ಚಾಲಕನ ನಿರ್ಲಕ್ಷ್ಯ: ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Edited By: ಆಯೇಷಾ ಬಾನು

Updated on: Aug 24, 2024 | 7:31 AM

ಬೆಂಗಳೂರಿನ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಏರಿಯಾದಲ್ಲಿ ವಿದ್ಯುತ್ ಕಟ್ ಆಗಿದೆ. ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ.

1 / 5
ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ.

2 / 5

ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಟಿಪ್ಪರ್ ಟಾಪ್​​ಗೆ ವಿದ್ಯುತ್​ ಕಂಬದ ವೈರ್ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿವೆ.

3 / 5

ಸದ್ಯ ಜೆಸಿಬಿ ಮುಖಾಂತರ ವಿದ್ಯುತ್ ಕಂಬ ತೆರವು ಕಾರ್ಯ ನಡೆಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೊಲೀಸರು ಟಿಪ್ಪರ್ ಜಪ್ತಿ ಮಾಡಿ ಚಾಲಕ ಮಣಿ ವಶಕ್ಕೆ ಪಡೆದಿದ್ದಾರೆ.

4 / 5

ಮಧ್ಯರಾತ್ರಿ 1:30ರ ಸುಮಾರಿಗೆ ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

5 / 5

ಮುಖ್ಯರಸ್ತೆಯಲ್ಲೇ ಕಂಬಗಳು ಧರೆಗುರುಳಿದ್ದು ರಸ್ತೆಯ ತುಂಬೆಲ್ಲಾ ಲಾರಿಯಲ್ಲಿದ್ದ ಜಲ್ಲಿ ಹುಡಿ ಬಿದ್ದಿದೆ. ನೆಲಮಂಗಲ ರಿಜಿಸ್ಟ್ರೇಷನ್ ನ ಟಿಪ್ಪರ್ ಸಂಖ್ಯೆ KA 52 B 7301ರಿಂದ ಅವಘಡ ಸಂಭವಿಸಿದೆ.

Published On - 7:30 am, Sat, 24 August 24

Loading...
Unable to load recommendations.
Follow Us