AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಯಂ ನಿವೃತ್ತಿ ಪಡೆದಿದ್ದ IPS ಭಾಸ್ಕರ್ ರಾವ್ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

TV9 Web
| Edited By: |

Updated on:Apr 04, 2022 | 12:10 PM

Share
ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

1 / 5
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು. ಆಪ್​ಗೆ ಸೇರ್ಪಡೆಗೊಂಡ ಬಳಿಕ ಭಾಸ್ಕರ್ ರಾವ್ ಅರವಿಂದ್ ಕೇಜ್ರೀವಾಲ್​ಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.

ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು. ಆಪ್​ಗೆ ಸೇರ್ಪಡೆಗೊಂಡ ಬಳಿಕ ಭಾಸ್ಕರ್ ರಾವ್ ಅರವಿಂದ್ ಕೇಜ್ರೀವಾಲ್​ಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.

2 / 5
ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದು ಇಂದಿನ ಸಮಾರಂಭದ ಗ್ರೂಪ್ ಫೋಟೊ.

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದು ಇಂದಿನ ಸಮಾರಂಭದ ಗ್ರೂಪ್ ಫೋಟೊ.

3 / 5
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಬಸವ ಅಂಡ್ ಹ್ಯೂಮನ್ ರೈಟ್ಸ್ ಎಂಬ ಪುಸ್ತಕವನ್ನು ಅರವಿಂದ್ ಕೇಜ್ರೀವಾಲ್​ಗೆ ನೀಡಲಾಯಿತು.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಬಸವ ಅಂಡ್ ಹ್ಯೂಮನ್ ರೈಟ್ಸ್ ಎಂಬ ಪುಸ್ತಕವನ್ನು ಅರವಿಂದ್ ಕೇಜ್ರೀವಾಲ್​ಗೆ ನೀಡಲಾಯಿತು.

4 / 5
ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್​ಗೆ ಸೇರ್ಪಡೆಗೊಂಡಿದ್ದಾರೆ.

ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್​ಗೆ ಸೇರ್ಪಡೆಗೊಂಡಿದ್ದಾರೆ.

5 / 5

Published On - 11:45 am, Mon, 4 April 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?