AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಕಣ್ಣುಮನ ಸೆಳೆದ ಗಾಳಿಪಟ ಉತ್ಸವ: ಇಲ್ಲಿವೆ ಫೋಟೋಸ್​

Doddaballapur Kite Festival Photos: ದೊಡ್ಡಬಳ್ಳಾಪುರದಲ್ಲಿ 10ನೇ ವರ್ಷದ ಆಷಾಢ ಮಾಸದ ಗಾಳಿಪಟ ಉತ್ಸವ ಅದ್ದೂರಿಯಾಗಿ ಜರುಗಿತು. ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದ ಬಾನಂಗಳದಲ್ಲಿ ಬಣ್ಣ ಬಣ್ಣದ ಗಾಳಿಪಟಗಳು ಹಾರಾಡಿದವು. ಕುಟುಂಬ ಸಮೇತ ಆಗಮಿಸಿದ ಜನ ಸಾಂಪ್ರದಾಯಿಕ ಕ್ರೀಡೆಯನ್ನು ಆನಂದಿಸಿದರು. ಫೋಟೋಸ್​ ಇಲ್ಲಿವೆ.

ನವೀನ್ ಕುಮಾರ್ ಟಿ
| Edited By: |

Updated on: Aug 02, 2026 | 7:29 PM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ದೊಡ್ಡಬಳ್ಳಾಪುರ ಆಕಾಶದಲ್ಲಿ ಇಂದು ಬಣ್ಣ ಬಣ್ಣದ ಗಾಳಿಪಟಗಳು ಹಾರಿ ಮಿಂಚಿದವು. ವಿವಿಧ ವಿನ್ಯಾಸದ ಗಾಳಿಪಟಗಳನ್ನು ಕಂಡು ಕುಟುಂಬ ಸಮೇತ ಆಗಮಿಸಿದ ಸಾರ್ವಜನಿಕರು ಹಾಗೂ ಮಕ್ಕಳು ಫುಲ್ ಖುಷ್ ಆದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ದೊಡ್ಡಬಳ್ಳಾಪುರ ಆಕಾಶದಲ್ಲಿ ಇಂದು ಬಣ್ಣ ಬಣ್ಣದ ಗಾಳಿಪಟಗಳು ಹಾರಿ ಮಿಂಚಿದವು. ವಿವಿಧ ವಿನ್ಯಾಸದ ಗಾಳಿಪಟಗಳನ್ನು ಕಂಡು ಕುಟುಂಬ ಸಮೇತ ಆಗಮಿಸಿದ ಸಾರ್ವಜನಿಕರು ಹಾಗೂ ಮಕ್ಕಳು ಫುಲ್ ಖುಷ್ ಆದರು.

1 / 6
ದೊಡ್ಡಬಳ್ಳಾಪುರದಲ್ಲಿ 'ನಮ್ಮ ಸಂಸ್ಕೃತಿ ನಮ್ಮ ಕ್ರೀಡಾ ಸಂಸ್ಕೃತಿ ಸಂಘ'ದ ವತಿಯಿಂದ ಆಷಾಢ ಮಾಸದ ವೇಗದ ಗಾಳಿಯ ಹಿನ್ನೆಲೆಯಲ್ಲಿ 10ನೇ ವರ್ಷದ ಅದ್ದೂರಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಬೆಳಗ್ಗಿನಿಂದಲೇ ನೂರಾರು ಸ್ಪರ್ಧಿಗಳು ನೂರಾರು ಅಡಿ ಎತ್ತರಕ್ಕೆ ಗಾಳಿಪಟಗಳನ್ನು ಹಾರಿಬಿಟ್ಟು ಸಂಭ್ರಮಿಸಿದರು.

ದೊಡ್ಡಬಳ್ಳಾಪುರದಲ್ಲಿ 'ನಮ್ಮ ಸಂಸ್ಕೃತಿ ನಮ್ಮ ಕ್ರೀಡಾ ಸಂಸ್ಕೃತಿ ಸಂಘ'ದ ವತಿಯಿಂದ ಆಷಾಢ ಮಾಸದ ವೇಗದ ಗಾಳಿಯ ಹಿನ್ನೆಲೆಯಲ್ಲಿ 10ನೇ ವರ್ಷದ ಅದ್ದೂರಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಬೆಳಗ್ಗಿನಿಂದಲೇ ನೂರಾರು ಸ್ಪರ್ಧಿಗಳು ನೂರಾರು ಅಡಿ ಎತ್ತರಕ್ಕೆ ಗಾಳಿಪಟಗಳನ್ನು ಹಾರಿಬಿಟ್ಟು ಸಂಭ್ರಮಿಸಿದರು.

2 / 6
ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು.

ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು.

3 / 6
ವಾರಾಂತ್ಯ ಹಿನ್ನೆಲೆ ಬೆಳಿಗ್ಗೆಯಿಂದ ಸಂಜೆವರೆಗೂ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೈದಾನಕ್ಕೆ ಆಗಮಿಸಿದ್ದರು. ಕಣ್ಮರೆಯಾಗುತ್ತಿರುವ ಸಾಂಪ್ರದಾಯಿಕ ಗಾಳಿಪಟ ಕ್ರೀಡೆಯನ್ನು ಹತ್ತಿರದಿಂದ ಕಂಡು ಆನಂದಿಸಿದ ಯುವಜನತೆ ಹಾಗೂ ಸಾರ್ವಜನಿಕರು ಈ ವರ್ಣರಂಜಿತ ಉತ್ಸವಕ್ಕೆ ಫಿದಾ ಆದರು.

ವಾರಾಂತ್ಯ ಹಿನ್ನೆಲೆ ಬೆಳಿಗ್ಗೆಯಿಂದ ಸಂಜೆವರೆಗೂ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೈದಾನಕ್ಕೆ ಆಗಮಿಸಿದ್ದರು. ಕಣ್ಮರೆಯಾಗುತ್ತಿರುವ ಸಾಂಪ್ರದಾಯಿಕ ಗಾಳಿಪಟ ಕ್ರೀಡೆಯನ್ನು ಹತ್ತಿರದಿಂದ ಕಂಡು ಆನಂದಿಸಿದ ಯುವಜನತೆ ಹಾಗೂ ಸಾರ್ವಜನಿಕರು ಈ ವರ್ಣರಂಜಿತ ಉತ್ಸವಕ್ಕೆ ಫಿದಾ ಆದರು.

4 / 6
ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸಲು ಸೂಕ್ತ ವಾತಾವರಣವಿರುವುದರಿಂದ ಸ್ಪರ್ಧೆ ಕಳೆಗಟ್ಟಿತ್ತು. ಆಕಾಶದಲ್ಲಿ ಅತ್ಯಂತ ಹೆಚ್ಚು ಎತ್ತರ ಹಾಗೂ ಸುದೀರ್ಘ ಸಮಯದವರೆಗೆ ಯಶಸ್ವಿಯಾಗಿ ಗಾಳಿಪಟಗಳನ್ನು ಹಾರಿಸಿದ ಅತ್ಯುತ್ತಮ ಸ್ಪರ್ಧಿಗಳನ್ನು ಗುರುತಿಸಿ, ಆಯೋಜಕರ ವತಿಯಿಂದ ಆಕರ್ಷಕ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸಲು ಸೂಕ್ತ ವಾತಾವರಣವಿರುವುದರಿಂದ ಸ್ಪರ್ಧೆ ಕಳೆಗಟ್ಟಿತ್ತು. ಆಕಾಶದಲ್ಲಿ ಅತ್ಯಂತ ಹೆಚ್ಚು ಎತ್ತರ ಹಾಗೂ ಸುದೀರ್ಘ ಸಮಯದವರೆಗೆ ಯಶಸ್ವಿಯಾಗಿ ಗಾಳಿಪಟಗಳನ್ನು ಹಾರಿಸಿದ ಅತ್ಯುತ್ತಮ ಸ್ಪರ್ಧಿಗಳನ್ನು ಗುರುತಿಸಿ, ಆಯೋಜಕರ ವತಿಯಿಂದ ಆಕರ್ಷಕ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

5 / 6
ದೊಡ್ಡಬಳ್ಳಾಪುರದಲ್ಲಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಗಾಳಿಪಟ ಉತ್ಸವವು ಜಾನಪದ ಕ್ರೀಡಾ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತಿದ್ದು, ಈ ಬಾರಿಯೂ ಯಶಸ್ವಿಯಾಗಿ ನೂರಾರು ಜನರ ಮನಗೆಲ್ಲುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ದೊಡ್ಡಬಳ್ಳಾಪುರದಲ್ಲಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಗಾಳಿಪಟ ಉತ್ಸವವು ಜಾನಪದ ಕ್ರೀಡಾ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತಿದ್ದು, ಈ ಬಾರಿಯೂ ಯಶಸ್ವಿಯಾಗಿ ನೂರಾರು ಜನರ ಮನಗೆಲ್ಲುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

6 / 6
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು