ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

Updated By: ಅಕ್ಷಯ್​ ಪಲ್ಲಮಜಲು​​

Updated on: Apr 07, 2025 | 12:41 PM

ಸಾಮಾನ್ಯವಾಗಿ ಮುಂಜಾವಿಗೆ ಎಷ್ಟು ಪ್ರಾಶಸ್ತವಿದೆಯೋ ಅಷ್ಟೇ ಸಂಜೆ ಅಥವಾ ಮುಸ್ಸಂಜೆ ಹೊತ್ತಿಗೂ ನೀಡಲಾಗುತ್ತದೆ. ಹಾಗಾಗಿ ಆ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಹಿರಿಯರು ಹೇಳುತ್ತಾರೆ. ಜೊತೆಗೆ ಕೆಲವು ವಸ್ತುಗಳನ್ನು ದಾನವಾಗಿಯೂ ನೀಡಬಾರದು. ಅದು ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಹಾಗಾದರೆ ಸಂಜೆ ಸಮಯದಲ್ಲಿ ಯಾವ ವಸ್ತುಗಳನ್ನು ಕೊಡಬಾರದು ಎಂಬುದನ್ನು ತಿಳಿದುಕೊಳ್ಳಿ.

1 / 5
ಸಂಜೆ ಅಥವಾ ಮುಸ್ಸಂಜೆ ಹೊತ್ತಲ್ಲಿ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ಬಿಳಿ ಬಣ್ಣದ ವಸ್ತುಗಳು ಲಕ್ಷ್ಮೀ ದೇವಿಗೆ ಪ್ರೀಯ ಎಂಬ ನಂಬಿಕೆ ಇದೆ. ಹಾಗಾಗಿ ಹಾಲು, ಮೊಸರು, ಉಪ್ಪು ಇತ್ಯಾದಿ ವಸ್ತುಗಳನ್ನು ಯಾರಿಗೂ ದಾನವಾಗಿ ನೀಡಬಾರದು.

ಸಂಜೆ ಅಥವಾ ಮುಸ್ಸಂಜೆ ಹೊತ್ತಲ್ಲಿ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ಬಿಳಿ ಬಣ್ಣದ ವಸ್ತುಗಳು ಲಕ್ಷ್ಮೀ ದೇವಿಗೆ ಪ್ರೀಯ ಎಂಬ ನಂಬಿಕೆ ಇದೆ. ಹಾಗಾಗಿ ಹಾಲು, ಮೊಸರು, ಉಪ್ಪು ಇತ್ಯಾದಿ ವಸ್ತುಗಳನ್ನು ಯಾರಿಗೂ ದಾನವಾಗಿ ನೀಡಬಾರದು.

2 / 5
ಸಂಜೆಯ ಸಮಯದಲ್ಲಿ ಅಪ್ಪಿತಪ್ಪಿಯೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಯಾರಿಗೂ ದಾನವಾಗಿ ನೀಡಬೇಡಿ. ಈ ತರಕಾರಿ ಕೇತು ಗ್ರಹದೊಂದಿಗೆ ಸಂಬಂಧ ಹೊಂದಿದ್ದು, ಕೇತುವನ್ನು ಅಲೌಕಿಕ ಶಕ್ತಿ ಮತ್ತು ಮಾಟ ಮಂತ್ರಕ್ಕೆ ಸಂಬಂಧಿಸಿದ ಗ್ರಹವೆಂದು ಪರಿಗಣಿಸಲಾಗುತ್ತದೆ.

ಸಂಜೆಯ ಸಮಯದಲ್ಲಿ ಅಪ್ಪಿತಪ್ಪಿಯೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಯಾರಿಗೂ ದಾನವಾಗಿ ನೀಡಬೇಡಿ. ಈ ತರಕಾರಿ ಕೇತು ಗ್ರಹದೊಂದಿಗೆ ಸಂಬಂಧ ಹೊಂದಿದ್ದು, ಕೇತುವನ್ನು ಅಲೌಕಿಕ ಶಕ್ತಿ ಮತ್ತು ಮಾಟ ಮಂತ್ರಕ್ಕೆ ಸಂಬಂಧಿಸಿದ ಗ್ರಹವೆಂದು ಪರಿಗಣಿಸಲಾಗುತ್ತದೆ.

3 / 5
ಸಂಜೆ ಸಮಯದಲ್ಲಿ ಹಣದ ವ್ಯವಹಾರ ಮಾಡುವುದನ್ನು ತಪ್ಪಿಸಬೇಕು. ಅಂದರೆ ಈ ಸಮಯದಲ್ಲಿ ಯಾರಿಗಾದರೂ ಸಾಲ ನೀಡುವುದಾಗಲಿ ಅಥವಾ ತೆಗೆದುಕೊಳ್ಳುವುದಾಗಲಿ ಮಾಡಬಾರದು. ಈ ವಿಷಯವನ್ನು ಎಂದಿಗೂ ಮರೆಯಬಾರದು.

ಸಂಜೆ ಸಮಯದಲ್ಲಿ ಹಣದ ವ್ಯವಹಾರ ಮಾಡುವುದನ್ನು ತಪ್ಪಿಸಬೇಕು. ಅಂದರೆ ಈ ಸಮಯದಲ್ಲಿ ಯಾರಿಗಾದರೂ ಸಾಲ ನೀಡುವುದಾಗಲಿ ಅಥವಾ ತೆಗೆದುಕೊಳ್ಳುವುದಾಗಲಿ ಮಾಡಬಾರದು. ಈ ವಿಷಯವನ್ನು ಎಂದಿಗೂ ಮರೆಯಬಾರದು.

4 / 5
ಇನ್ನು ಕೆಲವು ನಂಬಿಕೆಗಳ ಪ್ರಕಾರ ಶುಕ್ರವಾರ ಮತ್ತು ಮಂಗಳವಾರದ ಸಂಜೆ ಸಮಯದಲ್ಲಿ ಅನ್ನವನ್ನು ದಾನವಾಗಿ ನೀಡಬಾರದು ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ.

ಇನ್ನು ಕೆಲವು ನಂಬಿಕೆಗಳ ಪ್ರಕಾರ ಶುಕ್ರವಾರ ಮತ್ತು ಮಂಗಳವಾರದ ಸಂಜೆ ಸಮಯದಲ್ಲಿ ಅನ್ನವನ್ನು ದಾನವಾಗಿ ನೀಡಬಾರದು ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ.

5 / 5
ಈ ಮಾಹಿತಿಯನ್ನು ಡಾ. ವಿಮಲಾ ಗೋಪಾಲ್ ಎನ್ನುವವರು ತಮ್ಮ ಇನ್ಸ್ಟಾ (ಅಂತರ್- ಮನ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ನೀಡಿರುವ ಮಾಹಿತಿಯ ಪ್ರಕಾರ, ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿಗೆ ಪ್ರೀಯವಾದ ವಸ್ತುಗಳು, ತರಕಾರಿ ಮತ್ತು ಹಣವನ್ನು ನೀಡುವುದು ಮತ್ತು ತೆಗೆದುಕೊಳ್ಳುವುದನ್ನು ಮಾಡಬಾರದು ಎಂದಿದ್ದಾರೆ.

ಈ ಮಾಹಿತಿಯನ್ನು ಡಾ. ವಿಮಲಾ ಗೋಪಾಲ್ ಎನ್ನುವವರು ತಮ್ಮ ಇನ್ಸ್ಟಾ (ಅಂತರ್- ಮನ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ನೀಡಿರುವ ಮಾಹಿತಿಯ ಪ್ರಕಾರ, ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿಗೆ ಪ್ರೀಯವಾದ ವಸ್ತುಗಳು, ತರಕಾರಿ ಮತ್ತು ಹಣವನ್ನು ನೀಡುವುದು ಮತ್ತು ತೆಗೆದುಕೊಳ್ಳುವುದನ್ನು ಮಾಡಬಾರದು ಎಂದಿದ್ದಾರೆ.