AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್‌ನಲ್ಲಿಡುವ ತಪ್ಪು ಮಾಡಬೇಡಿ

ಹಣ್ಣುಗಳು ವಾರಗಟ್ಟಲೆ ತಾಜಾವಾಗಿರಬೇಕೆಂದು ಹಲವರು ಹಣ್ಣುಗಳನ್ನು ಮಾರುಕಟ್ಟೆಯಿಂದ ತಂದ ತಕ್ಷಣವೇ ಫ್ರಿಡ್ಜ್‌ನಲ್ಲಿ ಇಡುತ್ತಾರೆ. ತಜ್ಞರ ಪ್ರಕಾರ, ಕೆಲವೊಂದಷ್ಟು ಹಣ್ಣುಗಳನ್ನು ರೆಫ್ರಿಜರೇಟರ್‌ನಲ್ಲಿ ಇಡಬಾರಂತೆ. ಹೀಗೆ ಮಾಡುವುದರಿಂದ ಅವುಗಳ ರುಚಿ ಕಡಿಮೆಯಾಗುವುದರ ಜೊತೆಗೆ ಅವುಗಳ ಪೋಷಕಾಂಶಗಳು ಸಹ ಕಡಿಮೆಯಾಗಬಹುದು. ಹಾಗಾಗಿ ಈ ಕೆಲವು ಹಣ್ಣುಗಳನ್ನು ತಪ್ಪಿಯೂ ಫ್ರಿಡ್ಜ್‌ನಲ್ಲಿ ಇಡಲು ಹೋಗಬೇಡಿ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 15, 2025 | 3:54 PM

Share
ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಡ್ಜ್‌ನಲ್ಲಿ ಇಡಬಾರದು. ರೆಫ್ರಿಜರೇಟರ್‌ನಲ್ಲಿ ಇಟ್ಟಾಗ, ಬಾಳೆಹಣ್ಣಿನ ಸಿಪ್ಪೆ ಶೀಘ್ರವೇ ಕಪ್ಪು ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತವೆ ಮತ್ತು ಅವುಗಳ ರುಚಿ ಕೂಡಾ ಬದಲಾಗಲು ಪ್ರಾರಂಭಿಸುತ್ತದೆ. ಬಾಳೆಹಣ್ಣನ್ನು ಶೀತ ಪರಿಸರದಲ್ಲಿ ಇಟ್ಟರೆ, ಅವುಗಳು ಬೇಗನೆ ಕೆಡಲು ಪ್ರಾರಂಭಿಸುತ್ತವೆ.

ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಡ್ಜ್‌ನಲ್ಲಿ ಇಡಬಾರದು. ರೆಫ್ರಿಜರೇಟರ್‌ನಲ್ಲಿ ಇಟ್ಟಾಗ, ಬಾಳೆಹಣ್ಣಿನ ಸಿಪ್ಪೆ ಶೀಘ್ರವೇ ಕಪ್ಪು ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತವೆ ಮತ್ತು ಅವುಗಳ ರುಚಿ ಕೂಡಾ ಬದಲಾಗಲು ಪ್ರಾರಂಭಿಸುತ್ತದೆ. ಬಾಳೆಹಣ್ಣನ್ನು ಶೀತ ಪರಿಸರದಲ್ಲಿ ಇಟ್ಟರೆ, ಅವುಗಳು ಬೇಗನೆ ಕೆಡಲು ಪ್ರಾರಂಭಿಸುತ್ತವೆ.

1 / 5
ಕಲ್ಲಂಗಡಿಯಲ್ಲಿ ನೀರಿನ ಅಂಶ ಹೇರಳವಾಗಿರುವುದರಿಂದ, ಜನ ಬೇಸಿಗೆಯಲ್ಲಿ ಹೆಚ್ಚಾಗಿ ಈ ಹಣ್ಣನ್ನೇ ತಿನ್ನಲು ಇಷ್ಟಪಡುತ್ತಾರೆ. ಮತ್ತು ಮಾರುಕಟ್ಟೆಯಿಂದ ಖರೀದಿಸಿದ ಈ ಹಣ್ಣನ್ನು ಹೆಚ್ಚಿನವರು  ತಂಪಾಗಿಸಲು ಫ್ರಿಜ್‌ನಲ್ಲಿ ಇಡುತ್ತಾರೆ. ಹೀಗೆ ಈ ಹಣ್ಣನ್ನು ರೆಫ್ರಿಜರೇಟರ್‌ನಲ್ಲಿ ಇಡುವುದರಿಂದ ಕಲ್ಲಂಗಡಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಕಡಿಮೆಯಾಗುತ್ತವೆ ಮತ್ತು ಅದರ ಪೌಷ್ಟಿಕಾಂಶದ ಮೌಲ್ಯವೂ ಕಡಿಮೆಯಾಗುತ್ತದೆ. ಇದಕ್ಕಾಗಿಯೇ ತಜ್ಞರು ಕಲ್ಲಂಗಡಿ ಹಣ್ಣನ್ನು ರೆಫ್ರಿಜರೇಟರ್‌ನಲ್ಲಿ ಇಡದಂತೆ ಸಲಹೆ ನೀಡುತ್ತಾರೆ.

ಕಲ್ಲಂಗಡಿಯಲ್ಲಿ ನೀರಿನ ಅಂಶ ಹೇರಳವಾಗಿರುವುದರಿಂದ, ಜನ ಬೇಸಿಗೆಯಲ್ಲಿ ಹೆಚ್ಚಾಗಿ ಈ ಹಣ್ಣನ್ನೇ ತಿನ್ನಲು ಇಷ್ಟಪಡುತ್ತಾರೆ. ಮತ್ತು ಮಾರುಕಟ್ಟೆಯಿಂದ ಖರೀದಿಸಿದ ಈ ಹಣ್ಣನ್ನು ಹೆಚ್ಚಿನವರು ತಂಪಾಗಿಸಲು ಫ್ರಿಜ್‌ನಲ್ಲಿ ಇಡುತ್ತಾರೆ. ಹೀಗೆ ಈ ಹಣ್ಣನ್ನು ರೆಫ್ರಿಜರೇಟರ್‌ನಲ್ಲಿ ಇಡುವುದರಿಂದ ಕಲ್ಲಂಗಡಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಕಡಿಮೆಯಾಗುತ್ತವೆ ಮತ್ತು ಅದರ ಪೌಷ್ಟಿಕಾಂಶದ ಮೌಲ್ಯವೂ ಕಡಿಮೆಯಾಗುತ್ತದೆ. ಇದಕ್ಕಾಗಿಯೇ ತಜ್ಞರು ಕಲ್ಲಂಗಡಿ ಹಣ್ಣನ್ನು ರೆಫ್ರಿಜರೇಟರ್‌ನಲ್ಲಿ ಇಡದಂತೆ ಸಲಹೆ ನೀಡುತ್ತಾರೆ.

2 / 5
ಹಣ್ಣುಗಳ ರಾಜ ಮಾವನ್ನು ರೆಫ್ರಿಜರೇಟರ್‌ನಲ್ಲಿ ಇಡುವ ತಪ್ಪು ಮಾಡಬೇಡಿ, ಏಕೆಂದರೆ ಶೀತ ತಾಪಮಾನವು ಮಾವಿನ ಹಣ್ಣಿನ ರುಚಿ ಮತ್ತು ವಿನ್ಯಾಸದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ರೆಫ್ರಿಜರೇಟರ್‌ನಲ್ಲಿ ಇಡುವುದರಿಂದ ಮಾವಿನ ಹಣ್ಣಿನ ಮೇಲೆ ಕಪ್ಪು ಕಲೆಗಳು ಮೂಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಹಣ್ಣನ್ನು ಫ್ರಿಡ್ಜ್‌ನಲ್ಲಿ ಇಡಬೇಡಿ.

ಹಣ್ಣುಗಳ ರಾಜ ಮಾವನ್ನು ರೆಫ್ರಿಜರೇಟರ್‌ನಲ್ಲಿ ಇಡುವ ತಪ್ಪು ಮಾಡಬೇಡಿ, ಏಕೆಂದರೆ ಶೀತ ತಾಪಮಾನವು ಮಾವಿನ ಹಣ್ಣಿನ ರುಚಿ ಮತ್ತು ವಿನ್ಯಾಸದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ರೆಫ್ರಿಜರೇಟರ್‌ನಲ್ಲಿ ಇಡುವುದರಿಂದ ಮಾವಿನ ಹಣ್ಣಿನ ಮೇಲೆ ಕಪ್ಪು ಕಲೆಗಳು ಮೂಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಹಣ್ಣನ್ನು ಫ್ರಿಡ್ಜ್‌ನಲ್ಲಿ ಇಡಬೇಡಿ.

3 / 5
ಅನಾನಸ್‌ ಹಣ್ಣನ್ನು ಕೂಡಾ ರೆಫ್ರಿಜರೇಟರ್‌ನಲ್ಲಿ ಇಡಬಾರದು. ಫ್ರಿಡ್ಜ್‌ನಲ್ಲಿ ಇಡುವುದರಿಂದ ಈ ಹಣ್ಣಿನ ರುಚಿ ಕೆಡುತ್ತದೆ ಮತ್ತು ಶೀಘ್ರವೇ ಹಣ್ಣು ಮೃದುವಾಗುತ್ತದೆ.  ಜೊತೆಗೆ ಅದರ ನೈಸರ್ಗಿಕ ಪರಿಮಳ ಸಹ ಹೋಗುತ್ತದೆ. ಹಾಗಾಗಿ ಕೋಣೆಯ ಉಷ್ಣಾಂಶದಲ್ಲಿ ಅನಾನಸ್ ಹಣ್ಣನ್ನು ಇಡುವುದರಿಂದ ಅದರ ತಾಜಾತನವನ್ನು ಕಾಪಾಡಿಕೊಳ್ಳಬಹುದು.

ಅನಾನಸ್‌ ಹಣ್ಣನ್ನು ಕೂಡಾ ರೆಫ್ರಿಜರೇಟರ್‌ನಲ್ಲಿ ಇಡಬಾರದು. ಫ್ರಿಡ್ಜ್‌ನಲ್ಲಿ ಇಡುವುದರಿಂದ ಈ ಹಣ್ಣಿನ ರುಚಿ ಕೆಡುತ್ತದೆ ಮತ್ತು ಶೀಘ್ರವೇ ಹಣ್ಣು ಮೃದುವಾಗುತ್ತದೆ. ಜೊತೆಗೆ ಅದರ ನೈಸರ್ಗಿಕ ಪರಿಮಳ ಸಹ ಹೋಗುತ್ತದೆ. ಹಾಗಾಗಿ ಕೋಣೆಯ ಉಷ್ಣಾಂಶದಲ್ಲಿ ಅನಾನಸ್ ಹಣ್ಣನ್ನು ಇಡುವುದರಿಂದ ಅದರ ತಾಜಾತನವನ್ನು ಕಾಪಾಡಿಕೊಳ್ಳಬಹುದು.

4 / 5
ಲಿಚಿ ಬೇಸಿಗೆಯಲ್ಲಿ ಹೇರಳವಾಗಿ ಸಿಗುವುದರಿಂದ ಸಾಕಷ್ಟು ಜನ ಈ ಹಣ್ಣನ್ನು ಖರೀದಿಸುತ್ತಾರೆ. ಇವುಗಳನ್ನು ಖರೀದಿಸಿದ ನಂತರ ಅವುಗಳನ್ನು ವಾರಗಟ್ಟಲೆ ತಾಜಾವಾಗಿರಿಸಲು ರೆಫ್ರಿಜರೇಟರ್‌ನಲ್ಲಿ ಇಡುತ್ತಾರೆ. ಹೀಗೆ ಮಾಡುವುದರಿಂದ ಲಿಚಿ ಹಣ್ಣು ಒಳಗಿನಿಂದ ಹಾಳಗುತ್ತದೆ. ಇದಲ್ಲದೆ ಸೇಬು, ಪಪ್ಪಾಯ, ಅವಕಾಡೊ, ಸಿಟ್ರಿಸ್‌ ಹಣ್ಣುಗಳನ್ನು ಫ್ರಿಡ್ಜ್‌ನಲ್ಲಿ ಇಡಬಾರದು.

ಲಿಚಿ ಬೇಸಿಗೆಯಲ್ಲಿ ಹೇರಳವಾಗಿ ಸಿಗುವುದರಿಂದ ಸಾಕಷ್ಟು ಜನ ಈ ಹಣ್ಣನ್ನು ಖರೀದಿಸುತ್ತಾರೆ. ಇವುಗಳನ್ನು ಖರೀದಿಸಿದ ನಂತರ ಅವುಗಳನ್ನು ವಾರಗಟ್ಟಲೆ ತಾಜಾವಾಗಿರಿಸಲು ರೆಫ್ರಿಜರೇಟರ್‌ನಲ್ಲಿ ಇಡುತ್ತಾರೆ. ಹೀಗೆ ಮಾಡುವುದರಿಂದ ಲಿಚಿ ಹಣ್ಣು ಒಳಗಿನಿಂದ ಹಾಳಗುತ್ತದೆ. ಇದಲ್ಲದೆ ಸೇಬು, ಪಪ್ಪಾಯ, ಅವಕಾಡೊ, ಸಿಟ್ರಿಸ್‌ ಹಣ್ಣುಗಳನ್ನು ಫ್ರಿಡ್ಜ್‌ನಲ್ಲಿ ಇಡಬಾರದು.

5 / 5
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ