AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್​​ ನಂದು’: ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ, ಫೋಟೋಸ್​ ನೋಡಿ

ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ವಿಭಿನ್ನ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ರಾಜಗೋಪಾಲ್​ ಎಂಬುವವರು ಸಿದ್ಧಮಾಡಿರುವ ಆರ್​​ಸಿಬಿ ಕಪ್​ ಹಿಡುಕೊಂಡಿರುವ ಗಣೇಶ ಎಲ್ಲರ ಗಮನಸೆಳೆಯುತ್ತಿದೆ. ಅದರ ಫೋಟೋಸ್​ ಇಲ್ಲಿದೆ.

ನವೀನ್ ಕುಮಾರ್ ಟಿ
| Edited By: |

Updated on: Aug 18, 2025 | 10:23 AM

Share
ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

1 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

2 / 6
ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

3 / 6
ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

4 / 6
ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

5 / 6
ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

6 / 6
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್