AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ

Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪದ ಸಂಶೋಧನಾ ಕೇಂದ್ರದ ಸದಸ್ಯರ ಮಕರ ಸಂಕ್ರಾಂತಿ ಸಡಗರ ಹೀಗಿತ್ತು ಇಲ್ಲಿವೆ ಫೋಟೋಸ್​​.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 14, 2026 | 5:50 PM

Share
ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಈ ದಿನವನ್ನು ಎಲ್ಲೆಡೆ ಅತೀ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬವನ್ನು ಸುಗ್ಗಿ ಹಬ್ಬವೆಂದು ಕೂಡ ಕರೆಯಲಾಗುತ್ತೆ. ಇಂಥ ದಿನದಂದು ಮಹಿಳೆಯರಿಗಂತೂ ಖುಷಿಯೋ ಖುಷಿ. ಬಗೆ ಬಗೆಯ ಅಡುಗೆ ಮಾಡಿ, ಹೊಸ ಬಟ್ಟೆಗಳನ್ನು ಧರಿಸಿ ಹಬ್ಬವನ್ನು ಆಚರಿಸುತ್ತಾರೆ.

ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಈ ದಿನವನ್ನು ಎಲ್ಲೆಡೆ ಅತೀ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬವನ್ನು ಸುಗ್ಗಿ ಹಬ್ಬವೆಂದು ಕೂಡ ಕರೆಯಲಾಗುತ್ತೆ. ಇಂಥ ದಿನದಂದು ಮಹಿಳೆಯರಿಗಂತೂ ಖುಷಿಯೋ ಖುಷಿ. ಬಗೆ ಬಗೆಯ ಅಡುಗೆ ಮಾಡಿ, ಹೊಸ ಬಟ್ಟೆಗಳನ್ನು ಧರಿಸಿ ಹಬ್ಬವನ್ನು ಆಚರಿಸುತ್ತಾರೆ.

1 / 6
ಇಂದು ಮಕರ ಸಂಕ್ರಾಂತಿ. ಈ ದಿನದಂದು ನಗರದ ಸಾಧನಕೇರಿ ಉದ್ಯಾನವನದಲ್ಲಿ ಹಬ್ಬದ ಸಂಭ್ರಮ ಜೋರಾಗಿತ್ತು. ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ತಮ್ಮ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಹಬ್ಬ ಆಚರಿಸಿ ಸಂಭ್ರಮಿಸಿದರು.

ಇಂದು ಮಕರ ಸಂಕ್ರಾಂತಿ. ಈ ದಿನದಂದು ನಗರದ ಸಾಧನಕೇರಿ ಉದ್ಯಾನವನದಲ್ಲಿ ಹಬ್ಬದ ಸಂಭ್ರಮ ಜೋರಾಗಿತ್ತು. ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ತಮ್ಮ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಹಬ್ಬ ಆಚರಿಸಿ ಸಂಭ್ರಮಿಸಿದರು.

2 / 6
ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು.

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು.

3 / 6
ಈ ಹಬ್ಬವನ್ನು ಸುಗ್ಗಿಯ ಹಬ್ಬವೆಂದೂ ಕರೆಯುತ್ತಾರೆ. ಬಗೆ ಬಗೆಯ ಬೆಳೆಗಳು ರೈತರ ಕೈಗೆ ಬಂದಿರುವ ಸಮಯವಿದು. ಹೀಗಾಗಿ ಈ ಹಬ್ಬವನ್ನು ದೇಶದ ಬಹುತೇಕ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸುತ್ತಾರೆ. ಇನ್ನು ಧಾರವಾಡದಲ್ಲಿ ನಡೆದ ಈ ಹಬ್ಬದಲ್ಲಿ ರಾಗಬದ್ಧವಾಗಿ ಮಹಿಳೆಯರು ಸಂಕ್ರಾಂತಿ ಹಾಡುಗಳನ್ನು ಹಾಡಿ, ಸಂಭ್ರಮಪಟ್ಟರು.

ಈ ಹಬ್ಬವನ್ನು ಸುಗ್ಗಿಯ ಹಬ್ಬವೆಂದೂ ಕರೆಯುತ್ತಾರೆ. ಬಗೆ ಬಗೆಯ ಬೆಳೆಗಳು ರೈತರ ಕೈಗೆ ಬಂದಿರುವ ಸಮಯವಿದು. ಹೀಗಾಗಿ ಈ ಹಬ್ಬವನ್ನು ದೇಶದ ಬಹುತೇಕ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸುತ್ತಾರೆ. ಇನ್ನು ಧಾರವಾಡದಲ್ಲಿ ನಡೆದ ಈ ಹಬ್ಬದಲ್ಲಿ ರಾಗಬದ್ಧವಾಗಿ ಮಹಿಳೆಯರು ಸಂಕ್ರಾಂತಿ ಹಾಡುಗಳನ್ನು ಹಾಡಿ, ಸಂಭ್ರಮಪಟ್ಟರು.

4 / 6
ಮಹಿಳೆಯರೆಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿದ್ದರು. ಬಳೆ, ನತ್ತು, ಬೋರಮಳ, ಬೆಂಡೋಲೆ, ಡಾಬು ಧರಿಸಿ ಬಂದಿದ್ದ ಮಹಿಳೆಯರ ಸಂಭ್ರಮ ಹೇಳತೀರದ್ದಾಗಿತ್ತು. ಪರಸ್ಪರ ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು. ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ಆಚರಿಸಿ ಖುಷಿಪಟ್ಟರು.

ಮಹಿಳೆಯರೆಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿದ್ದರು. ಬಳೆ, ನತ್ತು, ಬೋರಮಳ, ಬೆಂಡೋಲೆ, ಡಾಬು ಧರಿಸಿ ಬಂದಿದ್ದ ಮಹಿಳೆಯರ ಸಂಭ್ರಮ ಹೇಳತೀರದ್ದಾಗಿತ್ತು. ಪರಸ್ಪರ ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು. ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ಆಚರಿಸಿ ಖುಷಿಪಟ್ಟರು.

5 / 6
ಇತ್ತೀಚಿನ ದಿನಗಳಲ್ಲಿ ಹಬ್ಬಗಳ ಆಚರಣೆ ಕಡಿಮೆಯಾಗಿದೆ. ಹೀಗಿರುವಾಗ ಜಾನಪದ ಸಂಶೋಧನಾ ಕೇಂದ್ರವು ಎಲ್ಲಾ ಹಬ್ಬಗಳನ್ನು ಆಚರಿಸುವ ಮೂಲಕ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಮಹತ್ವದ ಕೆಲಸ ಮಾಡುತ್ತಿರೋದಂತೂ ಸತ್ಯ.

ಇತ್ತೀಚಿನ ದಿನಗಳಲ್ಲಿ ಹಬ್ಬಗಳ ಆಚರಣೆ ಕಡಿಮೆಯಾಗಿದೆ. ಹೀಗಿರುವಾಗ ಜಾನಪದ ಸಂಶೋಧನಾ ಕೇಂದ್ರವು ಎಲ್ಲಾ ಹಬ್ಬಗಳನ್ನು ಆಚರಿಸುವ ಮೂಲಕ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಮಹತ್ವದ ಕೆಲಸ ಮಾಡುತ್ತಿರೋದಂತೂ ಸತ್ಯ.

6 / 6
ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​
ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ
ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ?
ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ?
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ