- Kannada News Photo gallery Gadag diristic Shirahatti taluk Srimangad village Holalamma temple devi gold theft
ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ತೂಕದ ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
Updated on:Nov 30, 2023 | 7:15 PM

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

ಹೊಳಲಮ್ಮ ದೇವಸ್ಥಾನಕ್ಕೆ ಶಿರಹಟ್ಟಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳಲಮ್ಮ ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ನೀಡಿದ್ದಾಳೆ ಎಂದು ಸ್ಥಳೀಯ ಇತಿಹಾಸ ಹೇಳುತ್ತವೆ.

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಈ ಸ್ಥಳ ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ದಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ.
Published On - 12:25 pm, Thu, 30 November 23

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...
Read More



