AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಮಣ ಸಡಗರ: ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು ಹಾಡು ಹೇಳಿ ಸಂಭ್ರಮಿಸಿದ ಮಹಿಳೆಯರು

ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು. ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 14, 2024 | 8:05 PM

Share
ವರ್ಷದ ಮೊದಲ ಹಬ್ಬ ಸಂಕ್ರಮಣ, ಉತ್ತರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬವನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಯಿತು. ಬಗೆಬಗೆಯ ತಿಂಡಿ ತಿನಿಸುಗಳನ್ನು ಒಂದೆಡೆ ತಂದಿಟ್ಟು ಹಾಡಿ ನಲಿದು ಮಹಿಳೆಯರು ಸಂಭ್ರಮದಿಂದ ಆಚರಿಸಿದರು.

ವರ್ಷದ ಮೊದಲ ಹಬ್ಬ ಸಂಕ್ರಮಣ, ಉತ್ತರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬವನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಯಿತು. ಬಗೆಬಗೆಯ ತಿಂಡಿ ತಿನಿಸುಗಳನ್ನು ಒಂದೆಡೆ ತಂದಿಟ್ಟು ಹಾಡಿ ನಲಿದು ಮಹಿಳೆಯರು ಸಂಭ್ರಮದಿಂದ ಆಚರಿಸಿದರು.

1 / 6
ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು.

ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು.

2 / 6
ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

3 / 6
ಕಡಕ್ ರೊಟ್ಟಿ, ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರಣ್ಣ, ಪುಳಿಯೋಗರೆ, ಮಸಾಲಾ ರೈಸ್ ಮೊಸರು ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ಸವಿದು ಸಂತಸ ಪಟ್ಟರು.

ಕಡಕ್ ರೊಟ್ಟಿ, ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರಣ್ಣ, ಪುಳಿಯೋಗರೆ, ಮಸಾಲಾ ರೈಸ್ ಮೊಸರು ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ಸವಿದು ಸಂತಸ ಪಟ್ಟರು.

4 / 6
ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ವರ್ಷದ ಮೊದಲ ಹಬ್ಬ ಸಂಕ್ರಮಣವನ್ನು ಆಚರಿಸಿ ಖುಷಿಪಟ್ಟರು. ಇನ್ನು ಇದರಲ್ಲಿ ಬೆಂಗಳೂರಿನಿಂದ ಮದುವೆಯಾದ ಬಳಿಕ ಧಾರವಾಡಕ್ಕೆ ಬಂದ ಮಹಿಳೆಯರೂ ಇದ್ದರು. ಅವರಿಗೆಲ್ಲ ಈ ಸಂಕ್ರಾಂತಿ ಸಂಭ್ರಮ ಹೊಸದರಂತೆ ಕಂಡಿತ್ತು. ಅಚ್ಚರಿಯಿಂದ ನೋಡುತ್ತಲೇ ಸಂಭ್ರಮಿಸಿದರು.

ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ವರ್ಷದ ಮೊದಲ ಹಬ್ಬ ಸಂಕ್ರಮಣವನ್ನು ಆಚರಿಸಿ ಖುಷಿಪಟ್ಟರು. ಇನ್ನು ಇದರಲ್ಲಿ ಬೆಂಗಳೂರಿನಿಂದ ಮದುವೆಯಾದ ಬಳಿಕ ಧಾರವಾಡಕ್ಕೆ ಬಂದ ಮಹಿಳೆಯರೂ ಇದ್ದರು. ಅವರಿಗೆಲ್ಲ ಈ ಸಂಕ್ರಾಂತಿ ಸಂಭ್ರಮ ಹೊಸದರಂತೆ ಕಂಡಿತ್ತು. ಅಚ್ಚರಿಯಿಂದ ನೋಡುತ್ತಲೇ ಸಂಭ್ರಮಿಸಿದರು.

5 / 6
ಕಳೆದ ಕೆಲ ವರ್ಷಗಳಿಂದ ಈ ರೀತಿಯಾಗಿ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಜಾನಪದ ಸಂಶೋಧನಾ ಕೇಂದ್ರದ ಮಹಿಳೆಯರು ಈ ಸಲವೂ ಸಂಭ್ರಮದಿಂದ ಆಚರಿಸಿದರು. ನಶಿಸುತ್ತಿರುವ ಕೆಲ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದೆ.

ಕಳೆದ ಕೆಲ ವರ್ಷಗಳಿಂದ ಈ ರೀತಿಯಾಗಿ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಜಾನಪದ ಸಂಶೋಧನಾ ಕೇಂದ್ರದ ಮಹಿಳೆಯರು ಈ ಸಲವೂ ಸಂಭ್ರಮದಿಂದ ಆಚರಿಸಿದರು. ನಶಿಸುತ್ತಿರುವ ಕೆಲ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದೆ.

6 / 6
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ