ಕಾಂಗ್ರೆಸ್ ನಿಂದ ವಾಪಾಸ್ ಬಿಜೆಪಿ ಸೇರಿ ಈಗ ರಾಜ್ಯಪಾಲರಾದ ವಿಜಯ ಶಂಕರ್ ಯಾರು? ರಾಜಕೀಯ ಹಾದಿ?

ಆಯೇಷಾ ಬಾನು

Updated on: Jul 28, 2024 | 10:59 AM

ಮೈಸೂರಿನ ಮಾಜಿ ಸಂಸದ, ಮಾಜಿ ಸಚಿವ, ಮಾಜಿ ಎಂಎಲ್​ಸಿ ಆಗಿ ಸೇವೆ ಸಲ್ಲಿಸಿರುವ ವಿಜಯ್ ಶಂಕರ್ ಅವರು ಮೇಘಾಲಯದ ರಾಜ್ಯಪಾಲರಾಗಿ ಆಯ್ಕೆ ಆಗಿದ್ದಾರೆ. ಸಿ.ಹೆಚ್‌. ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

1 / 9
ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಹೆಚ್‌. ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಹೆಚ್‌. ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

2 / 9

ರಾಜಸ್ಥಾನ, ತೆಲಂಗಾಣ, ಪಂಜಾಬ್ ಸೇರಿದಂತೆ 10 ರಾಜ್ಯಗಳಿಗೆ ರಾಷ್ಟ್ರಪತಿ ಮುರ್ಮು ಅವರು ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಈ ವೇಳೆ ಮೇಘಾಲಯದ ನೂತನ ರಾಜ್ಯಪಾಲರಾಗಿ ಸಿ.ಹೆಚ್ ವಿಜಯ್​ ಶಂಕರ್ ಅವರನ್ನ ನೇಮಕ ಮಾಡಲಾಗಿದೆ.

3 / 9

ರಾಣೆಬೆನ್ನೂರು ಮೂಲದವರಾದ ವಿಜಯ್​ ಶಂಕರ್ ಅವರು 1956 ಅಕ್ಟೋಬರ್​ 21ರಂದು ಜನಿಸಿದರು. ರಾಜಕೀಯ ಆರಂಭದ ದಿನಗಳಿಂದ ಬಿಜೆಪಿಯಲ್ಲಿದ್ದ ಇವರು, 2017ರಲ್ಲಿ ಕಾಂಗ್ರೆಸ್​​ ಸೇರ್ಪಡೆಗೊಂಡಿದ್ದರು. 2019ರಲ್ಲಿ ಮತ್ತೆ ಬಿಜೆಪಿಗೆ ಸೇರಿಕೊಂಡರು.

4 / 9

1994ರಲ್ಲಿ ಹುಣಸೂರಿನಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿದ್ದರು, ಅಲ್ಲದೇ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಉಳಿದಂತೆ 1988ರಲ್ಲಿ ಮೈಸೂರಿನಿಂದ 12ನೇ ಲೋಕಸಭೆಗೆ ಆಯ್ಕೆಯಾಗಿದ್ದರು.

5 / 9

ವಿಜಯ್ ಶಂಕರ್ 2010ರಲ್ಲಿ ಕರ್ನಾಟಕ ವಿಧಾನ ಪರಿಷತ್ ಗೆ ಆಯ್ಕೆ ಮಾಡಲಾಗಿತ್ತು, 2016ರ ವರೆಗೂ ಎಂಎಲ್​​ಸಿಯಾಗಿ ಕಾರ್ಯನಿರ್ವಹಿಸಿದ್ದರು. 1998, 2004 ರಲ್ಲಿ ವಿಜಯ್‌ ಶಂಕರ್‌ ಅವರು ಬಿಜೆಪಿಯಿಂದ ಸ್ಪರ್ಧಿಸಿ ಮೈಸೂರು ಸಂಸದರಾಗಿ ಆಯ್ಕೆ ಆಗಿದ್ದರು.

6 / 9

ಇನ್ನು 1950 ರ ನಡುವೆ ಮೈಸೂರು ಒಡೆಯರ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿರುದ್ಧ 2004 ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಮರು ಆಯ್ಕೆಯಾದರು.

7 / 9

2014ರಲ್ಲಿ ಹಾಸನದಿಂದ ಸ್ಪರ್ಧೆ ಮಾಡಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ವಿರುದ್ಧ ಸೋಲು ಕಂಡರು. 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಪ್ರತಾಪ್‌ ಸಿಂಹ ವಿರುದ್ಧ ಸೋತಿದ್ದರು.

8 / 9

ವಿಜಯ್ ಶಂಕರ್ ಅವರು ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದು ಅರಣ್ಯ ಇಲಾಖೆ ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

9 / 9

ಸದ್ಯ ರಾಜ್ಯಪಾಲರಾಗಿ ಆಯ್ಕೆ ಆದ ಹಿನ್ನೆಲೆ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣದ ಮೂಲಕ ವಿಜಯ್ ಶಂಕರ್ ಆವರಿಗೆ ಶುಭ ಕೋರಿದ್ದಾರೆ.

Loading...
Unable to load recommendations.
Follow Us