ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ
ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಇಂದು (ಸೆಪ್ಟೆಂಬರ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನ ಅರ್ಪಣೆ ಮಾಡಿದರು. ಈ ಮೂಲಕ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಮೊದಲ ಮುಖ್ಯಮಂತ್ರಿ ಎನಿಸಿಕೊಂಡರು. ಬಾಗಿನ ಅರ್ಪಣೆ ಈ ಹಿನ್ನೆಲೆ ಮುನಿರಾಬಾದನಲ್ಲಿ ಹಬ್ಬದ ವಾತವಾರಣ ಕಂಡು ಬಂತು. ಗ್ರಾಮದ ಮುಖ್ಯ ಬೀದಿಗಳನ್ನು ತಳೀರು ತೋರಣಗಳಿಂದ ಸಿಂಗರಿಸಲಾಗಿದೆ. ಗ್ರಾಮದ ವೃತ್ತಗಳಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ ಕಂಗೊಳಿಸಿದವು.

1 / 7

2 / 7

3 / 7

4 / 7

5 / 7

6 / 7

7 / 7




