AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold water disadvantages: ಕೋಲ್ಡ್​ ವಾಟರ್ ಕುಡಿಯುವುದರಿಂದಾಗುವ ಅನಾನುಕೂಲತೆಗಳೇನು ಗೊತ್ತಾ..! ಇಲ್ಲಿದೆ ಮಾಹಿತಿ

Cold water disadvantages: ಬೇಸಿಗೆ ಕಾಲ ಬಂದಿದ್ದು, ಜನರು ತಣ್ಣೀರು ಕುಡಿಯಲು ಇಷ್ಟಪಡುತ್ತಾರೆ. ತಣ್ಣೀರು ಪರಿಹಾರವನ್ನು ನೀಡಬಹುದು, ಆದರೆ ಇದು ಅನೇಕ ವಿಧಗಳಲ್ಲಿ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದರ ಅನಾನುಕೂಲಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Mar 31, 2022 | 3:17 PM

Share
ಹೃದಯ ಬಡಿತ: ಹೆಚ್ಚು ತಣ್ಣೀರು ಕುಡಿಯುವುದರಿಂದ ನಮ್ಮ ಹೃದಯ ಬಡಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಅನೇಕ ವರದಿಗಳಲ್ಲಿ ಬಹಿರಂಗವಾಗಿದೆ. ತಜ್ಞರ ಪ್ರಕಾರ ಹೆಚ್ಚು ತಣ್ಣೀರು ಕುಡಿಯುವುದರಿಂದ ಹೃದಯ ಬಡಿತ ಕಡಿಮೆಯಾಗುತ್ತದೆ. ಇದು ದೇಹದ ವಾಗಸ್ ನರದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.

1 / 5
ಮಲಬದ್ಧತೆ: ಹೆಚ್ಚು ತಣ್ಣೀರು ನಿರಂತರವಾಗಿ ಕುಡಿಯುತ್ತಿದ್ದರೆ ಈ ಸ್ಥಿತಿಯಲ್ಲಿ ವ್ಯಕ್ತಿಯು ಮಲಬದ್ಧತೆಯ ಸಮಸ್ಯೆಯನ್ನು ಸಹ ಹೊಂದಿರಬಹುದು. ಅತಿಯಾಗಿ ತಣ್ಣೀರು ಕುಡಿಯುವುದರಿಂದ, ತಿಂದ ಆಹಾರವು ದೇಹಕ್ಕೆ ಗಟ್ಟಿಯಾಗುತ್ತದೆ ಮತ್ತು ಈ ಸಮಸ್ಯೆಯು ಮಲಬದ್ಧತೆಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ.

2 / 5
ತಲೆನೋವು: ತಜ್ಞರ ಪ್ರಕಾರ, ಅತಿಯಾದ ತಣ್ಣೀರಿನಿಂದ ನಮ್ಮ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ತಣ್ಣೀರು ಮೆದುಳಿನ ಫ್ರೀಜ್ ಸಮಸ್ಯೆಯನ್ನು ಸೃಷ್ಟಿಸುತ್ತದೆ ಎಂದು ಹೇಳಲಾಗುತ್ತದೆ. ಇದು ಬೆನ್ನುಮೂಳೆಯ ಅನೇಕ ನರಗಳನ್ನು ತಂಪಾಗಿಸುತ್ತದೆ ಮತ್ತು ಇದರಿಂದಾಗಿ ನರಮಂಡಲದಲ್ಲಿ ಸಮಸ್ಯೆ ಉಂಟಾಗಬಹುದು.

3 / 5
ಜೀರ್ಣಾಂಗ ವ್ಯವಸ್ಥೆ: ಹೆಚ್ಚು ತಣ್ಣೀರು ಕುಡಿಯುವುದರಿಂದ ಹೊಟ್ಟೆ ನೋವು ಅಥವಾ ಅಜೀರ್ಣ ಉಂಟಾಗುತ್ತದೆ. ತಣ್ಣೀರು ಹೊಟ್ಟೆಯೊಳಗೆ ಹೋದಾಗ ಅಲ್ಲಿನ ತಾಪಮಾನ ಅದಕ್ಕೆ ಹೊಂದಿಕೆಯಾಗುವುದಿಲ್ಲ ಎನ್ನುತ್ತಾರೆ ತಜ್ಞರು. ಈ ಕಾರಣದಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಹದಗೆಡಬಹುದು.

4 / 5
ಬೊಜ್ಜು ಕಡಿಮೆಯಾಗದಿರುವುದು: ಬೊಜ್ಜು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವವರು ತಣ್ಣೀರು ಕುಡಿಯುವುದನ್ನು ತಪ್ಪಿಸಬೇಕು. ತಣ್ಣೀರು ಕುಡಿಯುವುದರಿಂದ ಕೊಬ್ಬನ್ನು ಸುಡುವಲ್ಲಿ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ತಣ್ಣೀರು ದೇಹದಲ್ಲಿರುವ ಕೊಬ್ಬನ್ನು ಗಟ್ಟಿಗೊಳಿಸುತ್ತದೆ ಮತ್ತು ಈ ಕಾರಣದಿಂದಾಗಿ ಅದನ್ನು ತೊಡೆದುಹಾಕಲು ಕಷ್ಟವಾಗುತ್ತದೆ.

5 / 5

Published On - 3:00 pm, Thu, 31 March 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್