ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

Updated on: Feb 08, 2025 | 4:57 PM

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

1 / 5
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

2 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

3 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

4 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

5 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us