Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಎಂಬುದು ಪಾಠಕ್ಕೆ ಮಾತ್ರವಲ್ಲ, ಜೀವನಕ್ಕೂ ಮುಖ್ಯ: ಸುಧಾಮೂರ್ತಿ

ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯಲ್ಲಿ ಆರಂಭಿಸಲಾಗಿರುವ ವಿನೂತನ ಪ್ರಯೋಗಾಲಯ ಶಿಕ್ಷಣದ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ಇಂತಹ ಪ್ರಯೋಗಾಲಯಗಳು ಆರಂಭವಾಗಬೇಕು ಎಂದು ಸುಧಾಮೂರ್ತಿ ಹೇಳಿದ್ದಾರೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 02, 2022 | 7:17 PM

ಬೆಂಗಳೂರಿನ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯಲ್ಲಿ ಆರಂಭಿಸಲಾಗಿರುವ ವಿನೂತನ ಪ್ರಯೋಗಾಲಯ ಉದ್ಘಾಟನೆಯ ಸಂದರ್ಭದಲ್ಲಿ ಡಾ. ಸುಧಾಮೂರ್ತಿ  ಅವರು ಕೆಲವೊಂದು ಶೈಕ್ಷಣಿಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ  ತಿಳಿಸಿದ್ದಾರೆ

Sudha Murthy

1 / 8
ನಮ್ಮ ಶೈಕ್ಷಣಿಕ ಅಭಿವೃದ್ಧಿ ಉನ್ನತವಾಗಿರಬೇಕು ಅದಕ್ಕಾಗಿ ಶಿಕ್ಷಣ ಎಂದರೆ ಪುಸ್ತಕದಲ್ಲಿರುವುದನ್ನು ಓದಿ ಹೇಳುವುದಷ್ಟೇ ಅಲ್ಲ. ಇದು ಅಂಕಗಳಿಸುವುದಷ್ಟೇ ಸೀಮಿತವಾಗಿರಬಾರದು.  ಮಾನವೀಯ ದೃಷ್ಟಿಕೋನ, ನಂಬಿಕೆ, ಆತ್ಮವಿಶ್ವಾಸ, ಮನೋಬಲ, ತೊಂದರೆಗಳನ್ನು  ನಿಭಾಯಿಸುವುದಕ್ಕಿಂತ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಕಲಿಯಬೇಕು.

Sudha Murthy

2 / 8
Sudha Murthy

ಪ್ರತಿ ಮಗುವು ವಿಭಿನ್ನ ವಿಚಾರದಲ್ಲಿ ಆಸಕ್ತಿ ಹಾಗೂ ಕೌಶಲ್ಯ ಹೊಂದಿರುತ್ತದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಕಲೆ, ಕೌಶಲ್ಯವನ್ನು ಗುರುತಿಸಿ ಗೌರವಿಸಬೇಕು. ಕೇವಲ ಅವರ ಅಂಕಗಳ ಬಗ್ಗೆ ಮಾತ್ರ ಗಮನ ಹರಿಸಬಾರದು. ಆ ಮೂಲಕ ಮಕ್ಕಳನ್ನು ಅವರ ಆಸಕ್ತಿ ವಿಚಾರದಲ್ಲಿ ಮೇಲೆತ್ತಬೇಕು.

3 / 8
Sudha Murthy

ಮಕ್ಕಳಿಗೆ ತಂದೆ ತಾಯಿ, ಶಿಕ್ಷಕರು, ಸಹಪಾಠಿ, ಸಹೋದ್ಯೋಗಿಗಳ ಜತೆಗೆ ಉತ್ತಮ ಸಂಬಂಧ ಹೊಂದುವುದನ್ನು ಕಲಿಸುವುದು ಬಹಳ ಮುಖ್ಯ. ಆಗ ಅವರು ತಮ್ಮ ಸಮಸ್ಯೆಗಳ ಬಗ್ಗೆ ಮನೆಯವರು, ಸ್ನೇಹಿತರು, ಆಪ್ತರ ಜತೆ ಚರ್ಚೆ ಮಾಡಬಹುದು. ಹೀಗಾಗಿ ಉತ್ತಮ ಸಂಬಂಧ ಹೊಂದುವುದು ಬಹಳ ಮುಖ್ಯ.

4 / 8
Sudha Murthy

ಇದು ಗೂಗಲ್ ಕಾಲ, ಇಲ್ಲಿ ಮಕ್ಕಳು ಎಲವನ್ನು ​ ವಿಚಾರಗಳನ್ನು ಗೂಗಲ್​ನಿಂದ ಕಲಿಯುತ್ತಾರೆ. ಈಗಿನ ಮಕ್ಕಳು ಬಹಳ ಬುದ್ಧಿವಂತರಿದ್ದು, ಪಾಠ ಮಾಡುವ ಮುನ್ನ ಬೋಧಕರು ಉತ್ತಮ ತಯಾರಿ ಮಾಡಿಕೊಳ್ಳಬೇಕು.

5 / 8
Sudha Murthy

ನನ್ನ ಹಲವು ವಿದ್ಯಾರ್ಥಿಗಳು ಶಾಲೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದರೂ ಅವರು ಜೀವನದಲ್ಲಿ ಯಶಸ್ಸು ಸಾಧಿಸದಿರುವ ಸಾಕಷ್ಟು ಉದಾಹರಣೆಗಳಿವೆ. ಮಕ್ಕಳ ತಪ್ಪುಗಳನ್ನು ಮೊದಲು ಮನೆಯಲ್ಲಿ ಅದರಲ್ಲೂ ತಾಯಿ ಸರಿಪಡಿಸಬೇಕು.

6 / 8
Sudha Murthy

ನಮ್ಮಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮನೆಯಿಂದ ಕೆಲವೊಂದು ಒತ್ತಡ ಹೆಚ್ಚುತ್ತಿದೆ. ಅದು ಅಂಕ ವಿಷಯದಲ್ಲಿಯಾಗಿದ್ದು ನಮ್ಮ ಮಕ್ಕಳನ್ನು ಅಂಕಕ್ಕೆ ಮಾತ್ರ ಸೀಮಿತಗೊಳಿಸುತ್ತೇವೆ. ಇದೊಂದು ಮಕ್ಕಳಿಗೆ ತುಂಬಾ ಪರಿಣಾಮವನ್ನು ಉಂಟು ಮಾಡುತ್ತದೆ. ಪಠ್ಯಕ್ರಮ ಜೀವನದ ಭಾಗವೇ ಹೊರತು, ಅದೇ ಇಡೀ ಜೀವನವಲ್ಲ.

7 / 8
Sudha Murthy

ಅನೇಕ ಕಾರ್ಯಕ್ರಮಗಳಿಗೆ ನನಗೆ ಆಹ್ವಾನ ಬರುತ್ತದೆ, ಆದರೆ ನಾನು ನನಗೆ ವಿಭಿನ್ನ ಎನಿಸುವ ಕಾರ್ಯಕ್ರಮಗಳನ್ನು ಮಾತ್ರ ಹೋಗುತ್ತೇನೆ. ಐಶ್ವರ್ಯ ನನ್ನ ಬಳಿ ಬಂದು ಈ ಪ್ರಯೋಗಾಲಯದ ಬಗ್ಗೆ ತಿಳಿಸಿದಾಗ ನನಗೆ ಬಹಳ ಇಷ್ಟವಾಯಿತು.

8 / 8

Published On - 7:17 pm, Wed, 2 November 22

Follow us
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ