AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ 121 ಕೆಜಿಯ ಬೆಳ್ಳಿ ಗಣೇಶ ಪ್ರತಿಷ್ಠಾಪನೆ, ಫೋಟೋಸ್​​ ನೋಡಿ

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ. ಹುಬ್ಬಳ್ಳಿಯಲ್ಲಿ ಮೂರು ಕಡೆ ಬೆಳ್ಳಿ ಗಣೇಶ ವಿಗ್ರಹಗಳನ್ನು ಕೂಡಿಸಲಾಗುತ್ತದೆ. ಫೋಟೋಸ್​ ನೋಡಿ.

ವಿವೇಕ ಬಿರಾದಾರ
|

Updated on: Sep 11, 2024 | 6:00 AM

Share
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ಮತ್ತು ಗಣಪತಿ ಪೆಂಡಲ್​ಗಳಲ್ಲಿ ಪ್ರದರ್ಶಿಸುವ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ.

1 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯ ಗಣೇಶೋತ್ಸವದಲ್ಲಿ ವಿಶೇಷವಾಗಿ ಮೂರು ಕಡೆ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತದೆ. ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಸರಾಫಗಟ್ಟಿ, ಶೀಲವಂತರ ಓಣಿ, ಶಿಂಪಿಗಲ್ಲಿಯಲ್ಲಿ ಬೆಳ್ಳಿ ಗಣಪನನ್ನು ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಈ ಗಣಪತಿಗಳ ಫೋಟೋಸ್​ ಇಲ್ಲಿವೆ.

2 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಗಿದ್ದು ಸರಾಫಗಟ್ಟಿಯಲ್ಲಿ. ಕಳೆದ 65 ವರ್ಷಗಳಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿ ಕಳೆದ 14 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಸ್ಥಾಪಿಸಲಾಗುತ್ತಿದೆ. ಮೂಷಿಕ ಸೇರಿ 121 ಕೆಜಿ ಬೆಳ್ಳಿ ಗಣಪತಿಯನ್ನು ಸ್ಥಾಪಿಸಲಾಗಿದೆ. ಇಲ್ಲಿ ರಂಗಕರ್ಮಿಗಳಿಂದ ನಾಟಕವನ್ನು ಆಯೋಜನೆ ಮಾಡಲಾಗಿದೆ.

3 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ವರಸಿದ್ದಿ ವಿನಾಯಕ ಮಂಡಳಿಯಿಂದ ಶೀಲವಂತರ ಓಣಿಯಲ್ಲಿ ಕಳೆದ 44 ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 24 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಪ್ರಭಾವಳಿ ಸೇರಿದಂತೆ ಒಟ್ಟು 50 ಕೆಜಿಯ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶನಿಗೆ 1.25ಕೆಜಿಯ ಬಂಗಾರದ ಆರಭರಣಗಳಿಂದ ಅಲಂಕಾರ ಮಾಡಲಾಗಿದೆ. ಶ್ರೀ ವರಸಿದ್ದಿ ವಿನಾಯಕ ಮಂಡಳಿವತಿಯಿಂದ ಸಾಮಾಜಿಕ ಚಟುವಟಿಕೆಗಳು ಕೂಡ ನಡೆಯುತ್ತವೆ. ಈ ಬಾರಿ ಇಲ್ಲಿ ಶ್ರೀ ಸಿದ್ದಾರೂಢರ ಬಾಲ ಲೀಲೆಯನ್ನು ಪ್ರದರ್ಶಿಸಲಾಗುತ್ತಿದೆ.

4 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ಮಾರುತಿ ಯುವಕ ಸೇವಾ ಸಂಘದಿಂದ ಶಿಂಪಿಗಲ್ಲಿಯಲ್ಲಿ ಕಳೆದ 60 ವರ್ಷದಿಂದ ಇಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 18 ವರ್ಷಗಳಿಂದ ಇಲ್ಲಿ 51 ಕೆಜಿಯ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಈ ಬಾರಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರದರ್ಶನ ಇರಲಿದೆ.

5 / 5
Follow Us
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ