ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Related Photo Gallery
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ




