ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Related Photo Gallery
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್




