ಹುಬ್ಬಳ್ಳಿಯಲ್ಲಿ 121 ಕೆಜಿಯ ಬೆಳ್ಳಿ ಗಣೇಶ ಪ್ರತಿಷ್ಠಾಪನೆ, ಫೋಟೋಸ್​​ ನೋಡಿ

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ. ಹುಬ್ಬಳ್ಳಿಯಲ್ಲಿ ಮೂರು ಕಡೆ ಬೆಳ್ಳಿ ಗಣೇಶ ವಿಗ್ರಹಗಳನ್ನು ಕೂಡಿಸಲಾಗುತ್ತದೆ. ಫೋಟೋಸ್​ ನೋಡಿ.

|

Updated on: Sep 11, 2024 | 6:00 AM

Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ಮತ್ತು ಗಣಪತಿ ಪೆಂಡಲ್​ಗಳಲ್ಲಿ ಪ್ರದರ್ಶಿಸುವ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ.

1 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯ ಗಣೇಶೋತ್ಸವದಲ್ಲಿ ವಿಶೇಷವಾಗಿ ಮೂರು ಕಡೆ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತದೆ. ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಸರಾಫಗಟ್ಟಿ, ಶೀಲವಂತರ ಓಣಿ, ಶಿಂಪಿಗಲ್ಲಿಯಲ್ಲಿ ಬೆಳ್ಳಿ ಗಣಪನನ್ನು ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಈ ಗಣಪತಿಗಳ ಫೋಟೋಸ್​ ಇಲ್ಲಿವೆ.

2 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಗಿದ್ದು ಸರಾಫಗಟ್ಟಿಯಲ್ಲಿ. ಕಳೆದ 65 ವರ್ಷಗಳಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿ ಕಳೆದ 14 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಸ್ಥಾಪಿಸಲಾಗುತ್ತಿದೆ. ಮೂಷಿಕ ಸೇರಿ 121 ಕೆಜಿ ಬೆಳ್ಳಿ ಗಣಪತಿಯನ್ನು ಸ್ಥಾಪಿಸಲಾಗಿದೆ. ಇಲ್ಲಿ ರಂಗಕರ್ಮಿಗಳಿಂದ ನಾಟಕವನ್ನು ಆಯೋಜನೆ ಮಾಡಲಾಗಿದೆ.

3 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ವರಸಿದ್ದಿ ವಿನಾಯಕ ಮಂಡಳಿಯಿಂದ ಶೀಲವಂತರ ಓಣಿಯಲ್ಲಿ ಕಳೆದ 44 ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 24 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಪ್ರಭಾವಳಿ ಸೇರಿದಂತೆ ಒಟ್ಟು 50 ಕೆಜಿಯ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶನಿಗೆ 1.25ಕೆಜಿಯ ಬಂಗಾರದ ಆರಭರಣಗಳಿಂದ ಅಲಂಕಾರ ಮಾಡಲಾಗಿದೆ. ಶ್ರೀ ವರಸಿದ್ದಿ ವಿನಾಯಕ ಮಂಡಳಿವತಿಯಿಂದ ಸಾಮಾಜಿಕ ಚಟುವಟಿಕೆಗಳು ಕೂಡ ನಡೆಯುತ್ತವೆ. ಈ ಬಾರಿ ಇಲ್ಲಿ ಶ್ರೀ ಸಿದ್ದಾರೂಢರ ಬಾಲ ಲೀಲೆಯನ್ನು ಪ್ರದರ್ಶಿಸಲಾಗುತ್ತಿದೆ.

4 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ಮಾರುತಿ ಯುವಕ ಸೇವಾ ಸಂಘದಿಂದ ಶಿಂಪಿಗಲ್ಲಿಯಲ್ಲಿ ಕಳೆದ 60 ವರ್ಷದಿಂದ ಇಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 18 ವರ್ಷಗಳಿಂದ ಇಲ್ಲಿ 51 ಕೆಜಿಯ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಈ ಬಾರಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರದರ್ಶನ ಇರಲಿದೆ.

5 / 5
Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು