AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಮದನ್​ ಕುಮಾರ್​
|

Updated on:Mar 26, 2023 | 5:19 PM

Share
ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1 / 6
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

2 / 6
ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

3 / 6
ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

4 / 6
ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

5 / 6
‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

6 / 6

Published On - 5:19 pm, Sun, 26 March 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!