AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಮದನ್​ ಕುಮಾರ್​
|

Updated on:Mar 26, 2023 | 5:19 PM

Share
ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ನಟನೆ, ಮಾಡೆಲಿಂಗ್​ ಸೇರಿದಂತೆ ಸಿನಿಮಾಗೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ತರಬೇತಿ ನೀಡುತ್ತಿರುವ ‘ಫ್ಲೆಮಿಂಗೋ ಸೆಲೆಬ್ರಿಟೀಸ್​ ವರ್ಲ್ಡ್​’ ಸಂಸ್ಥೆ 10 ವರ್ಷಗಳನ್ನು ಪೂರೈಸಿದೆ. ಈ ಖುಷಿಯಲ್ಲಿ ಕನ್ನಡ ಚಿತ್ರರಂಗದ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1 / 6
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ದಶಕದ ಸಂಭ್ರಮ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್​, ಮಮತಾ ದೇವರಾಜ್​ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

2 / 6
ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

ಝಗಮಗಿಸುವ ವೇದಿಕೆಯಲ್ಲಿ ‘ಫ್ಲೆಮಿಂಗೋ’ ಸಂಸ್ಥೆಯ ವಿದ್ಯಾರ್ಥಿಗಳು ಫ್ಯಾಷನ್​ ಶೋ ಮಾಡಿದರು. ಬಳಿಕ ಪ್ರಶಸ್ತಿ ವಿತರಿಸಲಾಯಿತು. ಸ್ಯಾಂಡಲ್​ವುಡ್​ನ ಅನೇಕ ಹಿರಿಯ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.

3 / 6
ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ವಿಜಯ್​ ಕಾಶಿ, ವೈಜಯಂತಿ ಕಾಶಿ, ಸಿಹಿಕಹಿ ಚಂದ್ರು ದಂಪತಿ, ವೈಜನಾಥ್​ ಬಿರಾದಾರ್, ಕಾಮಿನಿಧರನ್​, ಶಿವಧ್ವಜ್, ಭವ್ಯಶ್ರೀ ರೈ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಕರ್ಷಕ ಟ್ರೋಫಿ ಜೊತೆ ಪುನೀತ್ ರಾಜ್​ಕುಮಾರ್​ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

4 / 6
ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಿನಿಮಾ ಪತ್ರಿಕೋದ್ಯಮಕ್ಕೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಾದ ಲಕ್ಷ್ಮೀನಾರಾಯಣ್​ ಬೀರಗಾನಹಳ್ಳಿ, ಶ್ರೀಧರ್​ ಶಿವಮೊಗ್ಗ, ಛಾಯಾಗ್ರಾಹಕರಾದ ಮನೋಹರ್​, ಮೋಕ್ಷೇಂದ್ರ ಅವರಿಗೂ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

5 / 6
‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

‘ಫ್ಲೆಮಿಂಗೋ’ ಸಂಸ್ಥೆಯ ಮುಖ್ಯಸ್ಥ ಧವನ್​ ಸೋಹಾ, ಪ್ರಿನ್ಸಿಪಾಲ್​ ಆಗಿರುವ ಹಿರಿಯ ನಟಿ ಭವ್ಯ, ಪದ್ಮಾ ವಾಸಂತಿ ಮುಂತಾದವರು ಈ ಕಾರ್ಯಕ್ರಮಕ್ಕೆ ಮರುಗು ತಂದರು.

6 / 6

Published On - 5:19 pm, Sun, 26 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ