AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಮದನ್​ ಕುಮಾರ್​
|

Updated on:Mar 26, 2023 | 5:19 PM

Share
ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1 / 6
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

2 / 6
ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

3 / 6
ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

4 / 6
ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

5 / 6
‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

6 / 6

Published On - 5:19 pm, Sun, 26 March 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ