದರೆ, ಅವುಗಳನ್ನು ನೋಡಲು ಬರೋ ಯುವತಿಯರು, ಮಹಿಳೆಯರು, ಮಕ್ಕಳು ಅವುಗಳ ಅಂದ, ಬಣ್ಣ ನೋಡಿ ಜಗತ್ತನ್ನೇ ಮರೆಯೋ ಖುಷಿಯಲ್ಲಿದ್ದರು.

ರೈತರ ಜನಾಭಿವೃದ್ಧಿ ಕೇಂದ್ರದ ಕಟ್ಟಡದಲ್ಲಿ ಆಯೋಜಿಸಲಾಗಿರೋ ಈ ಫಲ-ಪುಷ್ಪ ಪ್ರದರ್ಶನ ಕೃಷಿ ಮೇಳದ ಹೈಲೈಟ್ ಅಂದರೆ ತಪ್ಪಾಗಲಾರದು. ಈ ಪ್ರದರ್ಶನದಲ್ಲಿ ಒಂದೆಡೆ ಹೂವುಗಳು ತಮ್ಮ ಸೌಂದರ್ಯವನ್ನು ಜಗತ್ತಿಗೆ ತೋರಿಸುತ್ತಿದ್ದರೆ, ಅವುಗಳನ್ನು ನೋಡಲು ಬರೋ ಯುವತಿಯರು, ಮಹಿಳೆಯರು, ಮಕ್ಕಳು ಅವುಗಳ ಅಂದ, ಬಣ್ಣ ನೋಡಿ ಜಗತ್ತನ್ನೇ ಮರೆಯೋ ಖುಷಿಯಲ್ಲಿದ್ದರು.

3 / 7
ಅದರೊಂದಿಗೆ ಪ್ರತಿಯೊಂದು ಹೂವಿನ ಮುಂದೆ ನಿಂತುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳೋ ಸಂಭ್ರಮ. ಗಂಟೆಗಟ್ಟಲೇ ಸುತ್ತಿದರೂ ನೋಡಲು ಮುಗಿಯದಷ್ಟು ಹೂವುಗಳ ವೆರೈಟಿ. ಇನ್ನು ಕೇವಲ ಸುಂದರ ಹೂವಿಗಷ್ಟೇ ಇಲ್ಲಿ ಅವಕಾಶ ಅನ್ನುವಂತಿಲ್ಲ. ಇವುಗಳೊಂದಿಗೆ ಬೋನ್ಸಾಯಿ ಮರಗಳು, ಜನರ ಗಮನ ಸೆಳೆದವು.

ಅದರೊಂದಿಗೆ ಪ್ರತಿಯೊಂದು ಹೂವಿನ ಮುಂದೆ ನಿಂತುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳೋ ಸಂಭ್ರಮ. ಗಂಟೆಗಟ್ಟಲೇ ಸುತ್ತಿದರೂ ನೋಡಲು ಮುಗಿಯದಷ್ಟು ಹೂವುಗಳ ವೆರೈಟಿ. ಇನ್ನು ಕೇವಲ ಸುಂದರ ಹೂವಿಗಷ್ಟೇ ಇಲ್ಲಿ ಅವಕಾಶ ಅನ್ನುವಂತಿಲ್ಲ. ಇವುಗಳೊಂದಿಗೆ ಬೋನ್ಸಾಯಿ ಮರಗಳು, ಜನರ ಗಮನ ಸೆಳೆದವು.

4 / 7
ಇನ್ನು ಕಲ್ಲಂಗಡಿ ಹಣ್ಣುಗಳಲ್ಲಿ ನಾಡಿನ ಗಣ್ಯರ ಭಾವಚಿತ್ರಗಳನ್ನು ಕೆತ್ತಿದ ಕಲೆಯಂತೂ ಎಲ್ಲರನ್ನೂ ಕೈಬೀಸಿ ಕರೆಯುತ್ತಿವೆ. ಇದರೊಂದಿಗೆ ಬಗೆ ಬಗೆಯ ಹೂವುಗಳಿಂದ ತಯಾರಿಸಿರೋ ಬಗೆ ಬಗೆಯ ಕಲಾಕೃತಿಗಳು ಹಾಗೂ ಹೂವುಗಳಿಂದಲೇ ಮಾಡಿರೋ ರಂಗೋಲಿ ಎಲ್ಲರನ್ನು ಬೆರಗುಗೊಳಿಸುತ್ತಿವೆ.

ಇನ್ನು ಕಲ್ಲಂಗಡಿ ಹಣ್ಣುಗಳಲ್ಲಿ ನಾಡಿನ ಗಣ್ಯರ ಭಾವಚಿತ್ರಗಳನ್ನು ಕೆತ್ತಿದ ಕಲೆಯಂತೂ ಎಲ್ಲರನ್ನೂ ಕೈಬೀಸಿ ಕರೆಯುತ್ತಿವೆ. ಇದರೊಂದಿಗೆ ಬಗೆ ಬಗೆಯ ಹೂವುಗಳಿಂದ ತಯಾರಿಸಿರೋ ಬಗೆ ಬಗೆಯ ಕಲಾಕೃತಿಗಳು ಹಾಗೂ ಹೂವುಗಳಿಂದಲೇ ಮಾಡಿರೋ ರಂಗೋಲಿ ಎಲ್ಲರನ್ನು ಬೆರಗುಗೊಳಿಸುತ್ತಿವೆ.

5 / 7
ಇನ್ನು ಸಿರಿಧಾನ್ಯಗಳನ್ನು ಉತ್ತೇಜಿಸುವ ಹಾಗೂ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಈ ಬಾರಿ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೋಷವಾಕ್ಯದಡಿ ಕೃಷಿ ಮೇಳವವನ್ನು ಆಯೋಜಿಸಲಾಗಿದೆ. ಇದೇ ಕಾರಣಕ್ಕೆ ಹೂವುಗಳೊಂದಿಗೆ ಸಿರಿ ಧಾನ್ಯಗಳನ್ನು ಬಳಸಿಕೊಂಡು ಬಗೆ ಬಗೆಯ ಕಲಾಕೃತಿ ಹಾಗೂ ರಂಗೋಲಿಗಳನ್ನು ಬಿಡಿಸಲಾಗಿದೆ.

ಇನ್ನು ಸಿರಿಧಾನ್ಯಗಳನ್ನು ಉತ್ತೇಜಿಸುವ ಹಾಗೂ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಈ ಬಾರಿ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೋಷವಾಕ್ಯದಡಿ ಕೃಷಿ ಮೇಳವವನ್ನು ಆಯೋಜಿಸಲಾಗಿದೆ. ಇದೇ ಕಾರಣಕ್ಕೆ ಹೂವುಗಳೊಂದಿಗೆ ಸಿರಿ ಧಾನ್ಯಗಳನ್ನು ಬಳಸಿಕೊಂಡು ಬಗೆ ಬಗೆಯ ಕಲಾಕೃತಿ ಹಾಗೂ ರಂಗೋಲಿಗಳನ್ನು ಬಿಡಿಸಲಾಗಿದೆ.

6 / 7
ಇವುಗಳಂತೂ ಜನರನ್ನು ವಿಶೇಷವಾಗಿ ಆಕರ್ಷಿಸುತ್ತಿವೆ. ಒಟ್ಟಿನಲ್ಲಿ ಈ ಬಾರಿ ಬರ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಬರೋದಿಲ್ಲ ಅಂದುಕೊಂಡರೂ ಈ ಪ್ರದರ್ಶನವನ್ನು ನೋಡಿದರೆ ಆ ಮಾತು ಸುಳ್ಳು ಅನ್ನೋದು ಸಾಬೀತಾಗುತ್ತಿದೆ.

ಇವುಗಳಂತೂ ಜನರನ್ನು ವಿಶೇಷವಾಗಿ ಆಕರ್ಷಿಸುತ್ತಿವೆ. ಒಟ್ಟಿನಲ್ಲಿ ಈ ಬಾರಿ ಬರ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಬರೋದಿಲ್ಲ ಅಂದುಕೊಂಡರೂ ಈ ಪ್ರದರ್ಶನವನ್ನು ನೋಡಿದರೆ ಆ ಮಾತು ಸುಳ್ಳು ಅನ್ನೋದು ಸಾಬೀತಾಗುತ್ತಿದೆ.

7 / 7
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು