AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು

ನವದೆಹಲಿ, ಜನವರಿ 29: ಪ್ರಸಕ್ತ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆಯನ್ನು ಇಂದು ಸಂಸತ್​ನಲ್ಲಿ ಮಂಡಿಸಲಾಗಿದೆ. ಬಜೆಟ್​ಗೆ ಕೆಲ ದಿನ ಮುನ್ನ ಈ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡುವುದು ವಾಡಿಕೆ. ದೇಶದ ಆರ್ಥಿಕ ಸ್ಥಿತಿಗತಿ ಹೇಗಿದೆ ಎನ್ನುವುದರ ಅಮೂಲಾಗ್ರ ಚಿತ್ರಣವನ್ನು ದೇಶದ ಮುಂದಿಡಲಾಗುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರಾದ ವಿ ಅನಂತನಾಗೇಶ್ವರನ್ ನೇತೃತ್ವದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆ ವತಿಯಿಂದ ಈ ಸಮೀಕ್ಷೆಯನ್ನು ತಯಾರಿಸಲಾಗಿದೆ. ಈ ವರದಿಯಲ್ಲಿ ಮುಖ್ಯಾಂಶಗಳೇನಿವೆ ಎನ್ನುವುದರ ಮಾಹಿತಿ ಇಲ್ಲಿದೆ...

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 29, 2026 | 4:25 PM

Share
ಜಿಡಿಪಿ ದರ: ಸಿಇಎ ನೇತೃತ್ವದಲ್ಲಿ ಸಿದ್ಧಗೊಂಡ, ನಿರ್ಮಲಾ ಸೀತಾರಾಮನ್ ಮಂಡಿಸಿದ 2026ರ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 2025-26ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.4ರಷ್ಟು ಹೆಚ್ಚಬಹುದು. 2026-27ರಲ್ಲಿ ಆರ್ಥಿಕ ಬೆಳವಣಿಗೆ ಶೇ. 6.8-7.2ರ ಶ್ರೇಣಿಯಲ್ಲಿ ಇರಬಹುದು ಎಂದು ವರದಿಯಲ್ಲಿ ಅಂದಾಜು ಮಾಡಲಾಗಿದೆ.

ಜಿಡಿಪಿ ದರ: ಸಿಇಎ ನೇತೃತ್ವದಲ್ಲಿ ಸಿದ್ಧಗೊಂಡ, ನಿರ್ಮಲಾ ಸೀತಾರಾಮನ್ ಮಂಡಿಸಿದ 2026ರ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 2025-26ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.4ರಷ್ಟು ಹೆಚ್ಚಬಹುದು. 2026-27ರಲ್ಲಿ ಆರ್ಥಿಕ ಬೆಳವಣಿಗೆ ಶೇ. 6.8-7.2ರ ಶ್ರೇಣಿಯಲ್ಲಿ ಇರಬಹುದು ಎಂದು ವರದಿಯಲ್ಲಿ ಅಂದಾಜು ಮಾಡಲಾಗಿದೆ.

1 / 5
ಹಣದುಬ್ಬರ ದರ: ಹಣದುಬ್ಬರ ದರ ಭಾರತದಲ್ಲಿ ಇತ್ತೀಚೆಗೆ ಬಹಳ ಕಡಿಮೆಗೊಂಡಿರುವುದನ್ನು ಆರ್ಥಿಕ ಸಮೀಕ್ಷೆಯಲ್ಲಿ ಹೈಲೈಟ್ ಮಾಡಲಾಗಿದೆ. ಆದರೆ, ಪ್ರಸಕ್ತ ವರ್ಷಕ್ಕೆ ಹೋಲಿಸಿದರೆ ಮುಂದಿನ ವರ್ಷ (2026-27) ಹಣದುಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಹೇಳಿರುವ ಈ ಸಮೀಕ್ಷೆಯು, ಈ ಏರಿಕೆ ಚಿಂತೆಪಡುವಷ್ಟಿಲ್ಲ ಎಂದೂ ತಿಳಿಸಿದೆ.

ಹಣದುಬ್ಬರ ದರ: ಹಣದುಬ್ಬರ ದರ ಭಾರತದಲ್ಲಿ ಇತ್ತೀಚೆಗೆ ಬಹಳ ಕಡಿಮೆಗೊಂಡಿರುವುದನ್ನು ಆರ್ಥಿಕ ಸಮೀಕ್ಷೆಯಲ್ಲಿ ಹೈಲೈಟ್ ಮಾಡಲಾಗಿದೆ. ಆದರೆ, ಪ್ರಸಕ್ತ ವರ್ಷಕ್ಕೆ ಹೋಲಿಸಿದರೆ ಮುಂದಿನ ವರ್ಷ (2026-27) ಹಣದುಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಹೇಳಿರುವ ಈ ಸಮೀಕ್ಷೆಯು, ಈ ಏರಿಕೆ ಚಿಂತೆಪಡುವಷ್ಟಿಲ್ಲ ಎಂದೂ ತಿಳಿಸಿದೆ.

2 / 5
ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

3 / 5
ಇನ್ಷೂರೆನ್ಸ್ ಸೆಕ್ಟರ್: ದೇಶದಲ್ಲಿ ಹೆಚ್ಚಿನ ಭಾಗದ ಜನರು ಇನ್ಷೂರೆನ್ಸ್ ವ್ಯಾಪ್ತಿಯಿಂದ ಹೊರಗುಳಿದಿದ್ದಾರೆ. ಇನ್ಷೂರೆನ್ಸ್ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರಿಗೆ ಅದು ವ್ಯಾಪಿಸುತ್ತಿಲ್ಲ ಎನ್ನುವ ಅಂಶವನ್ನು ಆರ್ಥಿಕ ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಡಿಜಿಟಲ್ ಪ್ಲಾಟ್​ಫಾರ್ಮ್​ನಲ್ಲಿ ಇನ್ಷೂರೆನ್ಸ್ ಉತ್ಪನ್ನಗಳ ಮಾರಾಟ ಅಧಿಕಗೊಳ್ಳಬೇಕು ಎನ್ನುವ ಸಲಹೆಯನ್ನೂ ಅದು ನೀಡಿದೆ.

ಇನ್ಷೂರೆನ್ಸ್ ಸೆಕ್ಟರ್: ದೇಶದಲ್ಲಿ ಹೆಚ್ಚಿನ ಭಾಗದ ಜನರು ಇನ್ಷೂರೆನ್ಸ್ ವ್ಯಾಪ್ತಿಯಿಂದ ಹೊರಗುಳಿದಿದ್ದಾರೆ. ಇನ್ಷೂರೆನ್ಸ್ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರಿಗೆ ಅದು ವ್ಯಾಪಿಸುತ್ತಿಲ್ಲ ಎನ್ನುವ ಅಂಶವನ್ನು ಆರ್ಥಿಕ ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಡಿಜಿಟಲ್ ಪ್ಲಾಟ್​ಫಾರ್ಮ್​ನಲ್ಲಿ ಇನ್ಷೂರೆನ್ಸ್ ಉತ್ಪನ್ನಗಳ ಮಾರಾಟ ಅಧಿಕಗೊಳ್ಳಬೇಕು ಎನ್ನುವ ಸಲಹೆಯನ್ನೂ ಅದು ನೀಡಿದೆ.

4 / 5
ಎಫ್​ಡಿಐಗಳ ಹರಿವು: ಸಮೀಕ್ಷೆ ಪ್ರಕಾರ 2025ರ ಏಪ್ರಿಲ್​ನಿಂದ ನವೆಂಬರ್​ವರೆಗಿನ ಅವಧಿಯಲ್ಲಿ ಒಟ್ಟೂ ಎಫ್​ಡಿಐ ಒಳಹರಿವು 64.7 ಬಿಲಿಯನ್ ಡಾಲರ್ ಇದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 55.8 ಬಿಲಿಯನ್ ಡಾಲರ್ ವಿದೇಶೀ ನೇರ ಹೂಡಿಕೆಗಳು ಹರಿದುಬಂದಿದ್ದವು. ನಿವ್ವಳ ಎಫ್​ಡಿಐ ಒಳಹರಿವು ಏಳು ಪಟ್ಟು ಹೆಚ್ಚಾಗಿದೆ ಎಂಬ ಮಾಹಿತಿಯನ್ನು ಆರ್ಥಿಕ ಸಮೀಕ್ಷಾ ವರದಿಯಲ್ಲಿ ಹಂಚಿಕೊಳ್ಳಲಾಗಿದೆ.

ಎಫ್​ಡಿಐಗಳ ಹರಿವು: ಸಮೀಕ್ಷೆ ಪ್ರಕಾರ 2025ರ ಏಪ್ರಿಲ್​ನಿಂದ ನವೆಂಬರ್​ವರೆಗಿನ ಅವಧಿಯಲ್ಲಿ ಒಟ್ಟೂ ಎಫ್​ಡಿಐ ಒಳಹರಿವು 64.7 ಬಿಲಿಯನ್ ಡಾಲರ್ ಇದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 55.8 ಬಿಲಿಯನ್ ಡಾಲರ್ ವಿದೇಶೀ ನೇರ ಹೂಡಿಕೆಗಳು ಹರಿದುಬಂದಿದ್ದವು. ನಿವ್ವಳ ಎಫ್​ಡಿಐ ಒಳಹರಿವು ಏಳು ಪಟ್ಟು ಹೆಚ್ಚಾಗಿದೆ ಎಂಬ ಮಾಹಿತಿಯನ್ನು ಆರ್ಥಿಕ ಸಮೀಕ್ಷಾ ವರದಿಯಲ್ಲಿ ಹಂಚಿಕೊಳ್ಳಲಾಗಿದೆ.

5 / 5
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್