AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್​​ ನಂದು’: ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ, ಫೋಟೋಸ್​ ನೋಡಿ

ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ವಿಭಿನ್ನ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ರಾಜಗೋಪಾಲ್​ ಎಂಬುವವರು ಸಿದ್ಧಮಾಡಿರುವ ಆರ್​​ಸಿಬಿ ಕಪ್​ ಹಿಡುಕೊಂಡಿರುವ ಗಣೇಶ ಎಲ್ಲರ ಗಮನಸೆಳೆಯುತ್ತಿದೆ. ಅದರ ಫೋಟೋಸ್​ ಇಲ್ಲಿದೆ.

ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 18, 2025 | 10:23 AM

Share
ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

1 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

2 / 6
ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

3 / 6
ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

4 / 6
ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

5 / 6
ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ