Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ 121 ಕೆಜಿಯ ಬೆಳ್ಳಿ ಗಣೇಶ ಪ್ರತಿಷ್ಠಾಪನೆ, ಫೋಟೋಸ್​​ ನೋಡಿ

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ. ಹುಬ್ಬಳ್ಳಿಯಲ್ಲಿ ಮೂರು ಕಡೆ ಬೆಳ್ಳಿ ಗಣೇಶ ವಿಗ್ರಹಗಳನ್ನು ಕೂಡಿಸಲಾಗುತ್ತದೆ. ಫೋಟೋಸ್​ ನೋಡಿ.

ವಿವೇಕ ಬಿರಾದಾರ
|

Updated on: Sep 11, 2024 | 6:00 AM

Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ಮತ್ತು ಗಣಪತಿ ಪೆಂಡಲ್​ಗಳಲ್ಲಿ ಪ್ರದರ್ಶಿಸುವ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ.

1 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯ ಗಣೇಶೋತ್ಸವದಲ್ಲಿ ವಿಶೇಷವಾಗಿ ಮೂರು ಕಡೆ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತದೆ. ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಸರಾಫಗಟ್ಟಿ, ಶೀಲವಂತರ ಓಣಿ, ಶಿಂಪಿಗಲ್ಲಿಯಲ್ಲಿ ಬೆಳ್ಳಿ ಗಣಪನನ್ನು ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಈ ಗಣಪತಿಗಳ ಫೋಟೋಸ್​ ಇಲ್ಲಿವೆ.

2 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಗಿದ್ದು ಸರಾಫಗಟ್ಟಿಯಲ್ಲಿ. ಕಳೆದ 65 ವರ್ಷಗಳಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿ ಕಳೆದ 14 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಸ್ಥಾಪಿಸಲಾಗುತ್ತಿದೆ. ಮೂಷಿಕ ಸೇರಿ 121 ಕೆಜಿ ಬೆಳ್ಳಿ ಗಣಪತಿಯನ್ನು ಸ್ಥಾಪಿಸಲಾಗಿದೆ. ಇಲ್ಲಿ ರಂಗಕರ್ಮಿಗಳಿಂದ ನಾಟಕವನ್ನು ಆಯೋಜನೆ ಮಾಡಲಾಗಿದೆ.

3 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ವರಸಿದ್ದಿ ವಿನಾಯಕ ಮಂಡಳಿಯಿಂದ ಶೀಲವಂತರ ಓಣಿಯಲ್ಲಿ ಕಳೆದ 44 ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 24 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಪ್ರಭಾವಳಿ ಸೇರಿದಂತೆ ಒಟ್ಟು 50 ಕೆಜಿಯ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶನಿಗೆ 1.25ಕೆಜಿಯ ಬಂಗಾರದ ಆರಭರಣಗಳಿಂದ ಅಲಂಕಾರ ಮಾಡಲಾಗಿದೆ. ಶ್ರೀ ವರಸಿದ್ದಿ ವಿನಾಯಕ ಮಂಡಳಿವತಿಯಿಂದ ಸಾಮಾಜಿಕ ಚಟುವಟಿಕೆಗಳು ಕೂಡ ನಡೆಯುತ್ತವೆ. ಈ ಬಾರಿ ಇಲ್ಲಿ ಶ್ರೀ ಸಿದ್ದಾರೂಢರ ಬಾಲ ಲೀಲೆಯನ್ನು ಪ್ರದರ್ಶಿಸಲಾಗುತ್ತಿದೆ.

4 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ಮಾರುತಿ ಯುವಕ ಸೇವಾ ಸಂಘದಿಂದ ಶಿಂಪಿಗಲ್ಲಿಯಲ್ಲಿ ಕಳೆದ 60 ವರ್ಷದಿಂದ ಇಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 18 ವರ್ಷಗಳಿಂದ ಇಲ್ಲಿ 51 ಕೆಜಿಯ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಈ ಬಾರಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರದರ್ಶನ ಇರಲಿದೆ.

5 / 5
Follow us
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ