- Kannada News Photo gallery DK Shivakumar And BS Yediyurappa Meets In Bengaluru kempegowda international airport
ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.
Updated on:Aug 04, 2023 | 10:52 AM

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಇದೇ ವೇಳೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಈ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಅತ್ತ ದುಬೈನಿಂದ ಬಿಎಸ್ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಇನ್ನು ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು
Published On - 10:39 am, Fri, 4 August 23

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
Read More



