ಸೆಪ್ಟೆಂಬರ್ 29 ರಂದು ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡೆವೆ ಪೂರ್ಣ ದಿನ ಮೆಟ್ರೋ ರೈಲ್ವೆ ಸೇವೆಗಳು ವ್ಯತ್ಯಯಗೊಳ್ಳಲಿವೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.
ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ ಸೇವೆಯಲ್ಲಿ ವ್ಯತ್ಯಯಗೊಳ್ಳಲಿವೆ.
ಸೆ. 29 ರಂದು ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ದಿನ ಪೂರ್ಣ ರೈಲು ಸೇವೆಗಳು ಇರುವುದಿಲ್ಲ.
ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣ, ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಿಲ್ದಾಣಗಳ ನಡುವೆ ದಿನ ಪೂರ್ತಿ ರೈಲು ಸೇವೆಗಳು ಲಭ್ಯವಿರುತ್ತದೆ.
ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಸದರಿ ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಬಿಎಂಆರ್ಸಿಎಲ್ ಕೋರಿದೆ.
Published On - 7:22 pm, Wed, 27 September 23